ಕ್ರೀಡೆ

ಟಿ20 ವಿಶ್ವಕಪ್‌ನಲ್ಲಿ ರೋಹಿತ್‌ ಜೊತೆಯಾಗಿ ಇವರು ಆಡಬೇಕು: ಅಚ್ಚರಿಯ ಆಯ್ಕೆ ಮಾಡಿದ ದಾದಾ!

ನವದೆಹಲಿ: ಟಿ20 ವಿಶ್ವಕಪ್‌ನಲ್ಲಿ ಈ ಆಟಗಾರನನ್ನು ಟೀಂ ಇಂಡಿಯಾ ತಂಡದಲ್ಲಿ ರೋಹಿತ್‌ ಶರ್ಮಾಗೆ ಜೊತೆಯಾಗಿ ಬ್ಯಾಟಿಂಗ್‌ ಮಾಡಲು ಕಳುಹಿಸಬೇಕು ಎಂದು ಟೀಂ ಇಂಡಿಯಾದ ಮಾಜಿ ನಾಯಕ ಸೌರವ್‌ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

ಪ್ರಸಕ್ತ ಐಪಿಎಲ್‌ನಲ್ಲಿ ಭರ್ಜರಿ ಫಾರ್ಮ್‌ನೊಂದಿಗೆ ಬ್ಯಾಟ್‌ ಬೀಸುತ್ತಿರುವ ವಿರಾಟ್‌ ಕೊಹ್ಲಿ ಕುರಿತು ದಾದಾ ಈ ಹೇಳಿಕೆ ನೀಡಿದ್ದಾರೆ. ವಿರಾಟ್‌ ಕೊಹ್ಲಿ ಹಾಗೂ ಸೌರವ್‌ ಗಂಗೂಲಿ ನಡುವೆ ಯಾವುದು ಸರಿಯಿಲ್ಲ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಜಗಜ್ಜಾಹಿರಾಗಿರುವ ವಿಷಯವಾಗಿದೆ. ಆಗಿದ್ದರೂ ದಾದಾ ವಿರಾಟ್‌ ಪರ ಬ್ಯಾಟ್‌ ಬೀಸಿರುವುದು ಅಚ್ಚರಿಗೆ ಕಾರಣವಾಗಿದೆ.

ಖಾಸಗಿ ಕಾರ್ಯಕ್ರಮವೊಂದಲ್ಲಿ ಮಾತನಾಡಿರುವ ಗಂಗೂಲಿ, ವಿರಾಟ್‌ ಬ್ಯಾಟಿಂಗ್‌ ನಲ್ಲಿ ಅತ್ಯುತ್ತಮವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಐಪಿಎಲ್‌ನಲ್ಲಿ ಕೆಲವು ಇನ್ನಿಂಗ್ಸ್‌ಗಳು ಅದ್ಭುತವಾಗಿ ಮೂಡಿ ಬಂದಿದೆ. ಅವರ ಈ ಫಾರ್ಮ್‌ ಹೀಗೆ ಮುಂದುವರೆಯಲಿದ್ದು, ಟಿ20 ವಿಶ್ವಕಪ್‌ನಲ್ಲಿ ಅವರನ್ನು ಆರಂಭಿಕರನ್ನಾಗಿ ಕಣಕ್ಕಿಳಿಸುವುದು ಉತ್ತಮ ಎಂದು ಹೇಳಿದ್ದಾರೆ.

ಜೊತೆಗೆ ವಿಶ್ವಕಪ್‌ ತಂಡ ಆಯ್ಕೆ ಬಗ್ಗೆಯೂ ಮೆಚ್ಚುಗೆ ಮಾತುಗಳನ್ನಾಡಿರುವ ಅವರು, ಬ್ಯಾಟಂಗ್‌, ಬೌಲಿಂಗ್‌ ಸೇರಿದಂತೆ ಗಟ್ಟಿಯಾದ ಉತ್ತಮ ತಂಡವನ್ನೇ ಕಟ್ಟಲಾಗಿದೆ. ಈ ತಂಡದ ಸಹಾಯದಿಂದ 17 ವರ್ಷಗಳ ಟ್ರೋಫಿ ಬರ ನೀಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಐಪಿಎಲ್‌ನಲ್ಲಿ ಈವರೆಗೆ ವಿರಾಟ್‌ 12 ಪಂದ್ಯಗಳನ್ನಾಡಿದ್ದು, 70.44ರ ಸರಾಸರಿಯಲ್ಲಿ 634 ರನ್‌ ಬಾರಿಸಿ ಟೂರ್ನಿಯಲ್ಲಿ ಲೀಡಿಂಗ್‌ ರನ್‌ ಸ್ಕೋರರ್‌ ಆಗಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಂಡಿ ಮಾರುಕಟ್ಟೆ : ಹೊರಗೆ ಥಳುಕು-ಒಳಗೆ ಹುಳುಕು

ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…

41 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 14 ಗುರುವಾರ

51 mins ago

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

14 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

15 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

15 hours ago

ಇನ್ನೊಂದು ವಾರದೊಳಗೆ ನೀಟ್-ಯುಜಿ ಪರೀಕ್ಷೆ ದಿನಾಂಕ ಘೋಷಣೆ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…

15 hours ago