ನವದೆಹಲಿ: ಇತ್ತೀಚೆಗೆ ಅಮೇರಿಕಾ ಹಾಗೂ ವೆಸ್ಟ್ ಇಂಡೀಸ್ ಸಹಭಾಗಿತ್ವದಲ್ಲಿ ನಡೆದ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ ತಂಡದಲ್ಲಿ ಎಲ್ಲವೂ ಬದಲಾಗಿದೆ.
ಮುಖ್ಯ ಕೋಚ್ ಸ್ಥಾನದಿಂದ ಕನ್ನಡಿಗ ರಾಹುಲ ದ್ರಾವಿಡ್ ಅವರ ಅವಧಿ ಮುಗಿದ ಬೆನ್ನಲ್ಲೇ ಗೌತಮ್ ಗಂಭೀರ್ ಅವರು ಕೋಚ್ ಆಗಿ ನೇಮಕಗೊಂಡರು. ಇದು ನಿಜ ಆಗುತ್ತಿದ್ದಂತೆ ವಿರಾಟ್ ಕೊಹ್ಲಿ ಅಭಿಮಾನಿಗಳು ಹಾಗೂ ಗೌತಮ್ ಗಂಭೀರ್ ಅಭಿಮಾನಿಗಳು ಮತ್ತೆ ಕಾದಾಟಕ್ಕೆ ವೇದಿಕೆ ಸಿದ್ದ ಮಾಡಲಾಗಿದೆ ಎಂದು ಊಹಿಸಲಾಗಿತ್ತು.
ಆದರೆ ಇದೆಲ್ಲವನ್ನು ಬದಲಾಯಿಸಿರುವ ವಿರಾಟ್ ಕೊಹ್ಲಿ ತಮ್ಮ ಅಚ್ಚರಿ ಹೇಳಿಕೆ ಮೂಲಕ ಎಲ್ಲರನ್ನು ದಂಗುಬಡಿಸಿದ್ದಾರೆ. ಟೀಂ ಇಂಡಿಯಾದ ಡ್ರೆಸ್ಸಿಂಗ್ ರೂ ವಾತಾವರಣ ಉತ್ತಮವಾಗಿಟ್ಟುಕೊಳ್ಳಲು ತಾವು ಶ್ರಮಿಸುವುದಾಗಿ ಅವರು ವಿರಾಟ್ ಹೇಳಿದ್ದಾರೆ.
ಅಷ್ಟಕ್ಕೂ ವಿರಾಟ್ ಕೊಹ್ಲಿ ಹೇಳಿದ್ದೇನು?: ಮಾಜಿ ಟೀಂ ಇಂಡಿಯಾ ಆಟಗಾರ, ಭಾರತ ತಂಡದ ನೂತನ ಕೋಚ್ ಆಗಿ ನೇಮಕಗೊಂಡಿರುವ ಗಂಭೀರ್ ಅವರೊಂದಿಗಿನ ಎಲ್ಲಾ ವೈರತ್ವವನ್ನು ಮರೆತು ತಂಡಕ್ಕಾಗಿ, ಭಾರತೀಯ ಕ್ರಿಕೆಟ್ಗೆ ಕೊಡುಗೆ ನೀಡುವ ಸಲುವಾಗಿ ಶ್ರಮಿಸಲಾಗುವುದು ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ ಎಂದು ಖ್ಯಾತ ಕ್ರಿಕೆಟ್ ಆಪ್ ಕ್ರಿಕ್ಬುಜ್ ವರದಿ ಮಾಡಿದೆ.
ನಮ್ಮ ಹಿಂದಿನ ಸಮಸ್ಯೆಗಳು ವೃತ್ತಿಪರ ಸಂಬಂಧದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಗಂಭೀರ್ ಅವರೊಂದಿಗೆ ಕೆಲಸ ಮಾಡಲು ನಮಗೆ ಆರಾಮದಾಯಕವಾಗಿರುತ್ತದೆ ಎಂದು ವಿರಾಟ್ ಹೇಳಿರುವುದಾಗಿ ತಿಳಿದುಬಂದಿದೆ.
ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…
ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…
ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…
ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…