ಕರಾಚಿ/ದುಬೈ: ಏಷ್ಯಾ ಕಪ್ ವಿಚಾರದಲ್ಲಿ ಈಗಾಗಲೇ ನೆರೆ ಹೊರೆಯ ದೇಶಗಳಿಂದ ಮುಖಭಂಗಕ್ಕೆ ಒಳಗಾಗಿರುವ ಪಾಕಿಸ್ತಾನ, ಈಗ ಭಾರತದಲ್ಲಿ ನಡೆಯುವ ವಿಶ್ವಕಪ್ ವಿಚಾರದಲ್ಲಿ ಹೊಸ ನಕಾರಾತ್ಮಕ ತಂತ್ರದ ಮೊರೆ ಹೋಗಿದೆ. ಪಾಕಿಸ್ತಾನ- ಭಾರತ ನಡುವಿನ ಪಂದ್ಯವನ್ನು ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಡುವುದಿಲ್ಲ ಎಂದು ಹೇಳಿದೆ.
ಐಸಿಸಿಗೆ ಈ ಬಗ್ಗೆ ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ನಜಮ್ ಸೇಥಿ ಪ್ರಸ್ತಾಪ ಸಲ್ಲಿಸಿದ್ದಾರೆ. ಆದರೆ, ಅಹ್ಮದಾಬಾದ್ ಬಿಟ್ಟು, ಕೋಲ್ಕತಾ, ಚೆನ್ನೈ ಮತ್ತು ಬೆಂಗಳೂರಿನಲ್ಲಿ ಪಂದ್ಯಗಳನ್ನು ಆಡುವುದಾಗಿ ಹೇಳಿದ್ದಾರೆ.
ಈ ಮಧ್ಯೆ, ಬುಧವಾರದಿಂದ ಲಂಡನ್ ನಲ್ಲಿ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಆರಂಭವಾಗಿದ್ದು, ಬಿಸಿಸಿಐ ಮತ್ತು ಐಸಿಸಿ ಅಧಿಕಾರಿಗಳು ಅಲ್ಲೇ ಇದ್ದಾರೆ. ಈ ಸಂದರ್ಭದಲ್ಲಿ ವಿಶ್ವಕಪ್ ಪಂದ್ಯಾವಳಿಯ ಕ್ರೀಡಾಂಗಣಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.
ಪಾಕಿಸ್ತಾನಕ್ಕೆ ಮುಖಭಂಗ: ಹೈಬ್ರಿಡ್ ಮಾದರಿಯಲ್ಲಿ ಏಷ್ಯಾಕಪ್ ಪಂದ್ಯಾವಳಿ ಆಡಿಸಬೇಕು ಎಂಬ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪ್ರಸ್ತಾಪವನ್ನು ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನ ದೇಶಗಳು ತಿರಸ್ಕರಿಸಿವೆ. ಹೀಗಾಗಿ, ಏಷ್ಯಾಕಪ್ ನಿಂದಲೇ ಆತಿಥೇಯ ಪಾಕಿಸ್ತಾನ, ಹೊರಗುಳಿಯುವ ಎಲ್ಲ ಸಾಧ್ಯತೆಗಳು ದಟ್ಟವಾಗಿವೆ.
ಪಾಕಿಸ್ತಾನವು, 3ರಿಂದ 4 ಪಂದ್ಯಗಳನ್ನು ಪಾಕಿಸ್ತಾನದಲ್ಲಿ ಆಡುವುದು, ಭಾರತ ಪಾಲ್ಗೊಳ್ಳುವ ಇತರೆ ಪಂದ್ಯಗಳನ್ನು ತಟಸ್ಥ ತಾಣಗಳಲ್ಲಿ ಆಡುವ ಬಗ್ಗೆ ಪಾಕಿಸ್ತಾನ ಪ್ರಸ್ತಾಪ ನೀಡಿತ್ತು. ಏಷ್ಯಾಕಪ್ ಗಾಗಿ ಭಾರತ ಪಾಕ್ ಪ್ರವಾಸ ಕೈಗೊಳ್ಳುವುದಿಲ್ಲ ಎಂದು ಹೇಳಿದ ಮೇಲೆ ಈ ಕುರಿತಂತೆ ಚಿಂತನೆ ನಡೆಸಲಾಗಿತ್ತು. ಆದರೆ, ಇದಕ್ಕೆ ಲಂಕಾ, ಬಾಂಗ್ಲಾ ಮತ್ತು ಆಫ್ಘಾನ್ ಕ್ರಿಕೆಟ್ ಮಂಡಳಿಗಳು ಒಪ್ಪಿಕೊಂಡಿಲ್ಲ. ಅಲ್ಲದೆ, ಬಿಸಿಸಿಐ ಹೇಳಿದಂತೆ, ಪಾಕ್ ನಿಂದ ಹೊರಗೆ ಏಷ್ಯಾಕಪ್ ಆಡಿಸಬೇಕು ಎಂಬ ಪ್ರಸ್ತಾಪಕ್ಕೆ ಒಪ್ಪಿಕೊಂಡಿವೆ.
ಇನ್ನೊಂದೆಡೆ, ಏಷ್ಯಾಕಪ್, ಪಾಕ್ನಿಂದ ಹೊರಗೆ ನಡೆದರೆ, ತಾನು ಭಾಗಿಯಾಗುವುದಿಲ್ಲ ಎಂದು ಈಗಾಗಲೇ ಪಾಕಿಸ್ತಾನ ಹೇಳಿದೆ. ಇದರಿಂದಾಗಿ ಏಷ್ಯಾಕಪ್ನಿಂದ ಪಾಕಿಸ್ತಾನ ಹೊರ ಬಿದ್ದಂತೆ ಆಗಿದೆ. ಹೀಗಾಗಿ, ಇದೇ ತಿಂಗಳು ಏಷ್ಯಾ ಕ್ರಿಕೆಟ್ ಮಂಡಳಿ ಸಭೆ ನಡೆಯಲಿದ್ದು, ಇದರಲ್ಲಿ ಏಷ್ಯಾಕಪ್ನ ಭವಿಷ್ಯ ನಿರ್ಧಾರವಾಗಲಿದೆ. ಮೂಲಗಳ ಪ್ರಕಾರ, ಈ ಬಾರಿಯ ಏಷ್ಯಾಕಪ್ ಸಂಪೂರ್ಣವಾಗಿ ರದ್ದಾಗುವ ಸಾಧ್ಯತೆಗಳೇ ಹೆಚ್ಚಾಗಿವೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್ಗಳನ್ನು…
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…