ಕ್ರೀಡೆ

ವಿರಾಟ ಪ್ರದರ್ಶನ: ಲಂಕೆ ಎದುರು ಭಾರತಕ್ಕೆ ಭರ್ಜರಿ ಜಯ

  • ವರ್ಷದ ಮೊದಲ ಪಂದ್ಯದಲ್ಲಿ  ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ ಶತಕದಾಟ
  • ಗುವಾಹಟಿ: ಕಿಂಗ್‌ ವಿರಾಟ್‌ ಕೊಹ್ಲಿ ಅವರ ದಾಖಲೆಯ 45ನೇ ಶತಕದ ಬಲದಿಂದ ಭಾರತ ಗುವಾಹಟಿಯಲ್ಲಿ ನಡೆದ 2023ನೇ ವರ್ಷದ ಮೊದಲ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 67 ರನ್ ಗಳಿಂದ ಸೋಲಿಸಿ ಶುಭಾರಂಭ ಮಾಡಿದೆ.
    ಹೊಸ ವರುಷವನ್ನು ದಾಖಲೆ ಶತಕದೊಂದಿಗೆ ಆರಂಭಿಸಿರುವ ವಿರಾಟ್‌, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 3 ವರ್ಷಗಳ ಕಾಲ ಎದುರಿಸಿದ್ದ ಶತಕದ ಬರವನ್ನು ನೀಗಿಸಿಕೊಂಡಿದ್ದಾರೆ. ಜತೆಗೆ ತಮ್ಮ ದಾಖಲೆಗಳ ಪಟ್ಟಿಯನ್ನು ಮತ್ತಷ್ಟು ವಿಸ್ತರಿಸಿದ್ದಾರೆ.

    ಇಲ್ಲಿನ ಬಸ್ರಾಪರ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಭಾರತ ತಂಡ ತನ್ನ 50 ಓವರ್‌ಗಳಲ್ಲಿ 373/7 ರನ್‌ಗಳ ಬೃಹತ್‌ ಮೊತ್ತ ದಾಖಲಿಸಿತು. ರೋಹಿತ್‌ ಶರ್ಮಾ (83) ಮತ್ತು ಶುಭಮನ್‌ ಗಿಲ್‌ (70) ಮೊದಲ ವಿಕೆಟ್‌ಗೆ 143 ರನ್‌ಗಳ ಜೊತೆಯಾಟವಾಡಿ ಭಾರತದ ಬೃಹತ್‌ ಮೊತ್ತಕ್ಕೆ ಬೇಕಾದ ಭದ್ರ ಅಡಿಪಾಯ ಹಾಕಿದರು.

    ಆರಂಭಿಕರ ನಿರ್ಗಮನದ ಬಳಿಕ ತಂಡಕ್ಕೆ ಬೃಹತ್‌ ಮೊತ್ತ ತಂದುಕೊಡುವ ಜವಾಬ್ದಾರಿ ಹೊತ್ತು ಬ್ಯಾಟ್‌ ಬೀಸಿದ ವಿರಾಟ್‌ ಕೊಹ್ಲಿ, ಇನಿಂಗ್ಸ್‌ ಮಧ್ಯದಲ್ಲಿ ಸಿಕ್ಕ ಒಂದೆರಡು ಜೀವದಾನಗಳ ಸಂಪೂರ್ಣ ಲಾಭ ತೆಗೆದುಕೊಂಡು ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್‌ ವೃತ್ತಿಬದುಕಿನ 73ನೇ ಶತಕ ಸಿಡಿಸಿದರು. ಏಕದಿನ ಕ್ರಿಕೆಟ್‌ ಒಂದರಲ್ಲೇ ಕೊಹ್ಲಿ ಬಾರಿಸಿದ 45ನೇ ಶತಕ ಇದಾಗಿದೆ. ಈ ಮೂಲಕ ಬ್ಯಾಟಿಂಗ್‌ ದಿಗ್ಗಜ ಸಚಿನ್‌ ತೆಂಡೂಲ್ಕರ್‌ ಅವರ ಹೆಸರಲ್ಲಿದ್ದ ಬಹುದೊಡ್ಡ ದಾಖಲೆಯನ್ನು ಸರಿಗಟ್ಟಿದರು.
    ಬಿರುಸಿನ ಬ್ಯಾಟಿಂಗ್‌ ನಡೆಸಿದ ಕೊಹ್ಲಿ, 87 ಎಸೆತಗಳಲ್ಲಿ 12 ಫೋರ್‌ ಮತ್ತು 1 ಸಿಕ್ಸರ್‌ಗಳೊಂದಿಗೆ 113 ರನ್‌ ಸಿಡಿಸಿ 49ನೇ ಓವರ್‌ನಲ್ಲಿ ಔಟಾದರು.
    ಏಕದಿನ ಕ್ರಿಕೆಟ್‌ನಲ್ಲಿ 8 ಶತಕಗಳೊಂದಿಗೆ ಶ್ರೀಲಂಕಾ ಎದುರು ಅತಿ ಹೆಚ್ಚು ಶತಕ ಬಾರಿಸಿದ ದಾಖಲೆಯನ್ನು ಸಚಿನ್‌ ತೆಂಡೂಲ್ಕರ್‌ ಹೊಂದಿದ್ದರು. ಈಗ ಈ ದಾಖಲೆ 9 ಶತಕ ಬಾರಿಸಿದ ಕಿಂಗ್‌ ಕೊಹ್ಲಿ ಪಾಲಾಗಿದೆ.
    2022ರ ಡಿಸೆಂಬರ್‌ನಲ್ಲಿ ಬಾಂಗ್ಲಾದೇಶದ ಎದುರು ಮಿಂಚಿನ ಶತಕ ಬಾರಿಸಿದ್ದ ವಿರಾಟ್‌, ಇದೀಗ ಶ್ರೀಲಂಕಾ ಎದುರು ಮೂರಂಕಿಯ ಸ್ಕೋರ್‌ ಮಾಡಿ ಒಡಿಐ ಕ್ರಿಕೆಟ್‌ನಲ್ಲಿ ಬ್ಯಾಕ್‌ ಟು ಬ್ಯಾಕ್‌ ಶತಕದ ಸಾಧನೆ ಮೆರೆದಿದ್ದಾರೆ.

