ಕ್ರೀಡೆ

ವೈರತ್ವ ಬದಿಗಿಟ್ಟು ದೇಶಕ್ಕಾಗಿ ಆಡುತ್ತೇನೆ: ಬಿಸಿಸಿಐಗೆ ವಿರಾಟ್‌ ಹೇಳಿದ್ದೇನು?

ನವದೆಹಲಿ: ಇತ್ತೀಚೆಗೆ ಅಮೇರಿಕಾ ಹಾಗೂ ವೆಸ್ಟ್‌ ಇಂಡೀಸ್‌ ಸಹಭಾಗಿತ್ವದಲ್ಲಿ ನಡೆದ ಟಿ20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾ ತಂಡದಲ್ಲಿ ಎಲ್ಲವೂ ಬದಲಾಗಿದೆ.

ಮುಖ್ಯ ಕೋಚ್ ಸ್ಥಾನದಿಂದ ಕನ್ನಡಿಗ ರಾಹುಲ ದ್ರಾವಿಡ್‌ ಅವರ ಅವಧಿ ಮುಗಿದ ಬೆನ್ನಲ್ಲೇ ಗೌತಮ್‌ ಗಂಭೀರ್‌ ಅವರು ಕೋಚ್‌ ಆಗಿ ನೇಮಕಗೊಂಡರು. ಇದು ನಿಜ ಆಗುತ್ತಿದ್ದಂತೆ ವಿರಾಟ್‌ ಕೊಹ್ಲಿ ಅಭಿಮಾನಿಗಳು ಹಾಗೂ ಗೌತಮ್‌ ಗಂಭೀರ್‌ ಅಭಿಮಾನಿಗಳು ಮತ್ತೆ ಕಾದಾಟಕ್ಕೆ ವೇದಿಕೆ ಸಿದ್ದ ಮಾಡಲಾಗಿದೆ ಎಂದು ಊಹಿಸಲಾಗಿತ್ತು.

ಆದರೆ ಇದೆಲ್ಲವನ್ನು ಬದಲಾಯಿಸಿರುವ ವಿರಾಟ್‌ ಕೊಹ್ಲಿ ತಮ್ಮ ಅಚ್ಚರಿ ಹೇಳಿಕೆ ಮೂಲಕ ಎಲ್ಲರನ್ನು ದಂಗುಬಡಿಸಿದ್ದಾರೆ. ಟೀಂ ಇಂಡಿಯಾದ ಡ್ರೆಸ್ಸಿಂಗ್‌ ರೂ ವಾತಾವರಣ ಉತ್ತಮವಾಗಿಟ್ಟುಕೊಳ್ಳಲು ತಾವು ಶ್ರಮಿಸುವುದಾಗಿ ಅವರು ವಿರಾಟ್‌ ಹೇಳಿದ್ದಾರೆ.

ಅಷ್ಟಕ್ಕೂ ವಿರಾಟ್‌ ಕೊಹ್ಲಿ ಹೇಳಿದ್ದೇನು?: ಮಾಜಿ ಟೀಂ ಇಂಡಿಯಾ ಆಟಗಾರ, ಭಾರತ ತಂಡದ ನೂತನ ಕೋಚ್‌ ಆಗಿ ನೇಮಕಗೊಂಡಿರುವ ಗಂಭೀರ್‌ ಅವರೊಂದಿಗಿನ ಎಲ್ಲಾ ವೈರತ್ವವನ್ನು ಮರೆತು ತಂಡಕ್ಕಾಗಿ, ಭಾರತೀಯ ಕ್ರಿಕೆಟ್‌ಗೆ ಕೊಡುಗೆ ನೀಡುವ ಸಲುವಾಗಿ ಶ್ರಮಿಸಲಾಗುವುದು ಎಂದು ವಿರಾಟ್‌ ಕೊಹ್ಲಿ ಹೇಳಿದ್ದಾರೆ ಎಂದು ಖ್ಯಾತ ಕ್ರಿಕೆಟ್‌ ಆಪ್‌ ಕ್ರಿಕ್‌ಬುಜ್‌ ವರದಿ ಮಾಡಿದೆ.

ನಮ್ಮ ಹಿಂದಿನ ಸಮಸ್ಯೆಗಳು ವೃತ್ತಿಪರ ಸಂಬಂಧದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಗಂಭೀರ್‌ ಅವರೊಂದಿಗೆ ಕೆಲಸ ಮಾಡಲು ನಮಗೆ ಆರಾಮದಾಯಕವಾಗಿರುತ್ತದೆ ಎಂದು ವಿರಾಟ್‌ ಹೇಳಿರುವುದಾಗಿ ತಿಳಿದುಬಂದಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ

ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ : ಸಿಎಂ ಸಿದ್ದರಾಮಯ್ಯ ಆಕ್ರೋಶ ಬೆಂಗಳೂರು : ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ…

13 mins ago

3 ಮಸೂದೆಗಳಿಗೆ ರಾಜ್ಯಪಾಲರ ನಕಾರ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ ವಾಪಸ್ ದ್ವೇಷ ಭಾಷಣ, ಅಪರಾಧಗಳ ಪ್ರತಿಬಂಧಕ ಮಸೂದೆಯೂ ಹಿಂದಕ್ಕೆ ಬೆಂಗಳೂರು :…

37 mins ago

ಮೈಸೂರು | ಬೃಹತ್ ಮೈಸೂರು ಮಹಾನಗರ ಪಾಲಿಕೆ ರಚನೆಗೆ ಸಿದ್ಧತೆ

ಎರಡು ದಶಕಗಳ ಕೂಗು,ಬೇಡಿಕೆ ಈಡೇರಿಕೆ ಮೈಸೂರು : ಮೈಸೂರಿನ ಲಕ್ಷಾಂತರ ಜನರ ಎರಡು ದಶಕದ ಕನಸು, ಬೇಡಿಕೆ ನನಸಾಗುವ ಕಾಲ…

50 mins ago

ಮುಂದಿನ ಚುನಾವಣೆಯಲ್ಲಿ NDA 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತೆ : ನಿಖಿಲ್ ಕುಮಾರಸ್ವಾಮಿ ಭರವಸೆ

ಬೆಂಗಳೂರು : ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ…

5 hours ago

ಪ್ರತ್ಯೇಕವಾಗಿದ್ದ ದಂಪತಿ ನಡುವೆ ಕಿರಿಕ್ ; ಪತ್ನಿ ಕೊಲೆಯಲ್ಲಿ ಅಂತ್ಯ

ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ…

6 hours ago

ಸಿಎಂ ಕ್ಷೇತ್ರದಲ್ಲಿನ ಸಮಸ್ಯೆ ಬಗೆಹರಿಸಿ : ಅಧಿಕಾರಿಗಳಿಗೆ ಯತೀಂದ್ರ ಸೂಚನೆ

ನಂಜನಗೂಡು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗ ಸಮಸ್ಯೆಗಳಿಗೆ ಸ್ಪಂದಿಸುವ…

6 hours ago