ಕ್ರೀಡೆ

ಉತ್ತಮ ಆಹಾರಕ್ಕಾಗಿ ಪಾಕ್‌ಗೆ ಭೇಟಿ ನೀಡಿ: ಕ್ಯಾಪ್ಟನ್‌ ಕೂಲ್‌ ಹೇಳಿದ್ದೇನು!

ನವದೆಹಲಿ: ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರ ಆಹಾರದ ಮೇಲಿನ ವ್ಯಾಮೋಹ ವಿಶ್ವದಾದ್ಯಂತ ಇರುವ ಅವರ ಅಭಿಮಾನಿಗಳಿಗೆ ಚೆನ್ನಾಗಿಯೇ ತಿಳಿದಿದೆ. ಧೋನಿ ಅವರು ಪಾಕಿಸ್ತಾನದ ಪಾಕ ಪದ್ಧತಿಯ ಮಹಾನ್ ಅಭಿಮಾನಿಯಾಗಿದ್ದಾರೆ.

ಉತ್ತಮ ಆಹಾರದ ರುಚಿಯನ್ನು ಅನುಭವಿಸಲು ಪಾಕಿಸ್ತಾನಕ್ಕೆ ಭೇಟಿ ನೀಡುವಂತೆ ತಮ್ಮ ಅಭಿಮಾನಿಯೊಬ್ಬರಿಗೆ ಧೋನಿ ಸಲಹೆ ನೀಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೊದಲ್ಲಿ ಚೆನೈ ಸೂಪರ್ ಕಿಂಗ್ಸ್ ನಾಯಕ ಧೋನಿ ಅವರು ತಮಗೆ ಉತ್ತಮ ಆಹಾರಕ್ಕಾಗಿ ಪಾಕಿಸ್ತಾನಕ್ಕೆ ಭೇಟಿ ನೀಡಿ ಎಂದು ಅಭಿಮಾನಿಯೊಬ್ಬರಿಗೆ ಸಲಹೆ ನೀಡಿದ್ದಾರೆ.

ಅಲ್ಲಿ ಒಳ್ಳೆಯ ಆಹಾರ ಇದೆ ಎಂದು ಹೇಳಿದರೂ ನಾನು ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಅಭಿಮಾನಿ ಸಭ್ಯ ರೀತಿಯಲ್ಲಿ ಪ್ರತಿಕ್ರಿಯಿಸಿದರು.

ಧೋನಿ ತಮ್ಮ ವೃತ್ತಿಜೀವನದ ಆರಂಭಿಕ ಹಂತದಲ್ಲಿ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿದ್ದರು. ಅಲ್ಲಿ ಅವರು ಭಾರತದ ಏಕದಿನ ಸರಣಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

2024ರ ಐಪಿಎಲ್ ಆವೃತ್ತಿಯ ಮೊದಲು ಧೋನಿ ಸಂಪೂರ್ಣವಾಗಿ ಫಿಟ್ ಆಗುತ್ತಾರೆಂಬ ಕುರಿತು ನಾನು ಆಶಾವಾದಿಯಾಗಿದ್ದೇನೆ. ನಮ್ಮ ತಂಡದ ನಾಯಕ ಮೊಣಕಾಲಿನ ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಂಡಿದ್ದಾರೆ. ಅವರು ಶೀಘ್ರವೇ ನೆಟ್ ಪಾಕ್ಸಿಸ್ ಆರಂಭಿಸಲಿದ್ದಾರೆ ಎಂದು ಇತ್ತೀಚೆಗೆ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಶಿ ವಿಶ್ವನಾಥನ್ ಹೇಳಿದ್ದಾರೆ.

andolanait

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

1 hour ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

1 hour ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

1 hour ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

1 hour ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

1 hour ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

2 hours ago