ಕ್ರೀಡೆ

ವೈರತ್ವ ಬದಿಗಿಟ್ಟು ದೇಶಕ್ಕಾಗಿ ಆಡುತ್ತೇನೆ: ಬಿಸಿಸಿಐಗೆ ವಿರಾಟ್‌ ಹೇಳಿದ್ದೇನು?

ನವದೆಹಲಿ: ಇತ್ತೀಚೆಗೆ ಅಮೇರಿಕಾ ಹಾಗೂ ವೆಸ್ಟ್‌ ಇಂಡೀಸ್‌ ಸಹಭಾಗಿತ್ವದಲ್ಲಿ ನಡೆದ ಟಿ20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾ ತಂಡದಲ್ಲಿ ಎಲ್ಲವೂ ಬದಲಾಗಿದೆ.

ಮುಖ್ಯ ಕೋಚ್ ಸ್ಥಾನದಿಂದ ಕನ್ನಡಿಗ ರಾಹುಲ ದ್ರಾವಿಡ್‌ ಅವರ ಅವಧಿ ಮುಗಿದ ಬೆನ್ನಲ್ಲೇ ಗೌತಮ್‌ ಗಂಭೀರ್‌ ಅವರು ಕೋಚ್‌ ಆಗಿ ನೇಮಕಗೊಂಡರು. ಇದು ನಿಜ ಆಗುತ್ತಿದ್ದಂತೆ ವಿರಾಟ್‌ ಕೊಹ್ಲಿ ಅಭಿಮಾನಿಗಳು ಹಾಗೂ ಗೌತಮ್‌ ಗಂಭೀರ್‌ ಅಭಿಮಾನಿಗಳು ಮತ್ತೆ ಕಾದಾಟಕ್ಕೆ ವೇದಿಕೆ ಸಿದ್ದ ಮಾಡಲಾಗಿದೆ ಎಂದು ಊಹಿಸಲಾಗಿತ್ತು.

ಆದರೆ ಇದೆಲ್ಲವನ್ನು ಬದಲಾಯಿಸಿರುವ ವಿರಾಟ್‌ ಕೊಹ್ಲಿ ತಮ್ಮ ಅಚ್ಚರಿ ಹೇಳಿಕೆ ಮೂಲಕ ಎಲ್ಲರನ್ನು ದಂಗುಬಡಿಸಿದ್ದಾರೆ. ಟೀಂ ಇಂಡಿಯಾದ ಡ್ರೆಸ್ಸಿಂಗ್‌ ರೂ ವಾತಾವರಣ ಉತ್ತಮವಾಗಿಟ್ಟುಕೊಳ್ಳಲು ತಾವು ಶ್ರಮಿಸುವುದಾಗಿ ಅವರು ವಿರಾಟ್‌ ಹೇಳಿದ್ದಾರೆ.

ಅಷ್ಟಕ್ಕೂ ವಿರಾಟ್‌ ಕೊಹ್ಲಿ ಹೇಳಿದ್ದೇನು?: ಮಾಜಿ ಟೀಂ ಇಂಡಿಯಾ ಆಟಗಾರ, ಭಾರತ ತಂಡದ ನೂತನ ಕೋಚ್‌ ಆಗಿ ನೇಮಕಗೊಂಡಿರುವ ಗಂಭೀರ್‌ ಅವರೊಂದಿಗಿನ ಎಲ್ಲಾ ವೈರತ್ವವನ್ನು ಮರೆತು ತಂಡಕ್ಕಾಗಿ, ಭಾರತೀಯ ಕ್ರಿಕೆಟ್‌ಗೆ ಕೊಡುಗೆ ನೀಡುವ ಸಲುವಾಗಿ ಶ್ರಮಿಸಲಾಗುವುದು ಎಂದು ವಿರಾಟ್‌ ಕೊಹ್ಲಿ ಹೇಳಿದ್ದಾರೆ ಎಂದು ಖ್ಯಾತ ಕ್ರಿಕೆಟ್‌ ಆಪ್‌ ಕ್ರಿಕ್‌ಬುಜ್‌ ವರದಿ ಮಾಡಿದೆ.

ನಮ್ಮ ಹಿಂದಿನ ಸಮಸ್ಯೆಗಳು ವೃತ್ತಿಪರ ಸಂಬಂಧದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಗಂಭೀರ್‌ ಅವರೊಂದಿಗೆ ಕೆಲಸ ಮಾಡಲು ನಮಗೆ ಆರಾಮದಾಯಕವಾಗಿರುತ್ತದೆ ಎಂದು ವಿರಾಟ್‌ ಹೇಳಿರುವುದಾಗಿ ತಿಳಿದುಬಂದಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

18 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

19 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

19 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

19 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

19 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

19 hours ago