ಕ್ರೀಡೆ

ನಮಗೂ ಐಪಿಎಲ್‌ ಆಡುವ ಆಸೆಯಿದೆ: ಪಾಕ್‌ ಆಟಗಾರನ ಅಚ್ಚರಿ ಹೇಳಿಕೆ

ಇಂಡಿಯನ್‌ ಪ್ರೀಮಿಯರ್‌ ಲೀಗ್‌ ವಿಶ್ವದಾದ್ಯಂತ ಹೆಚ್ಚಿನ ಪ್ರಶಂಸೆ ಪಡೆಯುತ್ತಿದೆ. ಕ್ರಿಕೆಟ್‌ ಜಗತ್ತಿನ ಅತಿದೊಡ್ಡ ಟಿ20 ಟೂರ್ನಿಯಾಗಿದೆ. ಇದೊಂದು ಹೊಸ ಟ್ರೆಂಟ್‌ ಸೆಟ್‌ನ್ನು ಹುಟ್ಟುಹಾಕಿದೆ. ಅಂದಹಾಗೆ ಐಪಿಎಲ್‌ ನಲ್ಲಿ ಪ್ರತಿಯೊಬ್ಬ ಆಟಗಾರನಿಗೂ ಆಡುವ ಬಯಕೆಯಿದೆ. ಈ ಬಯಕೆಯನ್ನು ಪಾಕಿಸ್ತಾನ ಬೌಲರ್‌ ವ್ಯಕ್ತಪಡಿಸಿದ್ದು, ಇದೀಗ ಬಾರೀ ವೈರಲ್‌ ಆಗಿದೆ.

ಪಾಕ್‌ ವೇಗಿ ಹಸನ್‌ ಅಲಿ ತಮಗೆ ಐಪಿಎಲ್‌ನಲ್ಲಿ ಆಡುವ ಹಂಬಲವಿದೆ ಎಂದು ಹೇಳಿಕೊಂಡಿದ್ದಾರೆ. ಅಲಿ ಐಪಿಎಲ್ ಆಡಲು ಬಯಸುವ ಲಕ್ಷಾಂತರ ಆಟಗಾರರಲ್ಲಿ ತಾನೂ ಒಬ್ಬ ಎಂದು ಹೇಳಿಕೊಂಡಿದ್ದಾರೆ. ಆ ಮೂಲಕ ಐಪಿಎಲ್‌ ಆಡ ಬಯಸುವ ನೂರಾರು ಪಾಕಿಸ್ತಾನದ ಆಟಗಾರರ ಬಯಕೆಯನ್ನು ಒಬ್ಬರೇ ವ್ಯಕ್ತಪಡಿಸಿದ್ದಾರೆ.

ನಾವು ಪಾಕಿಸ್ತಾನಿ ಎಂಬ ಕಾರಣಕ್ಕೆ ಐಪಿಎಲ್‌ ಆಡಲು ಸಾಧ್ಯವಾಗುತ್ತಿಲ್ಲ. ಹಸನ್ ಅಲಿ ಪಾಕಿಸ್ತಾನಿ ಸುದ್ದಿ ವಾಹಿನಿ ಸಾಮಾ ಟಿವಿಯೊಂದಿಗೆ ಮಾತನಾಡುವಾಗ ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ನಿಮಗೆ ಐಪಿಎಲ್‌ನಲ್ಲಿ ಆಡಲು ಆಫರ್ ಬಂದರೆ ಅಲ್ಲಿ ಆಡಲು ಇಚ್ಛಿಸುವಿರಾ ಎಂಬ ಪ್ರಶ್ನೆಗೆ ಒಂದು ಸೆಕೆಂಡ್ ಕೂಡ ವ್ಯರ್ಥ ಮಾಡದೆ, ‘ಇದು ಒಳ್ಳೆಯ ಪ್ರಶ್ನೆ. ನೋಡಿ ಐಪಿಎಲ್ ಒಂದು ದೊಡ್ಡ ಟೂರ್ನಿ. ಅವರಲ್ಲಿ ಸಾಕಷ್ಟು ಅವಕಾಶ ಮತ್ತು ಹಣವಿದೆ. ಪ್ರತಿಯೊಬ್ಬ ಆಟಗಾರನೂ ಐಪಿಎಲ್ ಆಡಲು ಬಯಸುತ್ತಾನೆ ಎಂದರು.

ಪಾಕಿಸ್ತಾನದ ಆಟಗಾರನು ತನ್ನ ಮನದಾಳವನ್ನು ಮುಂದಿಟ್ಟಿದ್ದಾರೆ. ಪ್ರತಿಯೊಬ್ಬ ಆಟಗಾರನು ಐಪಿಎಲ್ ಆಡಲು ಬಯಸುತ್ತಾನೆ ಎಂದು ಹೇಳಿದರು. ಆದರೆ ನಾವು ಆಡಲು ಸಾಧ್ಯವಿಲ್ಲ. ಇದು ಎಲ್ಲರಿಗೂ ತಿಳಿದಿರುವ ಕಾರಣ ನಾನು ಇದರ ಕಾರಣವನ್ನು ಹೇಳಲು ಇಷ್ಟಪಡುವುದಿಲ್ಲ. ಹೌದು, ನನಗೆ ಅವಕಾಶ ಸಿಕ್ಕರೆ, ನಾನು ಖಂಡಿತವಾಗಿಯೂ ಐಪಿಎಲ್ ಆಡಲು ಬಯಸುತ್ತೇನೆಂದು ತಮ್ಮ ಮನದ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಹಸನ್ ಅಲಿ ಐಪಿಎಲ್ ಆಡುವ ಬಯಕೆಯನ್ನು ವ್ಯಕ್ತಪಡಿಸಿದ ಮೊದಲ ಪಾಕಿಸ್ತಾನಿ ಆಟಗಾರನಲ್ಲ. ಇದಕ್ಕೂ ಮೊದಲು, ಪಾಕಿಸ್ತಾನದ ಅನೇಕ ಆಟಗಾರರು ಇದನ್ನು ಮಾಡಿದ್ದಾರೆ. ಆದರೆ ಭಾರತ ಮತ್ತು ಪಾಕಿಸ್ತಾನ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿನಿಂದಾಗಿ ಬಿಸಿಸಿಐ ಪಾಕಿಸ್ತಾನದ ಆಟಗಾರರನ್ನು ಐಪಿಎಲ್ ಆಡದಂತೆ ನಿಷೇಧಿಸಿದೆ.

andolanait

Recent Posts

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

26 mins ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

4 hours ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

5 hours ago

ವಿರಾಜಪೇಟೆ | ಅವಘಡಕ್ಕಾಗಿ ಕಾಯುತ್ತಿದೆ ಮಾರುಕಟ್ಟೆ ಹಳೇ ಕಟ್ಟಡ..!

ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…

5 hours ago

ಗುಂಡ್ಲುಪೇಟೆ | ಶಿಥಿಲಗೊಂಡಿರುವ ಅಂಗನವಾಡಿ, ಶಾಲೆ ಕಟ್ಟಡಗಳು

ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…

6 hours ago