ಕ್ರೀಡೆ

ಲಕ್ಷ್ಮಣ್‌ ಹೆಗಲಿಗೆ ಭಾರತ ಕ್ರಿಕೆಟ್‌ ತಂಡದ ಜವಬ್ಧಾರಿ !

ಮುಂಬೈ: ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥ ವಿವಿಎಸ್‌ ಲಕ್ಷ್ಮಣ್ ಬಿಸಿಸಿಐ ಮುಖ್ಯ ಕೋಚ್ ಸ್ಥಾನಕ್ಕೆ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಅವರು ಟೀಮ್ ಇಂಡಿಯಾದ ಮುಖ್ಯ ತರಬೇತುದಾರರಾಗಿ ದೀರ್ಘಾವಧಿಯ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆಯಿದೆ ಎನ್ನಲಾಗಿದೆ.

ಏಕದಿನ ವಿಶ್ವಕಪ್ 2023 ರ ನಂತರ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭಾರತ ತಂಡದೊಂದಿಗೆ ತನ್ನ ಎರಡು ವರ್ಷಗಳ ಒಪ್ಪಂದವನ್ನು ವಿಸ್ತರಿಸಲು ಆಸಕ್ತಿ ತೋರಿಸುತ್ತಿಲ್ಲ ಹೀಗಾಗಿ ಪ್ರಸ್ತುತ ಎಸ್​ಸಿಎ ನಿರ್ದೇಶಕ ವಿವಿಎಸ್ ಲಕ್ಷ್ಮಣ್ ಅವರನ್ನು ದ್ರಾವಿಡ್ ಬದಲಿಗೆ ಮುಖ್ಯ ಕೋಚ್ ಆಗಿ ಆಯ್ಕೆ ಆಗಲಿದ್ದಾರೆ ಎನ್ನಲಾಗಿದೆ.
ಸದ್ಯ ವೈಜಾಗ್‌ನಲ್ಲಿ ಆರಂಭವಾಗಿರುವ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20I ಸರಣಿಗೆ ದ್ರಾವಿಡ್ ಅವರ ಆಪ್ತ ಸ್ನೇಹಿತ ಲಕ್ಷ್ಮಣ್ ಕೋಚ್ ಆಗಿ ಆಯ್ಕೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿರುವ ಲಕ್ಷ್ಮಣ್, ಮುಖ್ಯ ಕೋಚ್ ಸ್ಥಾನಕ್ಕೆ ಆಸಕ್ತಿ ತೋರಿಸಿದ್ದಾರಂತೆ. ಟೀಮ್ ಇಂಡಿಯಾದ ಮುಖ್ಯ ತರಬೇತುದಾರರಾಗಿ ದೀರ್ಘಾವಧಿಯ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆಯಿದೆ ಎನ್ನಲಾಗಿದೆ.

ಬಿಸಿಸಿಐ ಮುಖ್ಯಸ್ಥರನ್ನು ಭೇಟಿಯಾದ ಲಕ್ಷ್ಮಣ್‌!
ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ ಫೈನಲ್‌ನಲ್ಲಿನ ಸೋಲು ರಾಹುಲ್ ದ್ರಾವಿಡ್ ಅವರ ಮುಖ್ಯ ಕೋಚ್ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರದಲ್ಲಿ ಪ್ರಮುಖ ಪಾತ್ರ ವಹಿಸಿದೆ. ”ಲಕ್ಷ್ಮಣ್ ಅವರು ಕೋಚ್ ಸ್ಥಾನಕ್ಕೆ ಆಸಕ್ತಿ ವ್ಯಕ್ತಪಡಿಸಿದ್ದಾರೆ. ವಿಶ್ವಕಪ್ ಸಮಯದಲ್ಲಿ, ಲಕ್ಷ್ಮಣ್ ಬಿಸಿಸಿಐನ ಉನ್ನತ ಮುಖ್ಯಸ್ಥರನ್ನು ಭೇಟಿ ಮಾಡಲು ಅಹ್ಮದಾಬಾದ್‌ಗೆ ಕೂಡ ತೆರಳಿದ್ದರು. ಟೀಮ್ ಇಂಡಿಯಾ ಕೋಚ್ ಆಗಿ ದೀರ್ಘಾವಧಿಯ ಒಪ್ಪಂದಕ್ಕೆ ಲಕ್ಷ್ಮಣ್‌ ಸಹಿ ಹಾಕುವ ಸಾಧ್ಯತೆಯಿದೆ ಮತ್ತು ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಖಾಯಂ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ,” ಎಂದು ಬಿಸಿಸಿಐ ಟೈಮ್ಸ್‌ ಆಫ್‌ ಇಂಡಿಯಾಗೆ ತಿಳಿಸಿದೆ.

andolanait

Recent Posts

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

1 hour ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

1 hour ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

2 hours ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

3 hours ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

3 hours ago

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

4 hours ago