ನವದೆಹಲಿ: ಟಿ20 ವಿಶ್ವಕಪ್ನಲ್ಲಿ ಈ ಆಟಗಾರನನ್ನು ಟೀಂ ಇಂಡಿಯಾ ತಂಡದಲ್ಲಿ ರೋಹಿತ್ ಶರ್ಮಾಗೆ ಜೊತೆಯಾಗಿ ಬ್ಯಾಟಿಂಗ್ ಮಾಡಲು ಕಳುಹಿಸಬೇಕು ಎಂದು ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.
ಪ್ರಸಕ್ತ ಐಪಿಎಲ್ನಲ್ಲಿ ಭರ್ಜರಿ ಫಾರ್ಮ್ನೊಂದಿಗೆ ಬ್ಯಾಟ್ ಬೀಸುತ್ತಿರುವ ವಿರಾಟ್ ಕೊಹ್ಲಿ ಕುರಿತು ದಾದಾ ಈ ಹೇಳಿಕೆ ನೀಡಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ಸೌರವ್ ಗಂಗೂಲಿ ನಡುವೆ ಯಾವುದು ಸರಿಯಿಲ್ಲ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಜಗಜ್ಜಾಹಿರಾಗಿರುವ ವಿಷಯವಾಗಿದೆ. ಆಗಿದ್ದರೂ ದಾದಾ ವಿರಾಟ್ ಪರ ಬ್ಯಾಟ್ ಬೀಸಿರುವುದು ಅಚ್ಚರಿಗೆ ಕಾರಣವಾಗಿದೆ.
ಖಾಸಗಿ ಕಾರ್ಯಕ್ರಮವೊಂದಲ್ಲಿ ಮಾತನಾಡಿರುವ ಗಂಗೂಲಿ, ವಿರಾಟ್ ಬ್ಯಾಟಿಂಗ್ ನಲ್ಲಿ ಅತ್ಯುತ್ತಮವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಐಪಿಎಲ್ನಲ್ಲಿ ಕೆಲವು ಇನ್ನಿಂಗ್ಸ್ಗಳು ಅದ್ಭುತವಾಗಿ ಮೂಡಿ ಬಂದಿದೆ. ಅವರ ಈ ಫಾರ್ಮ್ ಹೀಗೆ ಮುಂದುವರೆಯಲಿದ್ದು, ಟಿ20 ವಿಶ್ವಕಪ್ನಲ್ಲಿ ಅವರನ್ನು ಆರಂಭಿಕರನ್ನಾಗಿ ಕಣಕ್ಕಿಳಿಸುವುದು ಉತ್ತಮ ಎಂದು ಹೇಳಿದ್ದಾರೆ.
ಜೊತೆಗೆ ವಿಶ್ವಕಪ್ ತಂಡ ಆಯ್ಕೆ ಬಗ್ಗೆಯೂ ಮೆಚ್ಚುಗೆ ಮಾತುಗಳನ್ನಾಡಿರುವ ಅವರು, ಬ್ಯಾಟಂಗ್, ಬೌಲಿಂಗ್ ಸೇರಿದಂತೆ ಗಟ್ಟಿಯಾದ ಉತ್ತಮ ತಂಡವನ್ನೇ ಕಟ್ಟಲಾಗಿದೆ. ಈ ತಂಡದ ಸಹಾಯದಿಂದ 17 ವರ್ಷಗಳ ಟ್ರೋಫಿ ಬರ ನೀಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಐಪಿಎಲ್ನಲ್ಲಿ ಈವರೆಗೆ ವಿರಾಟ್ 12 ಪಂದ್ಯಗಳನ್ನಾಡಿದ್ದು, 70.44ರ ಸರಾಸರಿಯಲ್ಲಿ 634 ರನ್ ಬಾರಿಸಿ ಟೂರ್ನಿಯಲ್ಲಿ ಲೀಡಿಂಗ್ ರನ್ ಸ್ಕೋರರ್ ಆಗಿದ್ದಾರೆ.
ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…