ಕ್ರೀಡೆ

ಏಕದಿನ ಕ್ರಿಕೆಟ್‌ ದಿಢೀರ್‌ ನಿವೃತ್ತಿ ಘೋಷಿಸಿದ ವಾರ್ನರ್‌!

ನವದೆಹಲಿ : ಪಾಕಿಸ್ತಾನದ ವಿರುದ್ಧ ನಡೆಯುತ್ತಿರುವ ಮೂರು ಟೆಸ್ಟ್ ಸರಣಿಯ ನಂತರ ನಿವೃತ್ತರಾಗುವುದಕ್ಕೂ ಮುನ್ನವೇ ಆಸ್ಟ್ರೇಲಿಯಾ ತಂಡದ ಸ್ಪೋಟಕ ಎಡಗೈ ಬ್ಯಾಟರ್ 37 ವರ್ಷದ ಡೇವಿಡ್ ವಾರ್ನರ್ ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.

ಅಗತ್ಯ ಬಿದ್ದರೆ 2025ರಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಕ್ರೀಡಾಕೂಟದಲ್ಲಿ ತಾನು ಭಾಗವಹಿಸುವ ಸಾಧ್ಯತೆಯನ್ನು ಅವರು ಅಲ್ಲಗಳೆದಿಲ್ಲ.

ಬುಧವಾರ ತಮ್ಮ ತವರಾದ ಸಿಡ್ನಿಯಲ್ಲಿ ಪಾಕ್‌ ವಿರುದ್ಧ ನಡೆಯಲಿರುವ ಅಂತಿಮ ಟೆಸ್ಟ್‌ ಪಂದ್ಯದಲ್ಲಿ ತಮ್ಮ ಕೊನೆಯ 112ನೇ ಪಂದ್ಯದಲ್ಲಿ ಡೇವಿಡ್ ವಾರ್ನರ್ ಕಣಕ್ಕಿಳಿಯಲಿದ್ದಾರೆ.

ತಮ್ಮ ಟೆಸ್ಟ್ ಕ್ರಿಕೆಟ್ ಜೀವನದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಡೇವಿಡ್ ವಾರ್ನರ್, 44.58 ರನ್ ಸರಾಸರಿಯೊಂದಿಗೆ 8,695 ರನ್ ಗಳನ್ನು ಕಲೆ ಹಾಕಿದ್ದಾರೆ. ಈ ಪೈಕಿ 26 ಶತಕಗಳು ಹಾಗೂ 36 ಅರ್ಧ ಶತಕಗಳಿವೆ.

ಸಿಡ್ನಿ ಕ್ರಿಕೆಟ್ ಗೌಂಡ್‌ನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕ್ರಿಕೆಟಿಕ, ಏಕದಿನ ಕ್ರಿಕೆಟ್‌ನಿಂದಲೂ ನಿವೃತ್ತರಾಗುತ್ತಿರುವುದನ್ನು ದೃಢಪಡಿಸಿದರು. 2009ರಲ್ಲಿ ಅವರು ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದಂದಿನಿಂದ ಇದುವರೆಗೂ ಅವರು ಆಸ್ಟ್ರೇಲಿಯಾ ತಂಡದ ಅವಿಭಾಜ್ಯ ಅಂಗವಾಗಿದ್ದರು. 2015 ಹಾಗೂ 2023ರಲ್ಲಿ ವಿಶ್ವಕಪ್ ಜಯಿಸಿದ ಆಸ್ಟ್ರೇಲಿಯಾ ತಂಡದಲ್ಲಿ ವಾರ್ನರ್‌ ಇದ್ದರು.

ಇದುವರೆಗೆ 161 ಏಕದಿನ ಪಂದ್ಯಗಳನ್ನಾಡಿರುವ ಡೇವಿಡ್ ವಾರ್ನರ್, 45.30 ರನ್ ಸರಾಸರಿಯಲ್ಲಿ ಒಟ್ಟು 6,932 ರನ್ ಗಳಿಸಿದ್ದಾರೆ. ಇದರಲ್ಲಿ 22 ಶತಕಗಳು ಸೇರಿವೆ. ಆಸ್ಟ್ರೇಲಿಯಾ ತಂಡದ ಪರ ಅತಿ ಹೆಚ್ಚು ಶತಕಗಳನ್ನು ಬಾರಿಸಿರುವವರ ಪೈಕಿ ರಿಕಿ ಪಾಂಟಿಂಗ್ ನಂತರ ಡೇವಿಡ್ ವಾರ್ನರ್ ಎರಡನೆಯ ಸ್ಥಾನದಲ್ಲಿದ್ದಾರೆ. ರಿಕಿ ಪಾಂಟಿಂಗ್ ಒಟ್ಟು 30 ಶತಕಗಳನ್ನು ಗಳಿಸಿದ್ದಾರೆ.

ಡೇವಿಡ್ ವಾರ್ನರ್ ಟಿ-20 ಮಾದರಿಯ ಕ್ರಿಕೆಟ್‌ನಲ್ಲಿ ತಮ್ಮ ಆಟ ಮುಂದುವರಿಸಲಿದ್ದು, ವೆಸ್ಟ್ ಇಂಡೀಸ್ ಹಾಗೂ ಅಮೆರಿಕಾದಲ್ಲಿ ನಡೆಯಲಿರುವ 2024ರ ಟಿ-20 ವಿಶ್ವಕಪ್ ನಲ್ಲಿ ಆಡುವ ಗುರಿ ಹೊಂದಿದ್ದಾರೆ.

andolanait

Recent Posts

ಲಂಚಕ್ಕೆ ಬೇಡಿಕೆ : ಪಿಎಸ್ಐ ಚೇತನ್ ಲೋಕಾ ಬಲೆಗೆ

ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…

1 hour ago

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

2 hours ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

2 hours ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

2 hours ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

3 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

3 hours ago