ನವದೆಹಲಿ: ಟಿ20 ವಿಶ್ವಕಪ್ನಲ್ಲಿ ಈ ಆಟಗಾರನನ್ನು ಟೀಂ ಇಂಡಿಯಾ ತಂಡದಲ್ಲಿ ರೋಹಿತ್ ಶರ್ಮಾಗೆ ಜೊತೆಯಾಗಿ ಬ್ಯಾಟಿಂಗ್ ಮಾಡಲು ಕಳುಹಿಸಬೇಕು ಎಂದು ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.
ಪ್ರಸಕ್ತ ಐಪಿಎಲ್ನಲ್ಲಿ ಭರ್ಜರಿ ಫಾರ್ಮ್ನೊಂದಿಗೆ ಬ್ಯಾಟ್ ಬೀಸುತ್ತಿರುವ ವಿರಾಟ್ ಕೊಹ್ಲಿ ಕುರಿತು ದಾದಾ ಈ ಹೇಳಿಕೆ ನೀಡಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ಸೌರವ್ ಗಂಗೂಲಿ ನಡುವೆ ಯಾವುದು ಸರಿಯಿಲ್ಲ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಜಗಜ್ಜಾಹಿರಾಗಿರುವ ವಿಷಯವಾಗಿದೆ. ಆಗಿದ್ದರೂ ದಾದಾ ವಿರಾಟ್ ಪರ ಬ್ಯಾಟ್ ಬೀಸಿರುವುದು ಅಚ್ಚರಿಗೆ ಕಾರಣವಾಗಿದೆ.
ಖಾಸಗಿ ಕಾರ್ಯಕ್ರಮವೊಂದಲ್ಲಿ ಮಾತನಾಡಿರುವ ಗಂಗೂಲಿ, ವಿರಾಟ್ ಬ್ಯಾಟಿಂಗ್ ನಲ್ಲಿ ಅತ್ಯುತ್ತಮವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಐಪಿಎಲ್ನಲ್ಲಿ ಕೆಲವು ಇನ್ನಿಂಗ್ಸ್ಗಳು ಅದ್ಭುತವಾಗಿ ಮೂಡಿ ಬಂದಿದೆ. ಅವರ ಈ ಫಾರ್ಮ್ ಹೀಗೆ ಮುಂದುವರೆಯಲಿದ್ದು, ಟಿ20 ವಿಶ್ವಕಪ್ನಲ್ಲಿ ಅವರನ್ನು ಆರಂಭಿಕರನ್ನಾಗಿ ಕಣಕ್ಕಿಳಿಸುವುದು ಉತ್ತಮ ಎಂದು ಹೇಳಿದ್ದಾರೆ.
ಜೊತೆಗೆ ವಿಶ್ವಕಪ್ ತಂಡ ಆಯ್ಕೆ ಬಗ್ಗೆಯೂ ಮೆಚ್ಚುಗೆ ಮಾತುಗಳನ್ನಾಡಿರುವ ಅವರು, ಬ್ಯಾಟಂಗ್, ಬೌಲಿಂಗ್ ಸೇರಿದಂತೆ ಗಟ್ಟಿಯಾದ ಉತ್ತಮ ತಂಡವನ್ನೇ ಕಟ್ಟಲಾಗಿದೆ. ಈ ತಂಡದ ಸಹಾಯದಿಂದ 17 ವರ್ಷಗಳ ಟ್ರೋಫಿ ಬರ ನೀಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಐಪಿಎಲ್ನಲ್ಲಿ ಈವರೆಗೆ ವಿರಾಟ್ 12 ಪಂದ್ಯಗಳನ್ನಾಡಿದ್ದು, 70.44ರ ಸರಾಸರಿಯಲ್ಲಿ 634 ರನ್ ಬಾರಿಸಿ ಟೂರ್ನಿಯಲ್ಲಿ ಲೀಡಿಂಗ್ ರನ್ ಸ್ಕೋರರ್ ಆಗಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…