ಕ್ರೀಡೆ

ವಿರಾಟ್ ಕೊಹ್ಲಿ ಅಮೋಘ ಶತಕ: ದಕ್ಷಿಣ ಆಫ್ರಿಕಾಕ್ಕೆ ಗೆಲ್ಲಲು 327 ರನ್‌ ಗುರಿ

ಕೋಲ್ಕತ್ತಾ : ಐಸಿಸಿ ವಿಶ್ವಕಪ್ 2023ರ 37ನೇ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 326 ರನ್ ಗಳಿಸಿತು. ಇದೀಗ ಭಾರತವನ್ನು ಸೋಲಿಸಲು ದಕ್ಷಿಣ ಆಫ್ರಿಕಾ 50 ಓವರ್‌ಗಳಲ್ಲಿ 327 ರನ್ ಗಳಿಸಬೇಕಾಗಿದೆ. ಭಾರತದ ಪರ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅದ್ಭುತ ಇನ್ನಿಂಗ್ಸ್ ಆಡಿ 49ನೇ ಶತಕ ದಾಖಲಿಸಿದರು. ಇದರೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ ಸಚಿನ್ ತೆಂಡೂಲ್ಕರ್ ಅವರ ಗರಿಷ್ಠ 49 ಶತಕಗಳನ್ನು ಸರಿಗಟ್ಟಿದ್ದಾರೆ.

ಭಾರತಕ್ಕೆ ರೋಹಿತ್ ಶರ್ಮಾ ಮತ್ತು ಶುಭ್‌ಮನ್ ಗಿಲ್ ಉತ್ತಮ ಆರಂಭವನ್ನು ನೀಡಿದರು. ತಂಡವು 4.3 ಓವರ್‌ಗಳಲ್ಲಿ 50 ರನ್ ಪೂರೈಸಿತು. ರೋಹಿತ್ ಶರ್ಮಾ 24 ಎಸೆತಗಳಲ್ಲಿ 6 ಸ್ಫೋಟಕ ಬೌಂಡರಿ ಮತ್ತು 2 ಸಿಕ್ಸರ್‌ಗಳೊಂದಿಗೆ 40 ರನ್ ಗಳಿಸಿದರು. ಕಗಿಸೊ ರಬಾಡ ರೋಹಿತ್‌ ಶರ್ಮಾರನ್ನು ಔಟ್ ಮಾಡುವ ಮೂಲಕ ಆಫ್ರಿಕಾಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ಇದಾದ ಬಳಿಕ ಶುಭಮನ್ ಗಿಲ್ ಕೂಡ ದೊಡ್ಡ ಇನ್ನಿಂಗ್ಸ್ ಆಡಲಾಗದೆ 23 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ಇದಾದ ನಂತರ ವಿರಾಟ್ ಕೊಹ್ಲಿ ಅವರು ಶ್ರೇಯಸ್ ಅಯ್ಯರ್ ಜೊತೆಗೂಡಿ ಇನ್ನಿಂಗ್ಸ್ ಕೈಗೆತ್ತಿಕೊಂಡು ಸ್ಕೋರ್ ಹೆಚ್ಚಿಸಿದರು.

227 ರನ್‌ಗಳಿದ್ದಾಗ 37ನೇ ಓವರ್‌ನ ಐದನೇ ಎಸೆತದಲ್ಲಿ ಭಾರತಕ್ಕೆ ಮೂರನೇ ಹೊಡೆತ ಶ್ರೇಯಸ್ ಅಯ್ಯರ್ ರೂಪದಲ್ಲಿ ಬಂದಿತು. ಅಯ್ಯರ್ 87 ಎಸೆತಗಳಲ್ಲಿ 7 ಬೌಂಡರಿ ಮತ್ತು 2 ಸ್ಫೋಟಕ ಸಿಕ್ಸರ್‌ಗಳೊಂದಿಗೆ 77 ರನ್ ಗಳಿಸಿ ಲುಂಗಿ ಎನ್‌ಗಿಡಿ ಎಸೆತದಲ್ಲಿ ಮಾರ್ಕ್‌ರಾಮ್‌ಗೆ ಕ್ಯಾಚಿತ್ತು ಔಟಾದರು. ಇದಾದ ಬಳಿಕ ಕೆಎಲ್ ರಾಹುಲ್ 8 ರನ್ ಗಳಿಸಿ ಔಟಾದರು. 14 ಎಸೆತಗಳಲ್ಲಿ 22 ರನ್ ಗಳಿಸಿ ಸೂರ್ಯಕುಮಾರ್ ಯಾದವ್ ಔಟಾದರು. ನಂತರ ಬಂದ ರವೀಂದ್ರ ಜಡೇಜಾ 15 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 19 ರನ್ ಗಳಿಸಿ ಅಜೇಯರಾಗಿ ಉಳಿದರು.

ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ವಿರಾಟ್ ಕೊಹ್ಲಿ 119 ಎಸೆತಗಳಲ್ಲಿ 10 ಬೌಂಡರಿಗಳ ನೆರವಿನಿಂದ ತಮ್ಮ ODI ವೃತ್ತಿಜೀವನದ 49ನೇ ಶತಕ ದಾಖಲಿಸಿದರು. ಇದರೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ಶತಕ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಗಳಿಸಿದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಪಂದ್ಯದಲ್ಲಿ ವಿರಾಟ್ 121 ಎಸೆತಗಳಲ್ಲಿ 10 ಎಸೆತಗಳಲ್ಲಿ 101 ರನ್ ಗಳಿಸಿದರು.

35ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಈ ಶತಕ ಬಂದಿದೆ. ಇದು ಅವರ ODI ವೃತ್ತಿಜೀವನದ 49ನೇ ಶತಕ ಮತ್ತು ವಿಶ್ವಕಪ್ 2023ರಲ್ಲಿ ಎರಡನೇ ಶತಕವಾಗಿದೆ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

5 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

6 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

7 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

7 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

13 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

13 hours ago