ಕ್ರೀಡೆ

ಚೊಚ್ಚಲ ಶತಕ ಸಿಡಿಸಿದ ಗಾಯಕ್ವಾಡ್‌: ಆಸೀಸ್‌ಗೆ 223 ಟಾರ್ಗೆಟ್‌

ಗುವಾಹಟಿ : ಆರಂಭಿಕ ಆಟಗಾರ ಋತುರಾಜ್‌ ಗಾಯಕ್ವಾಡ್‌ ಅವರ ಆಕರ್ಷಕ ಶತಕದ ಬಲದಿಂದ ಭಾರತ ತಂಡ ಆಸ್ಟ್ರೇಲಿಯಾ ಬಿಗ್‌ ಟಾರ್ಗೆಟ್‌ ನೀಡಿದೆ.

ಇಲ್ಲಿನ ಬಾರ್ಸಪರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 3ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾಕ್ಕೆ 222ರನ್‌ಗಳ ಬೃಹತ್‌ ಮೊತ್ತದ ಟಾರ್ಗೆಟ್‌ ನೀಡಿದೆ.

ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಭಾರತ ತಂಡ, ಆರಂಭದಲ್ಲಿಯೇ ಆಘಾತ ಅನುಭವಿಸಿತು. ಯಶಸ್ವಿ ಜೈಸ್ವಾಲ್‌ ಕೇವಲ 6 ರನ್‌ ಗಳಿಸಿ ನಿರ್ಗಮಿಸಿದರೆ, ನಂತ ಬಂದ ಇಶಾನ್‌ ಕಿಸಾನ್‌ ಸೊನ್ನೆ ಸುತ್ತಿದರು. ಭಾರತ ತಂಡ ಪವರ್‌ ಪ್ಲೇ ಅಂತ್ಯಕ್ಕೆ2 ವಿಕೆಟ್‌ ಕಳೆದುಕೊಂಡು 43 ರನ್‌ ಗಳಿಸಿತು.

ನಂತರ ನಾಯಕ ಸೂರ್ಯಕುಮಾರ್‌ ಯಾದವ್‌ 39 ರನ್ ಗಳಿಸಿದರು. ಒಂದೆಡೆ ವಿಕೆಟ್‌ ಬೀಳುತ್ತಿದ್ದರು ಮತ್ತೊಂದೆಡೆ ಸದೃಢವಾಗಿ ಇನ್ನಿಂಗ್ಸ್‌ ಕಟ್ಟಿದರು. ತಾವೆದುರಿಸಿದ 57 ಎಸೆತಗಳಲ್ಲಿ 13 ಬೌಂಡರಿ ಹಾಗೂ 7 ಸಿಕ್ಸರ್ ಸಹಿತ 123 ರನ್‌ ಬಾರಿಸಿದರು. ಆಸೀಸ್‌ ವಿರುದ್ಧ ಟಿ20ಯಲ್ಲಿ ಶತಕ ದಾಖಲಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.  ಕೊನೆಯಲ್ಲಿ ಬಂದ ತಿಲಕ್‌ ವರ್ಮಾ 31 ರನ್‌ ಬಾರಿಸಿದರು.

ಅಂತಿಮವಾಗಿ ತಂಡ 20 ಓವರ್‌ಗಳಲ್ಲಿ 3  ವಿಕೆಟ್‌ ಕಳೆದುಕೊಂಡು 222ರನ್‌ ಬಾರಿಸಿ ಆಸ್ಟ್ರೇಲಿಯಾಗೆ ಬೃಹತ್‌ ಮೊತ್ತದ ಗುರಿಯನ್ನು ನೀಡಿದೆ.

ಆಸೀಸ್‌ ಪರ ಬೆಹ್ರೆನ್‌ಡ್ರಾಫ್‌, ಹರ್ಡಲ್‌ ಮತ್ತು ರಿಚರ್ಡ್‌ಸನ್‌ ತಲಾ 1 ವಿಕೆಟ್‌ ಪಡೆದರು.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

22 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

22 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

22 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

22 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

22 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

22 hours ago