ಮುಂಬೈ: ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಬಿಸಿಸಿಐ ಮುಖ್ಯ ಕೋಚ್ ಸ್ಥಾನಕ್ಕೆ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಅವರು ಟೀಮ್ ಇಂಡಿಯಾದ ಮುಖ್ಯ ತರಬೇತುದಾರರಾಗಿ ದೀರ್ಘಾವಧಿಯ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆಯಿದೆ ಎನ್ನಲಾಗಿದೆ.
ಏಕದಿನ ವಿಶ್ವಕಪ್ 2023 ರ ನಂತರ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭಾರತ ತಂಡದೊಂದಿಗೆ ತನ್ನ ಎರಡು ವರ್ಷಗಳ ಒಪ್ಪಂದವನ್ನು ವಿಸ್ತರಿಸಲು ಆಸಕ್ತಿ ತೋರಿಸುತ್ತಿಲ್ಲ ಹೀಗಾಗಿ ಪ್ರಸ್ತುತ ಎಸ್ಸಿಎ ನಿರ್ದೇಶಕ ವಿವಿಎಸ್ ಲಕ್ಷ್ಮಣ್ ಅವರನ್ನು ದ್ರಾವಿಡ್ ಬದಲಿಗೆ ಮುಖ್ಯ ಕೋಚ್ ಆಗಿ ಆಯ್ಕೆ ಆಗಲಿದ್ದಾರೆ ಎನ್ನಲಾಗಿದೆ.
ಸದ್ಯ ವೈಜಾಗ್ನಲ್ಲಿ ಆರಂಭವಾಗಿರುವ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20I ಸರಣಿಗೆ ದ್ರಾವಿಡ್ ಅವರ ಆಪ್ತ ಸ್ನೇಹಿತ ಲಕ್ಷ್ಮಣ್ ಕೋಚ್ ಆಗಿ ಆಯ್ಕೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿರುವ ಲಕ್ಷ್ಮಣ್, ಮುಖ್ಯ ಕೋಚ್ ಸ್ಥಾನಕ್ಕೆ ಆಸಕ್ತಿ ತೋರಿಸಿದ್ದಾರಂತೆ. ಟೀಮ್ ಇಂಡಿಯಾದ ಮುಖ್ಯ ತರಬೇತುದಾರರಾಗಿ ದೀರ್ಘಾವಧಿಯ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆಯಿದೆ ಎನ್ನಲಾಗಿದೆ.
ಬಿಸಿಸಿಐ ಮುಖ್ಯಸ್ಥರನ್ನು ಭೇಟಿಯಾದ ಲಕ್ಷ್ಮಣ್!
ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ ಫೈನಲ್ನಲ್ಲಿನ ಸೋಲು ರಾಹುಲ್ ದ್ರಾವಿಡ್ ಅವರ ಮುಖ್ಯ ಕೋಚ್ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರದಲ್ಲಿ ಪ್ರಮುಖ ಪಾತ್ರ ವಹಿಸಿದೆ. ”ಲಕ್ಷ್ಮಣ್ ಅವರು ಕೋಚ್ ಸ್ಥಾನಕ್ಕೆ ಆಸಕ್ತಿ ವ್ಯಕ್ತಪಡಿಸಿದ್ದಾರೆ. ವಿಶ್ವಕಪ್ ಸಮಯದಲ್ಲಿ, ಲಕ್ಷ್ಮಣ್ ಬಿಸಿಸಿಐನ ಉನ್ನತ ಮುಖ್ಯಸ್ಥರನ್ನು ಭೇಟಿ ಮಾಡಲು ಅಹ್ಮದಾಬಾದ್ಗೆ ಕೂಡ ತೆರಳಿದ್ದರು. ಟೀಮ್ ಇಂಡಿಯಾ ಕೋಚ್ ಆಗಿ ದೀರ್ಘಾವಧಿಯ ಒಪ್ಪಂದಕ್ಕೆ ಲಕ್ಷ್ಮಣ್ ಸಹಿ ಹಾಕುವ ಸಾಧ್ಯತೆಯಿದೆ ಮತ್ತು ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಖಾಯಂ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ,” ಎಂದು ಬಿಸಿಸಿಐ ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದೆ.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…