ಅರ್ಸಿಬಿ ಈ ಬಾರಿಯ 2024ರ ಐಪಿಎಲ್ನಲ್ಲಿ ತೀರಾ ನೀರಸ ಪ್ರದರ್ಶನ ನೀಡುತ್ತಾ ಬರುತ್ತಿದೆ. ಈವರೆಗೆ ಒಟ್ಟು 17 ಸೀಸನ್ಗಳು ನಡೆದಿದ್ದು, ಆರ್ಸಿಬಿ ಕೇವಲ ಮೂರು ಬಾರಿ ಮಾತ್ರ ಫೈನಲ್ ಹಂತ ತಲುಪಿದೆ. ಉಳಿದಂತೆ ಲೀಗ್ನಲ್ಲಿಯೇ ತನ್ನ ಅಧ್ಯಾಯ ಮುಗಿಸಿ ಹೊರ ಬೀಳುತ್ತಿದೆ.
ಇದರ ಬೆನ್ನಲ್ಲೇ ಟೀಂ ಇಂಡಿಯಾದ ಮಿಸ್ಟ್ರಿ ಬೌಲರ್ ಕನ್ನಡಿಗ ಅನಿಲ್ ಕುಂಬ್ಳೆ ಅವರು ತಾವು ಆರ್ಸಿಬಿ ಕ್ಯಾಂಪ್ನಲ್ಲಿ ಕಳೆದ ದಿನಗಳನ್ನು ಮೆಲುಕು ಹಾಕಿದ್ದಾರೆ.
ಆರ್ಸಿಬಿ ಚೊಚ್ಚಲ ಬಾರಿಗೆ ಫೈನಲ್ ಪ್ರವೇಶ ಮಾಡಿದ್ದು ಕನ್ನಡಿಗ ಕುಂಬ್ಳೆ ನಾಯಕತ್ವದಲ್ಲಿ ಎಂಬುದು ವಿಶೇಷ. 2009ರಲ್ಲಿ ಆರ್ಸಿಬಿ ನಾಯಕರಾಗಿದ್ದ ಕೆವಿನ್ ಪೀಟರ್ಸನ್ ಅವರು ಅರ್ಧದಲ್ಲಿಯೇ ತವರಿಗೆ ವಾಪಸಾದ ಹಿನ್ನಲೆ ತಂಡವನ್ನು ಮುನ್ನಡೆಸುವ ಜವಾಬ್ದಾರಿ ಅನಿಲ್ ಕುಂಬ್ಳೆ ಹೆಗಲ ಮೇಲೆ ಬಿತ್ತು. ಈ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ ಕುಂಬ್ಳೆ ತಂಡವನ್ನು ಫೈನಲ್ಗೆ ಕರೆದುಕೊಂಡು ಹೋದರು.
ಇನ್ನು ಫೈನಲ್ ಪಂದ್ಯದಲ್ಲಿ ಆರ್ಸಿಬಿಗೆ ಡೆಕ್ಕನ್ ಚಾರ್ಜರ್ಸ್ ಹೈದರಾಬಾದ್ ಎದುರಾಗಿತ್ತು. ಇದರಲ್ಲಿ ಆರ್ಸಿಬಿ 6 ರನ್ಗಳಿಂದ ಸೋಲೊಪ್ಪಿಕೊಂಡಿತು.
ತಾವು ಆರ್ಸಿಬಿ ನಾಯಕರಾಗಿ ತಂಡವನ್ನು ಮುನ್ನಡೆಸಿದ ಬಗ್ಗೆ ಹಾಗೂ ಫೈನಲ್ ಪಂದ್ಯದಲ್ಲಿನ ಎಡವಟ್ಟುಗಳ ಬಗ್ಗೆ ಮೊದಲ ಬಾರಿಗೆ ಮನಬಿಚ್ಚಿ ಮಾತನಾಡಿದ್ದಾರೆ. ಅನಿಲ್ ಕುಂಬ್ಳೆ. ಈ ಬಗ್ಗೆ ಭಾರತ ತಂಡ ಬೌಲರ್ ಆರ್. ಅಶ್ವಿನ್ ಅವರ ಯುಟೂಬ್ ಚಾನೆಲ್ ನಲ್ಲಿ ಭಾಗವಹಿಸಿ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಕುಂಬ್ಳೆ ಮಾತನಾಡುತ್ತಾ, 2009ರ ಫೈನಲ್ನಲ್ಲಿ ನಾವು ಗೆಲ್ಲಬೇಕಿತ್ತು. ಸಿಕ್ಕ ಸುವರ್ಣಾವಕಾಶವನ್ನು ನಾವು ಕೈಚೆಲ್ಲಿದೆವು ಆ ಮೂಲಕ ಪ್ರಶಸ್ತಿ ನಮ್ಮ ಕೈ ತಪ್ಪಿತು ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ.
ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಕ್ಕನ್ ತಂಡ 143ರನ್ ಗಳಿಸಿ 144ರನ್ ಗುರಿ ನೀಡಿತು. ಇದನ್ನು ಬೆನ್ನತ್ತಿದ ನಮಗೆ ಕೊನೆಯ ಓವರ್ನಲ್ಲಿ 15 ರನ್ಗಳ ಅವಶ್ಯಕತೆಯಿತ್ತು. ಕ್ರೀಸ್ನಲ್ಲಿ ನಾನು, ಉತ್ತಪ್ಪ ಇದ್ದೆವು. ಡೆಕ್ಕನ್ ಪರ ಆರ್.ಪಿ ಸಿಂಗ್ ಬೌಲರ್ ಆಗಿದ್ದರು. ಮೊದಲು ನನಗೆ ಸ್ಟ್ರೈಕ್ ಸಿಕ್ಕಿತು. ಮೊದಲ ಬಾಲ್ನಲ್ಲಿ ಒಂದು ರನ್ ಬಾರಿಸಿದೆ, ಉತ್ತಮ ಎರಡು ಮತ್ತು ಮೂರನೇ ಬಾಲ್ಗಳನ್ನು ಎದುರಿಸುವಲ್ಲಿ ವಿಫಲರಾದರು.
ಆರ್.ಪಿ ಸಿಂಗ್ ಲೆಂತ್ ಬಾಲ್ ಹಾಕ್ತಾನ್ ನೀನು ಸ್ಕೂಪ್ ಆಡಬೇಡ ಎಂದು ಉತ್ತಪ್ಪಗೆ ಸೂಚಿಸುತ್ತಿದ್ದೆ, ಆದರೆ ಅವರು ಸ್ಕೂಪ್ ಪ್ರಯತ್ನಿಸಿ ಎರಡು ಡಾಟ್ ಬಾಲ್ ಮಾಡಿದರು, ನಾಲ್ಕನೆ ಎಸೆತ 2 ರನ್ ಆದರೆ, ಏದನೇಯದು ಲೆಗ್ಬೈ 4 ಆಯಿತು. ಕೊನೆಯ ಎಸೆತವನ್ನು ಸಿಂಗಲ್ ಬಾರಿಸಲಷ್ಟೇ ಶಕ್ತರಾದರು. ಆ ಓವರ್ನಲ್ಲಿ ನಮಗೆ ಒಂದು ಸಿಕ್ಸರ್ ಬೇಕಾಗಿತ್ತು. ನಾನು ಬ್ಯಾಟಿಂಗ್ ಸ್ಕ್ರೀಸ್ನಲ್ಲಿದ್ದಿದ್ದರೇ ಖಂಡಿತವಾಗಿ ಸಿಕ್ಸರ್ ಬಾರಿಸಲು ಪ್ರಯತ್ನಿಸುತ್ತಿದ್ದೆ. ಅಂತಿಮವಾಗಿ ನಾವು 6 ರನ್ಗಳಿಂದ ಟ್ರೋಫಿ ಕಳೆದುಕೊಂಡೆವು. ಆ ಒಂದು ಸೋಲು ನನ್ನನ್ನು ಈಗಲೂ ಕಾಡುತ್ತಿದೆ ಎಂದು ಟೀಂ ಇಂಡಿಯಾದ ಮಾಜಿ ಸ್ಪಿನ್ನರ್ ಅನಿಲ್ ಕುಂಬ್ಳೆ ಹೇಳಿದ್ದಾರೆ.
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…
ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…