    ಬೃಹತ್ ಮೊತ್ತವನ್ನು ಬೆನ್ನತ್ತಿದ ಶ್ರೀಲಂಕಾ 50 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 306 ರನ್ ಗಳಿಸಿ 67 ರನ್‌ಗಳ ಸೋಲೊಪ್ಪಿಕೊಂಡಿತು. ನಾಯಕ ದಸುನ್ ಶನಕ 88 ಎಸೆತಗಳಲ್ಲಿ ಅಜೇಯ 108 ರನ್ ಗಳಿಸಿದರು, ಸೋಲಿನಿಂದ ತಂಡವನ್ನು ಪಾರುಮಾಡಲಾಗಲಿಲ್ಲ.

    ಟಿ20 ಸರಣಿಯಿಂದ ವಿಶ್ರಾಂತಿ ಪಡೆದು ವಾಪಸಾದ ವಿರಾಟ್ ಕೊಹ್ಲಿ ಸಾಕಷ್ಟು ಆತ್ಮವಿಶ್ವಾಸದಿಂದಲೇ ಬ್ಯಾಟಿಂಗ್ ಮಾಡಿದರು.
    ಏಕದಿನ ಕ್ರಿಕೆಟ್‌ನಲ್ಲಿ ಸಚಿನ್‌ರಿಗಿಂತ ಕಡಿಮೆ ಇನ್ನಿಂಗ್ಸ್‌ನಲ್ಲಿ 12500 ರನ್ ಗಳಿಸುವ ಮೂಲಕ ವೇಗವಾಗಿ 12500 ರನ್ ಗಳಿಸಿದ ಆಟಗಾರ ಎನಿಸಿಕೊಂಡರು. 73ನೇ ಶತಕವನ್ನು ಕೂಡ ಪೂರೈಸಿದ ಕೊಹ್ಲಿ, ಮೂರು ವರ್ಷಗಳ ಬಳಿಕ ಭಾರತದಲ್ಲಿ ಶತಕ ದಾಖಲಿಸಿದ ಸಾಧನೆ ಮಾಡಿದರು. ಅಂತಿಮವಾಗಿ 87 ಎಸೆತಗಳಲ್ಲಿ 113 ರನ್ ಗಳಿಸಿ ಔಟಾದರು.

