ಕ್ರೀಡೆ

ವೈರತ್ವ ಬದಿಗಿಟ್ಟು ದೇಶಕ್ಕಾಗಿ ಆಡುತ್ತೇನೆ: ಬಿಸಿಸಿಐಗೆ ವಿರಾಟ್‌ ಹೇಳಿದ್ದೇನು?

ನವದೆಹಲಿ: ಇತ್ತೀಚೆಗೆ ಅಮೇರಿಕಾ ಹಾಗೂ ವೆಸ್ಟ್‌ ಇಂಡೀಸ್‌ ಸಹಭಾಗಿತ್ವದಲ್ಲಿ ನಡೆದ ಟಿ20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾ ತಂಡದಲ್ಲಿ ಎಲ್ಲವೂ ಬದಲಾಗಿದೆ.

ಮುಖ್ಯ ಕೋಚ್ ಸ್ಥಾನದಿಂದ ಕನ್ನಡಿಗ ರಾಹುಲ ದ್ರಾವಿಡ್‌ ಅವರ ಅವಧಿ ಮುಗಿದ ಬೆನ್ನಲ್ಲೇ ಗೌತಮ್‌ ಗಂಭೀರ್‌ ಅವರು ಕೋಚ್‌ ಆಗಿ ನೇಮಕಗೊಂಡರು. ಇದು ನಿಜ ಆಗುತ್ತಿದ್ದಂತೆ ವಿರಾಟ್‌ ಕೊಹ್ಲಿ ಅಭಿಮಾನಿಗಳು ಹಾಗೂ ಗೌತಮ್‌ ಗಂಭೀರ್‌ ಅಭಿಮಾನಿಗಳು ಮತ್ತೆ ಕಾದಾಟಕ್ಕೆ ವೇದಿಕೆ ಸಿದ್ದ ಮಾಡಲಾಗಿದೆ ಎಂದು ಊಹಿಸಲಾಗಿತ್ತು.

ಆದರೆ ಇದೆಲ್ಲವನ್ನು ಬದಲಾಯಿಸಿರುವ ವಿರಾಟ್‌ ಕೊಹ್ಲಿ ತಮ್ಮ ಅಚ್ಚರಿ ಹೇಳಿಕೆ ಮೂಲಕ ಎಲ್ಲರನ್ನು ದಂಗುಬಡಿಸಿದ್ದಾರೆ. ಟೀಂ ಇಂಡಿಯಾದ ಡ್ರೆಸ್ಸಿಂಗ್‌ ರೂ ವಾತಾವರಣ ಉತ್ತಮವಾಗಿಟ್ಟುಕೊಳ್ಳಲು ತಾವು ಶ್ರಮಿಸುವುದಾಗಿ ಅವರು ವಿರಾಟ್‌ ಹೇಳಿದ್ದಾರೆ.

ಅಷ್ಟಕ್ಕೂ ವಿರಾಟ್‌ ಕೊಹ್ಲಿ ಹೇಳಿದ್ದೇನು?: ಮಾಜಿ ಟೀಂ ಇಂಡಿಯಾ ಆಟಗಾರ, ಭಾರತ ತಂಡದ ನೂತನ ಕೋಚ್‌ ಆಗಿ ನೇಮಕಗೊಂಡಿರುವ ಗಂಭೀರ್‌ ಅವರೊಂದಿಗಿನ ಎಲ್ಲಾ ವೈರತ್ವವನ್ನು ಮರೆತು ತಂಡಕ್ಕಾಗಿ, ಭಾರತೀಯ ಕ್ರಿಕೆಟ್‌ಗೆ ಕೊಡುಗೆ ನೀಡುವ ಸಲುವಾಗಿ ಶ್ರಮಿಸಲಾಗುವುದು ಎಂದು ವಿರಾಟ್‌ ಕೊಹ್ಲಿ ಹೇಳಿದ್ದಾರೆ ಎಂದು ಖ್ಯಾತ ಕ್ರಿಕೆಟ್‌ ಆಪ್‌ ಕ್ರಿಕ್‌ಬುಜ್‌ ವರದಿ ಮಾಡಿದೆ.

ನಮ್ಮ ಹಿಂದಿನ ಸಮಸ್ಯೆಗಳು ವೃತ್ತಿಪರ ಸಂಬಂಧದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಗಂಭೀರ್‌ ಅವರೊಂದಿಗೆ ಕೆಲಸ ಮಾಡಲು ನಮಗೆ ಆರಾಮದಾಯಕವಾಗಿರುತ್ತದೆ ಎಂದು ವಿರಾಟ್‌ ಹೇಳಿರುವುದಾಗಿ ತಿಳಿದುಬಂದಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ: ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಯುವ ಮುಖಂಡ ನಿಶಾಂತ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…

6 hours ago

ಹನೂರು| ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ಕೊಟ್ಟ ಹುಲಿರಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…

9 hours ago

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…

10 hours ago

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…

10 hours ago

ಖಮೇನಿ ಹತ್ಯೆ ಖಂಡಿಸಿ ಭಾರತದಲ್ಲೂ ಪ್ರತಿಭಟನೆ

ಜಮ್ಮು-ಕಾಶ್ಮೀರ: ಇಸ್ರೇಲ್‌ ಮತ್ತು ಅಮೇರಿಕಾ ಇರಾನ್‌ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…

10 hours ago

ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆ: ಏನದು ಗೊತ್ತಾ.?

ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…

11 hours ago