ಕ್ರೀಡೆ

ಉತ್ತಮ ಆಹಾರಕ್ಕಾಗಿ ಪಾಕ್‌ಗೆ ಭೇಟಿ ನೀಡಿ: ಕ್ಯಾಪ್ಟನ್‌ ಕೂಲ್‌ ಹೇಳಿದ್ದೇನು!

ನವದೆಹಲಿ: ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರ ಆಹಾರದ ಮೇಲಿನ ವ್ಯಾಮೋಹ ವಿಶ್ವದಾದ್ಯಂತ ಇರುವ ಅವರ ಅಭಿಮಾನಿಗಳಿಗೆ ಚೆನ್ನಾಗಿಯೇ ತಿಳಿದಿದೆ. ಧೋನಿ ಅವರು ಪಾಕಿಸ್ತಾನದ ಪಾಕ ಪದ್ಧತಿಯ ಮಹಾನ್ ಅಭಿಮಾನಿಯಾಗಿದ್ದಾರೆ.

ಉತ್ತಮ ಆಹಾರದ ರುಚಿಯನ್ನು ಅನುಭವಿಸಲು ಪಾಕಿಸ್ತಾನಕ್ಕೆ ಭೇಟಿ ನೀಡುವಂತೆ ತಮ್ಮ ಅಭಿಮಾನಿಯೊಬ್ಬರಿಗೆ ಧೋನಿ ಸಲಹೆ ನೀಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೊದಲ್ಲಿ ಚೆನೈ ಸೂಪರ್ ಕಿಂಗ್ಸ್ ನಾಯಕ ಧೋನಿ ಅವರು ತಮಗೆ ಉತ್ತಮ ಆಹಾರಕ್ಕಾಗಿ ಪಾಕಿಸ್ತಾನಕ್ಕೆ ಭೇಟಿ ನೀಡಿ ಎಂದು ಅಭಿಮಾನಿಯೊಬ್ಬರಿಗೆ ಸಲಹೆ ನೀಡಿದ್ದಾರೆ.

ಅಲ್ಲಿ ಒಳ್ಳೆಯ ಆಹಾರ ಇದೆ ಎಂದು ಹೇಳಿದರೂ ನಾನು ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಅಭಿಮಾನಿ ಸಭ್ಯ ರೀತಿಯಲ್ಲಿ ಪ್ರತಿಕ್ರಿಯಿಸಿದರು.

ಧೋನಿ ತಮ್ಮ ವೃತ್ತಿಜೀವನದ ಆರಂಭಿಕ ಹಂತದಲ್ಲಿ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿದ್ದರು. ಅಲ್ಲಿ ಅವರು ಭಾರತದ ಏಕದಿನ ಸರಣಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

2024ರ ಐಪಿಎಲ್ ಆವೃತ್ತಿಯ ಮೊದಲು ಧೋನಿ ಸಂಪೂರ್ಣವಾಗಿ ಫಿಟ್ ಆಗುತ್ತಾರೆಂಬ ಕುರಿತು ನಾನು ಆಶಾವಾದಿಯಾಗಿದ್ದೇನೆ. ನಮ್ಮ ತಂಡದ ನಾಯಕ ಮೊಣಕಾಲಿನ ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಂಡಿದ್ದಾರೆ. ಅವರು ಶೀಘ್ರವೇ ನೆಟ್ ಪಾಕ್ಸಿಸ್ ಆರಂಭಿಸಲಿದ್ದಾರೆ ಎಂದು ಇತ್ತೀಚೆಗೆ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಶಿ ವಿಶ್ವನಾಥನ್ ಹೇಳಿದ್ದಾರೆ.

andolanait

Recent Posts

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

1 hour ago

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಸಿ.ಪಿ.ಯೋಗೇಶ್ವರ್‌

ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…

3 hours ago

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

5 hours ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

5 hours ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

5 hours ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

5 hours ago