    ವಿರಾಟ್ ಕೊಹ್ಲಿ ಭರ್ಜರಿ ಶತಕದ ನೆರವಿನಿಂದ ಟೀಂ ಇಂಡಿಯಾ 50 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 373 ರನ್ ಗಳಿಸಿತು. ಶ್ರೇಯಸ್ ಅಯ್ಯರ್ 24 ಎಸೆತಗಳಲ್ಲಿ 28 ರನ್ ಗಳಿಸಿ ಔಟಾದರು. ಕೆಎಲ್ ರಾಹುಲ್ 29 ಎಸೆತಗಳಲ್ಲಿ 39 ರನ್ ಗಳಿಸಿ ವಿರಾಟ್ ಕೊಹ್ಲಿಗೆ ಉತ್ತಮ ಸಾಥ್ ನೀಡಿದರು.
    ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ 12 ಎಸೆತಗಳಲ್ಲಿ 14 ರನ್ ಗಳಿಸಿ ಸಿಕ್ಸರ್ ಬಾರಿಸುವ ಯತ್ನದಲ್ಲಿ ಕ್ಯಾಚ್ ನೀಡಿ ಔಟಾದರು. ಅಕ್ಷರ್ ಪಟೇಲ್ 9 ರನ್ ಗಳಿಸಿ ಔಟಾದರು. ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಕ್ರಮವಾಗಿ ಅಜೇಯ 4 ಮತ್ತು 7 ರನ್ ಗಳಿಸಿದರು.
    ಶ್ರೀಲಂಕಾ ಪರವಾಗಿ ಕಸುನ್ ರಜಿತ 3 ವಿಕೆಟ್ ಪಡೆದು ಮಿಂಚಿದರು. ದಿಲ್ಷುನ್ ಮಧುಶಂಕ, ಚಮಿಕಾ ಕರುಣರತ್ನೆ, ದಸುನ್ ಶನಕ ಮತ್ತು ಧನಂಜಯ ಡಿಸಿಲ್ವ ತಲಾ ಒಂದು ವಿಕೆಟ್ ಪಡೆದರು.

    ಟೀಂ ಇಂಡಿಯಾ ನೀಡಿದ ಬೃಹತ್ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ಆರಂಭದಲ್ಲೇ ಆಘಾತ ಅನುಭವಿಸಿತು. ಆರಂಭದಲ್ಲೇ ಆವಿಷ್ಕಾ ಫರ್ನಾಂಡೋ (5), ಕುಶಾಲ್ ಮೆಂಡಿಸ್ (0) ಔಟ್ ಮಾಡುವ ಮೂಲಕ ಮೊಹಮ್ಮದ್ ಸಿರಾಜ್‌ ಶ್ರೀಲಂಕಾ ತಂಡಕ್ಕೆ ಆಘಾತ ನೀಡಿದರು.
    ಪಾಥುಮ್ ನಿಸಾಂಕ 72 ರನ್ ಗಳಿಸಿ ಹೋರಾಟ ನೀಡಿದರು, ಉಮ್ರಾನ್ ಮಲಿಕ್‌ ಅವರನ್ನು ಔಟ್ ಮಾಡಿದರು. ಶ್ರೀಲಂಕಾ ನಾಯಕ ದಸುನ್ ಶನಕ ಶತಕ ಗಳಿಸಿದರೂ ಕೂಡ ತಂಡವನ್ನು ಸೋಲಿನಿಂದ ತಪ್ಪಿಸಲು ಸಾಧ್ಯವಾಗಲಿಲ್ಲ. 88 ಎಸೆತಗಳಲ್ಲಿ 12 ಬೌಂಡರಿ 3 ಸಿಕ್ಸರ್ ಸಹಿತ 108 ರನ್ ಗಳಿಸಿದರು.
    ವೇಗಿ ಉಮ್ರಾನ್ ಮಲಿಕ್ 3 ವಿಕೆಟ್ ಪಡೆದು ಮಿಂಚಿದರೆ, ಮೊಹಮ್ಮದ್ ಸಿರಾಜ್ 2 ವಿಕೆಟ್ ಪಡೆದರು. ಮೊಹಮ್ಮದ್ ಶಮಿ, ಹಾರ್ದಿಕ್ ಪಾಂಡ್ಯ, ಯುಜುವೇಂದ್ರ ಚಹಾಲ್ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

    ಪಂದ್ಯದ ಸಂಕ್ಷಿಪ್ತ ಸ್ಕೋರ್‌:
    ಟೀಮ್ ಇಂಡಿಯಾ: 50 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 373 ರನ್‌ (ರೋಹಿತ್‌ ಶರ್ಮಾ 83, ಶುಭಮನ್ ಗಿಲ್ 70, ವಿರಾಟ್‌ ಕೊಹ್ಲಿ 113, ಶ್ರೇಯಸ್‌ ಅಯ್ಯರ್ 28, ಕೆ.ಎಲ್ ರಾಹುಲ್ 39, ಹಾರ್ದಿಕ್ ಪಾಂಡ್ಯ 14; ಕಸುನ್‌ ರಜಿತ 88ಕ್ಕೆ 3, ಧನಂಜಯ ಡಿ’ಸಿಲ್ವಾ 33ಕ್ಕೆ 1, ದಸುನ್ ಶನಕ 22ಕ್ಕೆ 1).

     

lokesh

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

1 hour ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

1 hour ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

1 hour ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

1 hour ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

1 hour ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

1 hour ago