ಕ್ರೀಡೆ

ನಮ್ಮದು ಉತ್ತಮ ತಂಡವಲ್ಲ, ಪ್ಲೇ ಆಫ್ ಆಡಲು ನಾವು ಅರ್ಹರಲ್ಲ: ಆರ್ ಸಿಬಿ ನಾಯಕ ಫಾಫ್‌

ಬೆಂಗಳೂರು: 2023ರ ಐಪಿಎಲ್ ಕೂಟದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿರ್ಗಮಿಸಿದೆ. ಸತತ ಮೂರು ಬಾರಿ ಪ್ಲೇ ಆಫ್ ತಲುಪಿದ್ದ ಆರ್ ಸಿಬಿ ಈ ಬಾರಿ ಅಂತಿಮ ಪಂದ್ಯದಲ್ಲಿ ಸೋಲುವ ಮೂಲಕ ಲೀಗ್ ಹಂತದಲ್ಲೇ ಮನೆದಾರಿ ಹಿಡಿದಿದೆ. ಆರ್ ಸಿಬಿ ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಈ ಋತುವಿನ ಐಪಿಎಲ್‌ನಲ್ಲಿನ ತನ್ನ ತಂಡದ ಪ್ರದರ್ಶನದ ಬಗ್ಗೆ ವಿಮರ್ಶಾತ್ಮಕ ಮೌಲ್ಯಮಾಪನ ಮಾಡಿದ್ದು “ಕೂಟದಲ್ಲಿ ನಮ್ಮದು ಅತ್ಯುತ್ತಮ ತಂಡಗಳಲ್ಲಿ ಒಂದಾಗಿರಲಿಲ್ಲ ಮತ್ತು ಪ್ಲೇ ಆಫ್ ತಲುಪುಲು ಅರ್ಹರಾಗಿರಲಿಲ್ಲ” ಎಂದು ಹೇಳಿದರು.

“ನಮ್ಮ ಋತುವು ಅಲ್ಲಿಗೆ ಕೊನೆಗೊಳ್ಳುತ್ತದೆ ಎಂದು ನಾನು ನಿರಾಶೆಗೊಂಡಿದ್ದೇನೆ. ನಾವು ನಮ್ಮ ಬಗ್ಗೆ ಆಳವಾಗಿ ಅವಲೋಕಿಸಿದರೆ, ನಾವು ಸ್ಪರ್ಧೆಯಲ್ಲಿ ಅತ್ಯುತ್ತಮ ತಂಡಗಳಲ್ಲಿ ಒಂದಾಗಿರಲಿಲ್ಲ ಎಂದು ಪ್ರಾಮಾಣಿಕವಾಗಿ ಒಪ್ಪಿಕೊಳ್ಳುತ್ತೇನೆ” ಎಂದು ಫಾಫ್ ಹೇಳಿದರು.

ನಾವು ಅದೃಷ್ಟ ಹೊಂದಿದ್ದೆವು, ಹೀಗಾಗಿ ಋತುವಿನ ಉದ್ದಕ್ಕೂ ಕೆಲವು ಉತ್ತಮ ಪ್ರದರ್ಶನಗಳು ಬಂದಿದ್ದವು, ಆದರೆ ಒಟ್ಟಾರೆಯಾಗಿ ತಂಡವಾಗಿ, ನೀವು 15-14 ಪಂದ್ಯಗಳ ಅವಧಿಯನ್ನು ನೋಡಿದರೆ, ನಾವು ಬಹುಶಃ ಪ್ಲೇ ಆಫ್ ನಲ್ಲಿರಲು ಅರ್ಹರಲ್ಲ” ಎಂದು ಆರ್ ಸಿಬಿ ನಾಯಕ ಫಾಫ್ ಹೇಳಿದರು.

