ಕ್ರೀಡೆ

ವಿರಾಟ್ ಕೊಹ್ಲಿ ಅಮೋಘ ಶತಕ: ದಕ್ಷಿಣ ಆಫ್ರಿಕಾಕ್ಕೆ ಗೆಲ್ಲಲು 327 ರನ್‌ ಗುರಿ

ಕೋಲ್ಕತ್ತಾ : ಐಸಿಸಿ ವಿಶ್ವಕಪ್ 2023ರ 37ನೇ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 326 ರನ್ ಗಳಿಸಿತು. ಇದೀಗ ಭಾರತವನ್ನು ಸೋಲಿಸಲು ದಕ್ಷಿಣ ಆಫ್ರಿಕಾ 50 ಓವರ್‌ಗಳಲ್ಲಿ 327 ರನ್ ಗಳಿಸಬೇಕಾಗಿದೆ. ಭಾರತದ ಪರ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅದ್ಭುತ ಇನ್ನಿಂಗ್ಸ್ ಆಡಿ 49ನೇ ಶತಕ ದಾಖಲಿಸಿದರು. ಇದರೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ ಸಚಿನ್ ತೆಂಡೂಲ್ಕರ್ ಅವರ ಗರಿಷ್ಠ 49 ಶತಕಗಳನ್ನು ಸರಿಗಟ್ಟಿದ್ದಾರೆ.

ಭಾರತಕ್ಕೆ ರೋಹಿತ್ ಶರ್ಮಾ ಮತ್ತು ಶುಭ್‌ಮನ್ ಗಿಲ್ ಉತ್ತಮ ಆರಂಭವನ್ನು ನೀಡಿದರು. ತಂಡವು 4.3 ಓವರ್‌ಗಳಲ್ಲಿ 50 ರನ್ ಪೂರೈಸಿತು. ರೋಹಿತ್ ಶರ್ಮಾ 24 ಎಸೆತಗಳಲ್ಲಿ 6 ಸ್ಫೋಟಕ ಬೌಂಡರಿ ಮತ್ತು 2 ಸಿಕ್ಸರ್‌ಗಳೊಂದಿಗೆ 40 ರನ್ ಗಳಿಸಿದರು. ಕಗಿಸೊ ರಬಾಡ ರೋಹಿತ್‌ ಶರ್ಮಾರನ್ನು ಔಟ್ ಮಾಡುವ ಮೂಲಕ ಆಫ್ರಿಕಾಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ಇದಾದ ಬಳಿಕ ಶುಭಮನ್ ಗಿಲ್ ಕೂಡ ದೊಡ್ಡ ಇನ್ನಿಂಗ್ಸ್ ಆಡಲಾಗದೆ 23 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ಇದಾದ ನಂತರ ವಿರಾಟ್ ಕೊಹ್ಲಿ ಅವರು ಶ್ರೇಯಸ್ ಅಯ್ಯರ್ ಜೊತೆಗೂಡಿ ಇನ್ನಿಂಗ್ಸ್ ಕೈಗೆತ್ತಿಕೊಂಡು ಸ್ಕೋರ್ ಹೆಚ್ಚಿಸಿದರು.

227 ರನ್‌ಗಳಿದ್ದಾಗ 37ನೇ ಓವರ್‌ನ ಐದನೇ ಎಸೆತದಲ್ಲಿ ಭಾರತಕ್ಕೆ ಮೂರನೇ ಹೊಡೆತ ಶ್ರೇಯಸ್ ಅಯ್ಯರ್ ರೂಪದಲ್ಲಿ ಬಂದಿತು. ಅಯ್ಯರ್ 87 ಎಸೆತಗಳಲ್ಲಿ 7 ಬೌಂಡರಿ ಮತ್ತು 2 ಸ್ಫೋಟಕ ಸಿಕ್ಸರ್‌ಗಳೊಂದಿಗೆ 77 ರನ್ ಗಳಿಸಿ ಲುಂಗಿ ಎನ್‌ಗಿಡಿ ಎಸೆತದಲ್ಲಿ ಮಾರ್ಕ್‌ರಾಮ್‌ಗೆ ಕ್ಯಾಚಿತ್ತು ಔಟಾದರು. ಇದಾದ ಬಳಿಕ ಕೆಎಲ್ ರಾಹುಲ್ 8 ರನ್ ಗಳಿಸಿ ಔಟಾದರು. 14 ಎಸೆತಗಳಲ್ಲಿ 22 ರನ್ ಗಳಿಸಿ ಸೂರ್ಯಕುಮಾರ್ ಯಾದವ್ ಔಟಾದರು. ನಂತರ ಬಂದ ರವೀಂದ್ರ ಜಡೇಜಾ 15 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 19 ರನ್ ಗಳಿಸಿ ಅಜೇಯರಾಗಿ ಉಳಿದರು.

ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ವಿರಾಟ್ ಕೊಹ್ಲಿ 119 ಎಸೆತಗಳಲ್ಲಿ 10 ಬೌಂಡರಿಗಳ ನೆರವಿನಿಂದ ತಮ್ಮ ODI ವೃತ್ತಿಜೀವನದ 49ನೇ ಶತಕ ದಾಖಲಿಸಿದರು. ಇದರೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ಶತಕ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಗಳಿಸಿದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಪಂದ್ಯದಲ್ಲಿ ವಿರಾಟ್ 121 ಎಸೆತಗಳಲ್ಲಿ 10 ಎಸೆತಗಳಲ್ಲಿ 101 ರನ್ ಗಳಿಸಿದರು.

35ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಈ ಶತಕ ಬಂದಿದೆ. ಇದು ಅವರ ODI ವೃತ್ತಿಜೀವನದ 49ನೇ ಶತಕ ಮತ್ತು ವಿಶ್ವಕಪ್ 2023ರಲ್ಲಿ ಎರಡನೇ ಶತಕವಾಗಿದೆ.

andolanait

Recent Posts

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

1 hour ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

2 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

4 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

4 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

5 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

6 hours ago