ಕ್ರೀಡೆ

ನಮಗೂ ಐಪಿಎಲ್‌ ಆಡುವ ಆಸೆಯಿದೆ: ಪಾಕ್‌ ಆಟಗಾರನ ಅಚ್ಚರಿ ಹೇಳಿಕೆ

ಇಂಡಿಯನ್‌ ಪ್ರೀಮಿಯರ್‌ ಲೀಗ್‌ ವಿಶ್ವದಾದ್ಯಂತ ಹೆಚ್ಚಿನ ಪ್ರಶಂಸೆ ಪಡೆಯುತ್ತಿದೆ. ಕ್ರಿಕೆಟ್‌ ಜಗತ್ತಿನ ಅತಿದೊಡ್ಡ ಟಿ20 ಟೂರ್ನಿಯಾಗಿದೆ. ಇದೊಂದು ಹೊಸ ಟ್ರೆಂಟ್‌ ಸೆಟ್‌ನ್ನು ಹುಟ್ಟುಹಾಕಿದೆ. ಅಂದಹಾಗೆ ಐಪಿಎಲ್‌ ನಲ್ಲಿ ಪ್ರತಿಯೊಬ್ಬ ಆಟಗಾರನಿಗೂ ಆಡುವ ಬಯಕೆಯಿದೆ. ಈ ಬಯಕೆಯನ್ನು ಪಾಕಿಸ್ತಾನ ಬೌಲರ್‌ ವ್ಯಕ್ತಪಡಿಸಿದ್ದು, ಇದೀಗ ಬಾರೀ ವೈರಲ್‌ ಆಗಿದೆ.

ಪಾಕ್‌ ವೇಗಿ ಹಸನ್‌ ಅಲಿ ತಮಗೆ ಐಪಿಎಲ್‌ನಲ್ಲಿ ಆಡುವ ಹಂಬಲವಿದೆ ಎಂದು ಹೇಳಿಕೊಂಡಿದ್ದಾರೆ. ಅಲಿ ಐಪಿಎಲ್ ಆಡಲು ಬಯಸುವ ಲಕ್ಷಾಂತರ ಆಟಗಾರರಲ್ಲಿ ತಾನೂ ಒಬ್ಬ ಎಂದು ಹೇಳಿಕೊಂಡಿದ್ದಾರೆ. ಆ ಮೂಲಕ ಐಪಿಎಲ್‌ ಆಡ ಬಯಸುವ ನೂರಾರು ಪಾಕಿಸ್ತಾನದ ಆಟಗಾರರ ಬಯಕೆಯನ್ನು ಒಬ್ಬರೇ ವ್ಯಕ್ತಪಡಿಸಿದ್ದಾರೆ.

ನಾವು ಪಾಕಿಸ್ತಾನಿ ಎಂಬ ಕಾರಣಕ್ಕೆ ಐಪಿಎಲ್‌ ಆಡಲು ಸಾಧ್ಯವಾಗುತ್ತಿಲ್ಲ. ಹಸನ್ ಅಲಿ ಪಾಕಿಸ್ತಾನಿ ಸುದ್ದಿ ವಾಹಿನಿ ಸಾಮಾ ಟಿವಿಯೊಂದಿಗೆ ಮಾತನಾಡುವಾಗ ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ನಿಮಗೆ ಐಪಿಎಲ್‌ನಲ್ಲಿ ಆಡಲು ಆಫರ್ ಬಂದರೆ ಅಲ್ಲಿ ಆಡಲು ಇಚ್ಛಿಸುವಿರಾ ಎಂಬ ಪ್ರಶ್ನೆಗೆ ಒಂದು ಸೆಕೆಂಡ್ ಕೂಡ ವ್ಯರ್ಥ ಮಾಡದೆ, ‘ಇದು ಒಳ್ಳೆಯ ಪ್ರಶ್ನೆ. ನೋಡಿ ಐಪಿಎಲ್ ಒಂದು ದೊಡ್ಡ ಟೂರ್ನಿ. ಅವರಲ್ಲಿ ಸಾಕಷ್ಟು ಅವಕಾಶ ಮತ್ತು ಹಣವಿದೆ. ಪ್ರತಿಯೊಬ್ಬ ಆಟಗಾರನೂ ಐಪಿಎಲ್ ಆಡಲು ಬಯಸುತ್ತಾನೆ ಎಂದರು.

ಪಾಕಿಸ್ತಾನದ ಆಟಗಾರನು ತನ್ನ ಮನದಾಳವನ್ನು ಮುಂದಿಟ್ಟಿದ್ದಾರೆ. ಪ್ರತಿಯೊಬ್ಬ ಆಟಗಾರನು ಐಪಿಎಲ್ ಆಡಲು ಬಯಸುತ್ತಾನೆ ಎಂದು ಹೇಳಿದರು. ಆದರೆ ನಾವು ಆಡಲು ಸಾಧ್ಯವಿಲ್ಲ. ಇದು ಎಲ್ಲರಿಗೂ ತಿಳಿದಿರುವ ಕಾರಣ ನಾನು ಇದರ ಕಾರಣವನ್ನು ಹೇಳಲು ಇಷ್ಟಪಡುವುದಿಲ್ಲ. ಹೌದು, ನನಗೆ ಅವಕಾಶ ಸಿಕ್ಕರೆ, ನಾನು ಖಂಡಿತವಾಗಿಯೂ ಐಪಿಎಲ್ ಆಡಲು ಬಯಸುತ್ತೇನೆಂದು ತಮ್ಮ ಮನದ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಹಸನ್ ಅಲಿ ಐಪಿಎಲ್ ಆಡುವ ಬಯಕೆಯನ್ನು ವ್ಯಕ್ತಪಡಿಸಿದ ಮೊದಲ ಪಾಕಿಸ್ತಾನಿ ಆಟಗಾರನಲ್ಲ. ಇದಕ್ಕೂ ಮೊದಲು, ಪಾಕಿಸ್ತಾನದ ಅನೇಕ ಆಟಗಾರರು ಇದನ್ನು ಮಾಡಿದ್ದಾರೆ. ಆದರೆ ಭಾರತ ಮತ್ತು ಪಾಕಿಸ್ತಾನ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿನಿಂದಾಗಿ ಬಿಸಿಸಿಐ ಪಾಕಿಸ್ತಾನದ ಆಟಗಾರರನ್ನು ಐಪಿಎಲ್ ಆಡದಂತೆ ನಿಷೇಧಿಸಿದೆ.

andolanait

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

41 mins ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

2 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

3 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

5 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

8 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

8 hours ago