ಕ್ರೀಡೆ

ಟಿ20 ವಿಶ್ವಕಪ್‌ ಗೆದ್ದ ಭಾರತ: ವಿರಾಟ್‌, ರೋಹಿತ್‌ಗೆ ವಿಶೇಷ ಗೌರವ ಸಲ್ಲಿಸಿದ ವಿಸ್ತಾರ ವಿಮಾನ!

ನವದೆಹಲಿ: ಅಮೇರಿಕಾ ಹಾಗೂ ವೆಸ್ಟ್‌ ಇಂಡೀಸ್‌ ಸಹಭಾಗಿತ್ವದಲ್ಲಿ ನಡೆದ 9ನೇ ಆವೃತ್ತಿಯ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಟೀಂ ಇಂಡಿಯಾ ಗೆದ್ದು ಟ್ರೋಫಿ ಮುಡಿಗೇರಿಸಿಕೊಂಡಿದೆ. ಇನ್ನು ಟೀಂ ಇಂಡಿಯಾ ಆಟಗಾರರು ಇಂದು ವೆಸ್ಟ್‌ ಇಂಡೀಸ್‌ನಿಂದ ಭಾರತಕ್ಕೆ ಬಂದಿಳಿದಿದ್ದಾರೆ.

ಭಾರತಕ್ಕೆ ಬಂದ ಟೀಂ ಇಂಡಿಯಾ ಆಟಗಾರರನ್ನು ಪ್ರಧಾನಿ ಮೋದಿ ಸ್ವಾಗತಿಸಿದರು. ಬಳಿಕ ಮೋದಿ ಟೀಂ ಇಂಡಿಯಾ ಆಟಗಾರರ ಜೊತೆ ಸಂವಾದ ನಡೆಸಿದರು.

ಇದೇ ವೇಳೆ ವಿಮಾನಯಾನ ಸಂಸ್ಥೆ ವಿಸ್ತಾರ ಏರ್‌ಲೈನ್ಸ್‌ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಅವರಿಗೆ ವಿಶ್ವಕಪ್‌ ಜಯಿಸಿದ್ದಕ್ಕಾಗಿ ವಿಶೇಷ ಗೌರವ ಸಲ್ಲಿಸಿದೆ.

ದೆಹಲಿಯಿಂದ ಮುಂಬೈ ಆಗಮಿದ ವಿಮಾನ UK1845 ಇದಾಗಿದ್ದು, ವಿರಾಟ್‌ ಕೊಹ್ಲಿಯ ಜೆರ್ಸಿ ನಂಬರ್‌ 18 ಹಾಗೂ ರೋಹಿತ್‌ ಜೆರ್ಸಿ ನಂಬರ್‌ 45ನ್ನು ಜೋಡಿಸಿ ಹೇಳುವ ಮೂಲಕ ಟೀಂ ಇಂಡಿಯಾ ಲೆಜೆಂಡ್ಸ್‌ಗೆ ಟ್ರಿಬ್ಯೂಟ್‌ ನೀಡಿದೆ.

ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ವಿಸ್ತಾರ ಮಾಹಿತಿ ಹಂಚಿಕೊಂಡಿದ್ದು, UK1845 #staytuned ಎಂದು ಹ್ಯಾಷ್‌ಟ್ಯಾಗ್‌ ಬಳಸಿ ಗೌರವಿಸಿದೆ. ಸದ್ಯ ಇದು ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ ಆಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

11 seconds ago

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

40 mins ago

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

1 hour ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

2 hours ago

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

5 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

5 hours ago