ಕ್ರೀಡೆ

ಟಿ20 ವಿಶ್ವಕಪ್‌ನಲ್ಲಿ ರೋಹಿತ್‌ ಜೊತೆಯಾಗಿ ಇವರು ಆಡಬೇಕು: ಅಚ್ಚರಿಯ ಆಯ್ಕೆ ಮಾಡಿದ ದಾದಾ!

ನವದೆಹಲಿ: ಟಿ20 ವಿಶ್ವಕಪ್‌ನಲ್ಲಿ ಈ ಆಟಗಾರನನ್ನು ಟೀಂ ಇಂಡಿಯಾ ತಂಡದಲ್ಲಿ ರೋಹಿತ್‌ ಶರ್ಮಾಗೆ ಜೊತೆಯಾಗಿ ಬ್ಯಾಟಿಂಗ್‌ ಮಾಡಲು ಕಳುಹಿಸಬೇಕು ಎಂದು ಟೀಂ ಇಂಡಿಯಾದ ಮಾಜಿ ನಾಯಕ ಸೌರವ್‌ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

ಪ್ರಸಕ್ತ ಐಪಿಎಲ್‌ನಲ್ಲಿ ಭರ್ಜರಿ ಫಾರ್ಮ್‌ನೊಂದಿಗೆ ಬ್ಯಾಟ್‌ ಬೀಸುತ್ತಿರುವ ವಿರಾಟ್‌ ಕೊಹ್ಲಿ ಕುರಿತು ದಾದಾ ಈ ಹೇಳಿಕೆ ನೀಡಿದ್ದಾರೆ. ವಿರಾಟ್‌ ಕೊಹ್ಲಿ ಹಾಗೂ ಸೌರವ್‌ ಗಂಗೂಲಿ ನಡುವೆ ಯಾವುದು ಸರಿಯಿಲ್ಲ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಜಗಜ್ಜಾಹಿರಾಗಿರುವ ವಿಷಯವಾಗಿದೆ. ಆಗಿದ್ದರೂ ದಾದಾ ವಿರಾಟ್‌ ಪರ ಬ್ಯಾಟ್‌ ಬೀಸಿರುವುದು ಅಚ್ಚರಿಗೆ ಕಾರಣವಾಗಿದೆ.

ಖಾಸಗಿ ಕಾರ್ಯಕ್ರಮವೊಂದಲ್ಲಿ ಮಾತನಾಡಿರುವ ಗಂಗೂಲಿ, ವಿರಾಟ್‌ ಬ್ಯಾಟಿಂಗ್‌ ನಲ್ಲಿ ಅತ್ಯುತ್ತಮವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಐಪಿಎಲ್‌ನಲ್ಲಿ ಕೆಲವು ಇನ್ನಿಂಗ್ಸ್‌ಗಳು ಅದ್ಭುತವಾಗಿ ಮೂಡಿ ಬಂದಿದೆ. ಅವರ ಈ ಫಾರ್ಮ್‌ ಹೀಗೆ ಮುಂದುವರೆಯಲಿದ್ದು, ಟಿ20 ವಿಶ್ವಕಪ್‌ನಲ್ಲಿ ಅವರನ್ನು ಆರಂಭಿಕರನ್ನಾಗಿ ಕಣಕ್ಕಿಳಿಸುವುದು ಉತ್ತಮ ಎಂದು ಹೇಳಿದ್ದಾರೆ.

ಜೊತೆಗೆ ವಿಶ್ವಕಪ್‌ ತಂಡ ಆಯ್ಕೆ ಬಗ್ಗೆಯೂ ಮೆಚ್ಚುಗೆ ಮಾತುಗಳನ್ನಾಡಿರುವ ಅವರು, ಬ್ಯಾಟಂಗ್‌, ಬೌಲಿಂಗ್‌ ಸೇರಿದಂತೆ ಗಟ್ಟಿಯಾದ ಉತ್ತಮ ತಂಡವನ್ನೇ ಕಟ್ಟಲಾಗಿದೆ. ಈ ತಂಡದ ಸಹಾಯದಿಂದ 17 ವರ್ಷಗಳ ಟ್ರೋಫಿ ಬರ ನೀಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಐಪಿಎಲ್‌ನಲ್ಲಿ ಈವರೆಗೆ ವಿರಾಟ್‌ 12 ಪಂದ್ಯಗಳನ್ನಾಡಿದ್ದು, 70.44ರ ಸರಾಸರಿಯಲ್ಲಿ 634 ರನ್‌ ಬಾರಿಸಿ ಟೂರ್ನಿಯಲ್ಲಿ ಲೀಡಿಂಗ್‌ ರನ್‌ ಸ್ಕೋರರ್‌ ಆಗಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

4 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

7 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

11 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

13 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

14 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

15 hours ago