ಕ್ರೀಡೆ

ನಮಗೂ ಐಪಿಎಲ್‌ ಆಡುವ ಆಸೆಯಿದೆ: ಪಾಕ್‌ ಆಟಗಾರನ ಅಚ್ಚರಿ ಹೇಳಿಕೆ

ಇಂಡಿಯನ್‌ ಪ್ರೀಮಿಯರ್‌ ಲೀಗ್‌ ವಿಶ್ವದಾದ್ಯಂತ ಹೆಚ್ಚಿನ ಪ್ರಶಂಸೆ ಪಡೆಯುತ್ತಿದೆ. ಕ್ರಿಕೆಟ್‌ ಜಗತ್ತಿನ ಅತಿದೊಡ್ಡ ಟಿ20 ಟೂರ್ನಿಯಾಗಿದೆ. ಇದೊಂದು ಹೊಸ ಟ್ರೆಂಟ್‌ ಸೆಟ್‌ನ್ನು ಹುಟ್ಟುಹಾಕಿದೆ. ಅಂದಹಾಗೆ ಐಪಿಎಲ್‌ ನಲ್ಲಿ ಪ್ರತಿಯೊಬ್ಬ ಆಟಗಾರನಿಗೂ ಆಡುವ ಬಯಕೆಯಿದೆ. ಈ ಬಯಕೆಯನ್ನು ಪಾಕಿಸ್ತಾನ ಬೌಲರ್‌ ವ್ಯಕ್ತಪಡಿಸಿದ್ದು, ಇದೀಗ ಬಾರೀ ವೈರಲ್‌ ಆಗಿದೆ.

ಪಾಕ್‌ ವೇಗಿ ಹಸನ್‌ ಅಲಿ ತಮಗೆ ಐಪಿಎಲ್‌ನಲ್ಲಿ ಆಡುವ ಹಂಬಲವಿದೆ ಎಂದು ಹೇಳಿಕೊಂಡಿದ್ದಾರೆ. ಅಲಿ ಐಪಿಎಲ್ ಆಡಲು ಬಯಸುವ ಲಕ್ಷಾಂತರ ಆಟಗಾರರಲ್ಲಿ ತಾನೂ ಒಬ್ಬ ಎಂದು ಹೇಳಿಕೊಂಡಿದ್ದಾರೆ. ಆ ಮೂಲಕ ಐಪಿಎಲ್‌ ಆಡ ಬಯಸುವ ನೂರಾರು ಪಾಕಿಸ್ತಾನದ ಆಟಗಾರರ ಬಯಕೆಯನ್ನು ಒಬ್ಬರೇ ವ್ಯಕ್ತಪಡಿಸಿದ್ದಾರೆ.

ನಾವು ಪಾಕಿಸ್ತಾನಿ ಎಂಬ ಕಾರಣಕ್ಕೆ ಐಪಿಎಲ್‌ ಆಡಲು ಸಾಧ್ಯವಾಗುತ್ತಿಲ್ಲ. ಹಸನ್ ಅಲಿ ಪಾಕಿಸ್ತಾನಿ ಸುದ್ದಿ ವಾಹಿನಿ ಸಾಮಾ ಟಿವಿಯೊಂದಿಗೆ ಮಾತನಾಡುವಾಗ ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ನಿಮಗೆ ಐಪಿಎಲ್‌ನಲ್ಲಿ ಆಡಲು ಆಫರ್ ಬಂದರೆ ಅಲ್ಲಿ ಆಡಲು ಇಚ್ಛಿಸುವಿರಾ ಎಂಬ ಪ್ರಶ್ನೆಗೆ ಒಂದು ಸೆಕೆಂಡ್ ಕೂಡ ವ್ಯರ್ಥ ಮಾಡದೆ, ‘ಇದು ಒಳ್ಳೆಯ ಪ್ರಶ್ನೆ. ನೋಡಿ ಐಪಿಎಲ್ ಒಂದು ದೊಡ್ಡ ಟೂರ್ನಿ. ಅವರಲ್ಲಿ ಸಾಕಷ್ಟು ಅವಕಾಶ ಮತ್ತು ಹಣವಿದೆ. ಪ್ರತಿಯೊಬ್ಬ ಆಟಗಾರನೂ ಐಪಿಎಲ್ ಆಡಲು ಬಯಸುತ್ತಾನೆ ಎಂದರು.

ಪಾಕಿಸ್ತಾನದ ಆಟಗಾರನು ತನ್ನ ಮನದಾಳವನ್ನು ಮುಂದಿಟ್ಟಿದ್ದಾರೆ. ಪ್ರತಿಯೊಬ್ಬ ಆಟಗಾರನು ಐಪಿಎಲ್ ಆಡಲು ಬಯಸುತ್ತಾನೆ ಎಂದು ಹೇಳಿದರು. ಆದರೆ ನಾವು ಆಡಲು ಸಾಧ್ಯವಿಲ್ಲ. ಇದು ಎಲ್ಲರಿಗೂ ತಿಳಿದಿರುವ ಕಾರಣ ನಾನು ಇದರ ಕಾರಣವನ್ನು ಹೇಳಲು ಇಷ್ಟಪಡುವುದಿಲ್ಲ. ಹೌದು, ನನಗೆ ಅವಕಾಶ ಸಿಕ್ಕರೆ, ನಾನು ಖಂಡಿತವಾಗಿಯೂ ಐಪಿಎಲ್ ಆಡಲು ಬಯಸುತ್ತೇನೆಂದು ತಮ್ಮ ಮನದ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಹಸನ್ ಅಲಿ ಐಪಿಎಲ್ ಆಡುವ ಬಯಕೆಯನ್ನು ವ್ಯಕ್ತಪಡಿಸಿದ ಮೊದಲ ಪಾಕಿಸ್ತಾನಿ ಆಟಗಾರನಲ್ಲ. ಇದಕ್ಕೂ ಮೊದಲು, ಪಾಕಿಸ್ತಾನದ ಅನೇಕ ಆಟಗಾರರು ಇದನ್ನು ಮಾಡಿದ್ದಾರೆ. ಆದರೆ ಭಾರತ ಮತ್ತು ಪಾಕಿಸ್ತಾನ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿನಿಂದಾಗಿ ಬಿಸಿಸಿಐ ಪಾಕಿಸ್ತಾನದ ಆಟಗಾರರನ್ನು ಐಪಿಎಲ್ ಆಡದಂತೆ ನಿಷೇಧಿಸಿದೆ.

andolanait

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

3 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

3 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

3 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

4 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

5 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

5 hours ago