ಕ್ರೀಡೆ

ಏಕದಿನ ಕ್ರಿಕೆಟ್‌ ದಿಢೀರ್‌ ನಿವೃತ್ತಿ ಘೋಷಿಸಿದ ವಾರ್ನರ್‌!

ನವದೆಹಲಿ : ಪಾಕಿಸ್ತಾನದ ವಿರುದ್ಧ ನಡೆಯುತ್ತಿರುವ ಮೂರು ಟೆಸ್ಟ್ ಸರಣಿಯ ನಂತರ ನಿವೃತ್ತರಾಗುವುದಕ್ಕೂ ಮುನ್ನವೇ ಆಸ್ಟ್ರೇಲಿಯಾ ತಂಡದ ಸ್ಪೋಟಕ ಎಡಗೈ ಬ್ಯಾಟರ್ 37 ವರ್ಷದ ಡೇವಿಡ್ ವಾರ್ನರ್ ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.

ಅಗತ್ಯ ಬಿದ್ದರೆ 2025ರಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಕ್ರೀಡಾಕೂಟದಲ್ಲಿ ತಾನು ಭಾಗವಹಿಸುವ ಸಾಧ್ಯತೆಯನ್ನು ಅವರು ಅಲ್ಲಗಳೆದಿಲ್ಲ.

ಬುಧವಾರ ತಮ್ಮ ತವರಾದ ಸಿಡ್ನಿಯಲ್ಲಿ ಪಾಕ್‌ ವಿರುದ್ಧ ನಡೆಯಲಿರುವ ಅಂತಿಮ ಟೆಸ್ಟ್‌ ಪಂದ್ಯದಲ್ಲಿ ತಮ್ಮ ಕೊನೆಯ 112ನೇ ಪಂದ್ಯದಲ್ಲಿ ಡೇವಿಡ್ ವಾರ್ನರ್ ಕಣಕ್ಕಿಳಿಯಲಿದ್ದಾರೆ.

ತಮ್ಮ ಟೆಸ್ಟ್ ಕ್ರಿಕೆಟ್ ಜೀವನದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಡೇವಿಡ್ ವಾರ್ನರ್, 44.58 ರನ್ ಸರಾಸರಿಯೊಂದಿಗೆ 8,695 ರನ್ ಗಳನ್ನು ಕಲೆ ಹಾಕಿದ್ದಾರೆ. ಈ ಪೈಕಿ 26 ಶತಕಗಳು ಹಾಗೂ 36 ಅರ್ಧ ಶತಕಗಳಿವೆ.

ಸಿಡ್ನಿ ಕ್ರಿಕೆಟ್ ಗೌಂಡ್‌ನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕ್ರಿಕೆಟಿಕ, ಏಕದಿನ ಕ್ರಿಕೆಟ್‌ನಿಂದಲೂ ನಿವೃತ್ತರಾಗುತ್ತಿರುವುದನ್ನು ದೃಢಪಡಿಸಿದರು. 2009ರಲ್ಲಿ ಅವರು ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದಂದಿನಿಂದ ಇದುವರೆಗೂ ಅವರು ಆಸ್ಟ್ರೇಲಿಯಾ ತಂಡದ ಅವಿಭಾಜ್ಯ ಅಂಗವಾಗಿದ್ದರು. 2015 ಹಾಗೂ 2023ರಲ್ಲಿ ವಿಶ್ವಕಪ್ ಜಯಿಸಿದ ಆಸ್ಟ್ರೇಲಿಯಾ ತಂಡದಲ್ಲಿ ವಾರ್ನರ್‌ ಇದ್ದರು.

ಇದುವರೆಗೆ 161 ಏಕದಿನ ಪಂದ್ಯಗಳನ್ನಾಡಿರುವ ಡೇವಿಡ್ ವಾರ್ನರ್, 45.30 ರನ್ ಸರಾಸರಿಯಲ್ಲಿ ಒಟ್ಟು 6,932 ರನ್ ಗಳಿಸಿದ್ದಾರೆ. ಇದರಲ್ಲಿ 22 ಶತಕಗಳು ಸೇರಿವೆ. ಆಸ್ಟ್ರೇಲಿಯಾ ತಂಡದ ಪರ ಅತಿ ಹೆಚ್ಚು ಶತಕಗಳನ್ನು ಬಾರಿಸಿರುವವರ ಪೈಕಿ ರಿಕಿ ಪಾಂಟಿಂಗ್ ನಂತರ ಡೇವಿಡ್ ವಾರ್ನರ್ ಎರಡನೆಯ ಸ್ಥಾನದಲ್ಲಿದ್ದಾರೆ. ರಿಕಿ ಪಾಂಟಿಂಗ್ ಒಟ್ಟು 30 ಶತಕಗಳನ್ನು ಗಳಿಸಿದ್ದಾರೆ.

ಡೇವಿಡ್ ವಾರ್ನರ್ ಟಿ-20 ಮಾದರಿಯ ಕ್ರಿಕೆಟ್‌ನಲ್ಲಿ ತಮ್ಮ ಆಟ ಮುಂದುವರಿಸಲಿದ್ದು, ವೆಸ್ಟ್ ಇಂಡೀಸ್ ಹಾಗೂ ಅಮೆರಿಕಾದಲ್ಲಿ ನಡೆಯಲಿರುವ 2024ರ ಟಿ-20 ವಿಶ್ವಕಪ್ ನಲ್ಲಿ ಆಡುವ ಗುರಿ ಹೊಂದಿದ್ದಾರೆ.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

11 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

11 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

11 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

11 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

11 hours ago