ಗುವಾಹಟಿ : ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಅವರ ಆಕರ್ಷಕ ಶತಕದ ಬಲದಿಂದ ಭಾರತ ತಂಡ ಆಸ್ಟ್ರೇಲಿಯಾ ಬಿಗ್ ಟಾರ್ಗೆಟ್ ನೀಡಿದೆ.
ಇಲ್ಲಿನ ಬಾರ್ಸಪರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 3ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾಕ್ಕೆ 222ರನ್ಗಳ ಬೃಹತ್ ಮೊತ್ತದ ಟಾರ್ಗೆಟ್ ನೀಡಿದೆ.
ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತ ತಂಡ, ಆರಂಭದಲ್ಲಿಯೇ ಆಘಾತ ಅನುಭವಿಸಿತು. ಯಶಸ್ವಿ ಜೈಸ್ವಾಲ್ ಕೇವಲ 6 ರನ್ ಗಳಿಸಿ ನಿರ್ಗಮಿಸಿದರೆ, ನಂತ ಬಂದ ಇಶಾನ್ ಕಿಸಾನ್ ಸೊನ್ನೆ ಸುತ್ತಿದರು. ಭಾರತ ತಂಡ ಪವರ್ ಪ್ಲೇ ಅಂತ್ಯಕ್ಕೆ2 ವಿಕೆಟ್ ಕಳೆದುಕೊಂಡು 43 ರನ್ ಗಳಿಸಿತು.
ನಂತರ ನಾಯಕ ಸೂರ್ಯಕುಮಾರ್ ಯಾದವ್ 39 ರನ್ ಗಳಿಸಿದರು. ಒಂದೆಡೆ ವಿಕೆಟ್ ಬೀಳುತ್ತಿದ್ದರು ಮತ್ತೊಂದೆಡೆ ಸದೃಢವಾಗಿ ಇನ್ನಿಂಗ್ಸ್ ಕಟ್ಟಿದರು. ತಾವೆದುರಿಸಿದ 57 ಎಸೆತಗಳಲ್ಲಿ 13 ಬೌಂಡರಿ ಹಾಗೂ 7 ಸಿಕ್ಸರ್ ಸಹಿತ 123 ರನ್ ಬಾರಿಸಿದರು. ಆಸೀಸ್ ವಿರುದ್ಧ ಟಿ20ಯಲ್ಲಿ ಶತಕ ದಾಖಲಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಕೊನೆಯಲ್ಲಿ ಬಂದ ತಿಲಕ್ ವರ್ಮಾ 31 ರನ್ ಬಾರಿಸಿದರು.
ಅಂತಿಮವಾಗಿ ತಂಡ 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 222ರನ್ ಬಾರಿಸಿ ಆಸ್ಟ್ರೇಲಿಯಾಗೆ ಬೃಹತ್ ಮೊತ್ತದ ಗುರಿಯನ್ನು ನೀಡಿದೆ.
ಆಸೀಸ್ ಪರ ಬೆಹ್ರೆನ್ಡ್ರಾಫ್, ಹರ್ಡಲ್ ಮತ್ತು ರಿಚರ್ಡ್ಸನ್ ತಲಾ 1 ವಿಕೆಟ್ ಪಡೆದರು.
ಬೆಂಗಳೂರು: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಮುಖವಾಗಿ ಪ್ರಸಿದ್ಧ…
ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು…
ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ…
ಚಾಮರಾಜನಗರ: ಕರ್ತವ್ಯ ಮುಗಿಸಿ ಮನೆಗೆ ಬದ ತಕ್ಷಣ ಹೃದಯಾಘಾತ ಸಂಭವಿಸಿ ಎಎಸ್ಐ ಮೃತಪಟ್ಟಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ.…
ಹುಣಸೂರು: ಇಲ್ಲಿನ ಜ್ಯುವೆಲ್ಲರಿ ಶಾಪ್ನಲ್ಲಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಲಭ್ಯವಾಗಿದ್ದು, ದರೋಡೆಕೋರರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.…
ಬೀದರ್: 99 ಲಕ್ಷ ಸಾಲ ಹಿಂತಿರುಗಿಸದ ಆರೋಪದ ಮೇರೆಗೆ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಎಫ್ಐಆರ್…