ಕ್ರೀಡೆ

ಟೀಂ ಇಂಡಿಯಾ ಪರ ಅನಗತ್ಯ ದಾಖಲೆ ಬರೆದ ವಿರಾಟ್ ಕೊಹ್ಲಿ!

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ್ ವಿರುದ್ಧದ ಅಂತಿಮ ಮತ್ತು ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದು, ಅಫ್ಘಾನ್‌ ವಿರುದ್ಧ ಅಜೇಯ ದಾಖಲೆ ನಿರ್ಮಿಸಿತು. ಆದರೆ, ಇದೆ ಪಂದ್ಯದಲ್ಲಿ ಟೀಂ ಇಂಡಿಯಾದ ರನ್‌ ಮೆಷಿ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಅನಗತ್ಯ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಟೀಂ ಇಡಿಯಾ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕಿಂಗ್ ಕೊಹ್ಲಿ ಎಡಗೈ ವೇಗಿ ಫರೀದ್ ಅಹ್ಮದ್‌ರ ಮೊದಲ ಎಸೆತದಲ್ಲೇ ಔಟ್ ಮಾಡುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಗೋಲ್ಡನ್ ಡಕ್​ಗೆ ಔಟಾಗುವುದರೊಂದಿಗೆ ಅತ್ಯಂತ ಕಳಪೆ ದಾಖಲೆಯೊಂದನ್ನು ಕೊಹ್ಲಿ ತಮ್ಮದಾಗಿಸಿಕೊಂಡರು.

ಆ ಮೂಲಕ ಭಾರತ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ ಶೂನ್ಯಕ್ಕೆ ಔಟಾದ ಅನಗತ್ಯ ದಾಖಲೆಯೊಂದು ವಿರಾಟ್ ಕೊಹ್ಲಿ ಹೆಸರಿಗೆ ಸೇರ್ಪಡೆಯಾಗಿದೆ. ಮೊದಲು ಈ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.

ಟೀಮ್ ಇಂಡಿಯಾ ಪರ ಒಟ್ಟು 664 ಪಂದ್ಯಗಳನ್ನಾಡಿರುವ ಸಚಿನ್ ತೆಂಡೂಲ್ಕರ್ 782 ಇನಿಂಗ್ಸ್ ಆಡಿ, 34 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಅತೀ ಹೆಚ್ಚು ಬಾರಿ ಡಕ್​ ಔಟ್ ಆದ ಬ್ಯಾಟರ್ ಎಂಬ ಕಳಪೆ ದಾಖಲೆಯೊಂದನ್ನು ಸಚಿನ್ ನಿರ್ಮಿಸಿದ್ದರು.

ಇದೀಗ ಈ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದಿದ್ದಾರೆ. ಟೀಮ್ ಇಂಡಿಯಾ ಪರ 522 ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ 580 ಇನಿಂಗ್ಸ್​ಗಳಲ್ಲಿ ಒಟ್ಟು 35 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಟೀಮ್ ಇಂಡಿಯಾ ಪರ ಅತ್ಯಧಿಕ ಬಾರಿ ಸೊನ್ನೆ ಸುತ್ತಿದ ಬ್ಯಾಟರ್ ಎಂಬ ಅನಗತ್ಯ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.

andolanait

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

5 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

8 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

12 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

14 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

15 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

16 hours ago