ಕ್ರೀಡೆ

ಟೀಂ ಇಂಡಿಯಾ ಪರ ಅನಗತ್ಯ ದಾಖಲೆ ಬರೆದ ವಿರಾಟ್ ಕೊಹ್ಲಿ!

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ್ ವಿರುದ್ಧದ ಅಂತಿಮ ಮತ್ತು ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದು, ಅಫ್ಘಾನ್‌ ವಿರುದ್ಧ ಅಜೇಯ ದಾಖಲೆ ನಿರ್ಮಿಸಿತು. ಆದರೆ, ಇದೆ ಪಂದ್ಯದಲ್ಲಿ ಟೀಂ ಇಂಡಿಯಾದ ರನ್‌ ಮೆಷಿ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಅನಗತ್ಯ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಟೀಂ ಇಡಿಯಾ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕಿಂಗ್ ಕೊಹ್ಲಿ ಎಡಗೈ ವೇಗಿ ಫರೀದ್ ಅಹ್ಮದ್‌ರ ಮೊದಲ ಎಸೆತದಲ್ಲೇ ಔಟ್ ಮಾಡುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಗೋಲ್ಡನ್ ಡಕ್​ಗೆ ಔಟಾಗುವುದರೊಂದಿಗೆ ಅತ್ಯಂತ ಕಳಪೆ ದಾಖಲೆಯೊಂದನ್ನು ಕೊಹ್ಲಿ ತಮ್ಮದಾಗಿಸಿಕೊಂಡರು.

ಆ ಮೂಲಕ ಭಾರತ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ ಶೂನ್ಯಕ್ಕೆ ಔಟಾದ ಅನಗತ್ಯ ದಾಖಲೆಯೊಂದು ವಿರಾಟ್ ಕೊಹ್ಲಿ ಹೆಸರಿಗೆ ಸೇರ್ಪಡೆಯಾಗಿದೆ. ಮೊದಲು ಈ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.

ಟೀಮ್ ಇಂಡಿಯಾ ಪರ ಒಟ್ಟು 664 ಪಂದ್ಯಗಳನ್ನಾಡಿರುವ ಸಚಿನ್ ತೆಂಡೂಲ್ಕರ್ 782 ಇನಿಂಗ್ಸ್ ಆಡಿ, 34 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಅತೀ ಹೆಚ್ಚು ಬಾರಿ ಡಕ್​ ಔಟ್ ಆದ ಬ್ಯಾಟರ್ ಎಂಬ ಕಳಪೆ ದಾಖಲೆಯೊಂದನ್ನು ಸಚಿನ್ ನಿರ್ಮಿಸಿದ್ದರು.

ಇದೀಗ ಈ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದಿದ್ದಾರೆ. ಟೀಮ್ ಇಂಡಿಯಾ ಪರ 522 ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ 580 ಇನಿಂಗ್ಸ್​ಗಳಲ್ಲಿ ಒಟ್ಟು 35 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಟೀಮ್ ಇಂಡಿಯಾ ಪರ ಅತ್ಯಧಿಕ ಬಾರಿ ಸೊನ್ನೆ ಸುತ್ತಿದ ಬ್ಯಾಟರ್ ಎಂಬ ಅನಗತ್ಯ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.

andolanait

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

7 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

8 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

8 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

9 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

9 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

10 hours ago