ಕ್ರೀಡೆ

ಮಹಿಳಾ ಟಿ20 ವಿಶ್ವ ಕಪ್ ಆಯೋಜನೆಗೆ ನೋ ಎಂದ ಜಯ್ ಶಾ

ನವದೆಹಲಿ: ಇದೇ ಅಕ್ಟೊಬರ್ 3 ರಿಂದ 20ರ ವರೆಗೆ ನಡೆಯಲಿರುವ ಮಹಿಳಾ ಟಿ20 ಕ್ರಿಕೆಟ್ ಟೂರ್ನಿ ಬಾಂಗ್ಲಾದೇಶದಲ್ಲಿ ಆಯೋಜಿಸಲು ಚಿಂತನೆ ನಡೆಸಲಾಗಿತ್ತು. ಆದರೆ, ಬಾಂಗ್ಲಾದಲ್ಲಿನ ಉಧ್ವಿಘ್ನತೆ ಇದಕ್ಕೆ ಅಡ್ಡಿಯಾದ್ದರಿಂದ ಮಹಿಳಾ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಆತಿಥ್ಯವನ್ನು ವಹಿಸುವಂತೆ ಭಾರತಕ್ಕೆ ಐಸಿಸಿ ತಿಳಿಸಿತ್ತು ಆದರೆ ಈ ಮನವಿಯನ್ನು ನಿರಾಕರಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.

ಈ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಜಯ್ ಶಾ, ಐಸಿಸಿಯು ವುಮೆನ್ಸ್ ವಿಶ್ವಕಪ್ ಟೋರ್ನಿ ಆಯೋಜಿಸುತ್ತಿರಾ ಎಂದು ನಮ್ಮನು ಕೇಳಿತ್ತು ಅದನ್ನು ನಾವು ನಿರಾಕರಿಸಿದ್ದೇವೆ, ನಾವು ಆಯೋಜಿಸುವುದಿಲ್ಲ ಎಂದು ಹೇಳಿದ್ದೇವೆ ಎಂದು ತಿಳಿಸಿದರು.

ಇನ್ನು, ಇದೀಗಾ ಭಾರತದಲ್ಲಿ ಮುಂಗಾರು ಮಳೆಯಾಗುತ್ತಿದೆ ಮತ್ತು ನಾವು ಮುಂದಿನ ವರ್ಷ ಮಹಿಳಾ ಏಕದಿನ ವಿಶ್ವಕಪ್ ಆಯೋಜಿಸುತ್ತೇವೆ ಸತತ ವಿಶ್ವಕಪ್‌ಗಳನ್ನು ಆಯೋಜಿಸಲು ನಾವು ಇಚ್ಚಿಸುವುದಿಲ್ಲ ಎಂದಿದ್ದಾರೆ.

ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಿಗೊಳಿಸಿದ ನಂತರ ಬಾಂಗ್ಲಾದೇಶದಲ್ಲಿ ಹೆಚ್ಚಿನ ಹಿಂಸಾಚಾರ ಕಂಡುಬಂದಿದ್ದು ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ಭಾರತ ಬಾಂಗ್ಲಾದೇಶಕ್ಕೆ ಪ್ರಯಾಣಿಸದಂತೆ ಸಲಹೆಗಳನ್ನು ನೀಡಿವೆ.

ಮತ್ತೊಂದೆಡೆ ಬಾಂಗ್ಲಾದೇಶ ಟೆಸ್ಟ್ ತಂಡವು ಪ್ರಸ್ತುತ ಪಾಕಿಸ್ತಾನದಲ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ತಯಾರಿ ನಡೆಸುತ್ತಿದೆ, ತವರಿನಲ್ಲಿ ಹಿಂಸಾಚಾರವು ಆಟಗಾರರ ತಯಾರಿಗೆ ತೊಂದರೆ ಉಂಟು ಮಾಡುತ್ತಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

2 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

2 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

7 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

7 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

23 hours ago