ಕ್ರೀಡೆ

ಮಹಿಳಾ ಟಿ20 ವಿಶ್ವ ಕಪ್ ಆಯೋಜನೆಗೆ ನೋ ಎಂದ ಜಯ್ ಶಾ

ನವದೆಹಲಿ: ಇದೇ ಅಕ್ಟೊಬರ್ 3 ರಿಂದ 20ರ ವರೆಗೆ ನಡೆಯಲಿರುವ ಮಹಿಳಾ ಟಿ20 ಕ್ರಿಕೆಟ್ ಟೂರ್ನಿ ಬಾಂಗ್ಲಾದೇಶದಲ್ಲಿ ಆಯೋಜಿಸಲು ಚಿಂತನೆ ನಡೆಸಲಾಗಿತ್ತು. ಆದರೆ, ಬಾಂಗ್ಲಾದಲ್ಲಿನ ಉಧ್ವಿಘ್ನತೆ ಇದಕ್ಕೆ ಅಡ್ಡಿಯಾದ್ದರಿಂದ ಮಹಿಳಾ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಆತಿಥ್ಯವನ್ನು ವಹಿಸುವಂತೆ ಭಾರತಕ್ಕೆ ಐಸಿಸಿ ತಿಳಿಸಿತ್ತು ಆದರೆ ಈ ಮನವಿಯನ್ನು ನಿರಾಕರಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.

ಈ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಜಯ್ ಶಾ, ಐಸಿಸಿಯು ವುಮೆನ್ಸ್ ವಿಶ್ವಕಪ್ ಟೋರ್ನಿ ಆಯೋಜಿಸುತ್ತಿರಾ ಎಂದು ನಮ್ಮನು ಕೇಳಿತ್ತು ಅದನ್ನು ನಾವು ನಿರಾಕರಿಸಿದ್ದೇವೆ, ನಾವು ಆಯೋಜಿಸುವುದಿಲ್ಲ ಎಂದು ಹೇಳಿದ್ದೇವೆ ಎಂದು ತಿಳಿಸಿದರು.

ಇನ್ನು, ಇದೀಗಾ ಭಾರತದಲ್ಲಿ ಮುಂಗಾರು ಮಳೆಯಾಗುತ್ತಿದೆ ಮತ್ತು ನಾವು ಮುಂದಿನ ವರ್ಷ ಮಹಿಳಾ ಏಕದಿನ ವಿಶ್ವಕಪ್ ಆಯೋಜಿಸುತ್ತೇವೆ ಸತತ ವಿಶ್ವಕಪ್‌ಗಳನ್ನು ಆಯೋಜಿಸಲು ನಾವು ಇಚ್ಚಿಸುವುದಿಲ್ಲ ಎಂದಿದ್ದಾರೆ.

ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಿಗೊಳಿಸಿದ ನಂತರ ಬಾಂಗ್ಲಾದೇಶದಲ್ಲಿ ಹೆಚ್ಚಿನ ಹಿಂಸಾಚಾರ ಕಂಡುಬಂದಿದ್ದು ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ಭಾರತ ಬಾಂಗ್ಲಾದೇಶಕ್ಕೆ ಪ್ರಯಾಣಿಸದಂತೆ ಸಲಹೆಗಳನ್ನು ನೀಡಿವೆ.

ಮತ್ತೊಂದೆಡೆ ಬಾಂಗ್ಲಾದೇಶ ಟೆಸ್ಟ್ ತಂಡವು ಪ್ರಸ್ತುತ ಪಾಕಿಸ್ತಾನದಲ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ತಯಾರಿ ನಡೆಸುತ್ತಿದೆ, ತವರಿನಲ್ಲಿ ಹಿಂಸಾಚಾರವು ಆಟಗಾರರ ತಯಾರಿಗೆ ತೊಂದರೆ ಉಂಟು ಮಾಡುತ್ತಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

17 mins ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

1 hour ago

ಮೈಸೂರು | ರಾತ್ರೋ ರಾತ್ರಿ ನವ ವಿವಾಹಿತೆ ನಾಪತ್ತೆ ; ದೂರು ದಾಖಲು

ಮೈಸೂರು : ಗಂಡನ ಮನೆಯಿಂದ ನವ ವಿವಾಹಿತೆ ರಾತ್ರೋ ರಾತ್ರಿ ನಾಪತ್ತೆಯಾಗಿರುವುದಾಗಿ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

1 hour ago

ತಮಿಳುನಾಡು ನೂತನ ಸಿಎಂ ವಿಜಯ್‌ ಮುಂದಿವೆ ಬೆಟ್ಟದಂತಹ ಸವಾಲುಗಳು! ಮೆಟ್ಟಿ ನಿಲ್ಲುತ್ತಾರಾ ದಳಪತಿ?

ಚೆನ್ನೈ : ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ 60 ವರ್ಷಗಳ ದ್ರಾವಿಡ ಯುಗಕ್ಕೆ ತೆರೆ ಎಳೆದು, ಮೊದಲ ಬಾರಿಗೆ ಸಿನಿತಾರೆ-ರಾಜಕಾರಣಿ ಸಿ.ಜೋಸೆಫ್…

2 hours ago

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…

2 days ago

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

2 days ago