ಕ್ರೀಡೆ

ನಮಗೂ ಐಪಿಎಲ್‌ ಆಡುವ ಆಸೆಯಿದೆ: ಪಾಕ್‌ ಆಟಗಾರನ ಅಚ್ಚರಿ ಹೇಳಿಕೆ

ಇಂಡಿಯನ್‌ ಪ್ರೀಮಿಯರ್‌ ಲೀಗ್‌ ವಿಶ್ವದಾದ್ಯಂತ ಹೆಚ್ಚಿನ ಪ್ರಶಂಸೆ ಪಡೆಯುತ್ತಿದೆ. ಕ್ರಿಕೆಟ್‌ ಜಗತ್ತಿನ ಅತಿದೊಡ್ಡ ಟಿ20 ಟೂರ್ನಿಯಾಗಿದೆ. ಇದೊಂದು ಹೊಸ ಟ್ರೆಂಟ್‌ ಸೆಟ್‌ನ್ನು ಹುಟ್ಟುಹಾಕಿದೆ. ಅಂದಹಾಗೆ ಐಪಿಎಲ್‌ ನಲ್ಲಿ ಪ್ರತಿಯೊಬ್ಬ ಆಟಗಾರನಿಗೂ ಆಡುವ ಬಯಕೆಯಿದೆ. ಈ ಬಯಕೆಯನ್ನು ಪಾಕಿಸ್ತಾನ ಬೌಲರ್‌ ವ್ಯಕ್ತಪಡಿಸಿದ್ದು, ಇದೀಗ ಬಾರೀ ವೈರಲ್‌ ಆಗಿದೆ.

ಪಾಕ್‌ ವೇಗಿ ಹಸನ್‌ ಅಲಿ ತಮಗೆ ಐಪಿಎಲ್‌ನಲ್ಲಿ ಆಡುವ ಹಂಬಲವಿದೆ ಎಂದು ಹೇಳಿಕೊಂಡಿದ್ದಾರೆ. ಅಲಿ ಐಪಿಎಲ್ ಆಡಲು ಬಯಸುವ ಲಕ್ಷಾಂತರ ಆಟಗಾರರಲ್ಲಿ ತಾನೂ ಒಬ್ಬ ಎಂದು ಹೇಳಿಕೊಂಡಿದ್ದಾರೆ. ಆ ಮೂಲಕ ಐಪಿಎಲ್‌ ಆಡ ಬಯಸುವ ನೂರಾರು ಪಾಕಿಸ್ತಾನದ ಆಟಗಾರರ ಬಯಕೆಯನ್ನು ಒಬ್ಬರೇ ವ್ಯಕ್ತಪಡಿಸಿದ್ದಾರೆ.

ನಾವು ಪಾಕಿಸ್ತಾನಿ ಎಂಬ ಕಾರಣಕ್ಕೆ ಐಪಿಎಲ್‌ ಆಡಲು ಸಾಧ್ಯವಾಗುತ್ತಿಲ್ಲ. ಹಸನ್ ಅಲಿ ಪಾಕಿಸ್ತಾನಿ ಸುದ್ದಿ ವಾಹಿನಿ ಸಾಮಾ ಟಿವಿಯೊಂದಿಗೆ ಮಾತನಾಡುವಾಗ ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ನಿಮಗೆ ಐಪಿಎಲ್‌ನಲ್ಲಿ ಆಡಲು ಆಫರ್ ಬಂದರೆ ಅಲ್ಲಿ ಆಡಲು ಇಚ್ಛಿಸುವಿರಾ ಎಂಬ ಪ್ರಶ್ನೆಗೆ ಒಂದು ಸೆಕೆಂಡ್ ಕೂಡ ವ್ಯರ್ಥ ಮಾಡದೆ, ‘ಇದು ಒಳ್ಳೆಯ ಪ್ರಶ್ನೆ. ನೋಡಿ ಐಪಿಎಲ್ ಒಂದು ದೊಡ್ಡ ಟೂರ್ನಿ. ಅವರಲ್ಲಿ ಸಾಕಷ್ಟು ಅವಕಾಶ ಮತ್ತು ಹಣವಿದೆ. ಪ್ರತಿಯೊಬ್ಬ ಆಟಗಾರನೂ ಐಪಿಎಲ್ ಆಡಲು ಬಯಸುತ್ತಾನೆ ಎಂದರು.

ಪಾಕಿಸ್ತಾನದ ಆಟಗಾರನು ತನ್ನ ಮನದಾಳವನ್ನು ಮುಂದಿಟ್ಟಿದ್ದಾರೆ. ಪ್ರತಿಯೊಬ್ಬ ಆಟಗಾರನು ಐಪಿಎಲ್ ಆಡಲು ಬಯಸುತ್ತಾನೆ ಎಂದು ಹೇಳಿದರು. ಆದರೆ ನಾವು ಆಡಲು ಸಾಧ್ಯವಿಲ್ಲ. ಇದು ಎಲ್ಲರಿಗೂ ತಿಳಿದಿರುವ ಕಾರಣ ನಾನು ಇದರ ಕಾರಣವನ್ನು ಹೇಳಲು ಇಷ್ಟಪಡುವುದಿಲ್ಲ. ಹೌದು, ನನಗೆ ಅವಕಾಶ ಸಿಕ್ಕರೆ, ನಾನು ಖಂಡಿತವಾಗಿಯೂ ಐಪಿಎಲ್ ಆಡಲು ಬಯಸುತ್ತೇನೆಂದು ತಮ್ಮ ಮನದ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ಹಸನ್ ಅಲಿ ಐಪಿಎಲ್ ಆಡುವ ಬಯಕೆಯನ್ನು ವ್ಯಕ್ತಪಡಿಸಿದ ಮೊದಲ ಪಾಕಿಸ್ತಾನಿ ಆಟಗಾರನಲ್ಲ. ಇದಕ್ಕೂ ಮೊದಲು, ಪಾಕಿಸ್ತಾನದ ಅನೇಕ ಆಟಗಾರರು ಇದನ್ನು ಮಾಡಿದ್ದಾರೆ. ಆದರೆ ಭಾರತ ಮತ್ತು ಪಾಕಿಸ್ತಾನ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿನಿಂದಾಗಿ ಬಿಸಿಸಿಐ ಪಾಕಿಸ್ತಾನದ ಆಟಗಾರರನ್ನು ಐಪಿಎಲ್ ಆಡದಂತೆ ನಿಷೇಧಿಸಿದೆ.

andolanait

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

5 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

6 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

6 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

7 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

10 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

11 hours ago