ಗುಜರಾತ್ ವಿರುದ್ಧದ ಸೋಲಿನ ಬಗ್ಗೆ ಮಾತನಾಡಿದ ಫಾಫ್, “ಈ ಸೋಲು ಇನ್ನೂ ನೋವುಂಟು ಮಾಡುತ್ತಿದೆ. ನಾವು ಭಾನುವಾರ ರಾತ್ರಿ ನಿಜವಾಗಿಯೂ ಕಷ್ಟಪಟ್ಟು ಪ್ರಯತ್ನಿಸಿದ್ದೇವೆ, ಆದರೆ ದುರದೃಷ್ಟವಶಾತ್ ವಿಫಲವಾದೆವು. ಈ ವರ್ಷದ ನಮ್ಮ ಪಾಸಿಟಿವ್ ಗಳನ್ನು ನೋಡಿದರೆ ಗ್ಲೆನ್ ಮ್ಯಾಕ್ಸ್‌ವೆಲ್ ಆಟ, ನನ್ನ ಮತ್ತು ವಿರಾಟ್ ನಡುವೆ ನಾವು ಹೊಂದಿದ್ದ ಜೊತೆಯಾಟಗಳು. ಬಹುಶಃ ಪ್ರತಿ ಪಂದ್ಯದಲ್ಲೂ 50 ರನ್ ಜೊತೆಯಾಟವಾಡಿದ್ದೆವು. ಮೊಹಮ್ಮದ್ ಸಿರಾಜ್ ಉತ್ತಮ ಸೀಸನ್ ಹೊಂದಿದ್ದರು” ಎಂದರು.

andolanait

Recent Posts

‘ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಇಲ್ಲ

65 ವಾರಗಳಿಗೆ ಸಾಕಾಗುವಷ್ಟು ಮೇವು ಸಂಗ್ರಹ; ಜಿಲ್ಲೆಯಾದ್ಯಂತ ಒಟ್ಟು 2,12,504 ಟನ್‌ ಮೇವು ಲಭ್ಯ - ನವೀನ್ ಡಿಸೋಜ ಮಡಿಕೇರಿ…

9 mins ago

ಏಳೆಂಟು ವರ್ಷ ಹಿಂದೆಯೇ ಎಚ್‌ ಪಿವಿ ಲಸಿಕೆ ಆರಂಭಿಸಿದ ವೈದ್ಯ!

ಪುರುಷರೂ ಎಚ್‌ಪಿವಿ ಲಸಿಕೆ ಪಡೆಯುವುದು ಸುರಕ್ಷಿತ: ಡಾ.ಯೋಗೇಂದ್ರಕುಮಾರ್ ಸಲಹೆ • ಹೇಮಂತ್‌ಕುಮಾ‌ರ್‌ ಮಂಡ್ಯ :  ಹೆಣ್ಣು ಮಕ್ಕಳನ್ನು ಬಾಧಿಸುತ್ತಿರುವ ಗರ್ಭಕಂಠ…

18 mins ago

ಕಾಳು ಮೆಣಸು ಕಳ್ಳತನ; ಆರೋಪಿಗಳ ಬಂಧನ

ತನಿಖೆ ವೇಳೆ ಮತ್ತಷ್ಟು ಕಳ್ಳತನ ಮಾಡಿದ ಪ್ರಕರಣಗಳು ಬೆಳಕಿಗೆ ವಿರಾಜಪೇಟೆ : ಕಾಫಿ ಕಣದಲ್ಲಿ ಒಣಗಿಸಲು ಇಟ್ಟಿದ ಕಾಳು ಮೆಣಸು…

28 mins ago

ಕಿಲ್ಲಿಂಗ್‌ ಡಾಕ್ಟರ್‌ ವಿನಯ್‌ ಅಸಲಿ ಬಣ್ಣ ಬಯಲು ; ವೈದ್ಯನ ಬಲೆಗೆ ಸಿಲುಕಿ ನಲುಗಿದ ಮೂವರು ಸುಂದರಿಯರು!

ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…

2 hours ago

ಮೈಸೂರಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ

ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…

2 hours ago

ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ‌ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago