ಕ್ರೀಡೆ

ಮೂರನೇ ಪಂದ್ಯದಲ್ಲಿಯೂ ಪ್ರಯೋಗ ಮುಂದುವರಿಸುತ್ತೇವೆ: ರಾಹುಲ್‌ ದ್ರಾವಿಡ್‌!

ಟ್ರಿನಿಡಾಡ್‌ (ವೆಸ್ಟ್ ಇಂಡೀಸ್‌): ವೆಸ್ಟ್ ಇಂಡೀಸ್‌ ವಿರುದ್ಧ ಮಂಗಳವಾರ ನಡೆಯುವ ಮೂರನೇ ಏಕದಿನ ಪಂದ್ಯದಲ್ಲಿಯೂ ಭಾರತ ತಂಡ ಪ್ರಯೋಗ ಮುಂದುವರಿಸಲಿದೆ ಎಂದು ಹೆಡ್‌ ಕೋಚ್‌ ರಾಹುಲ್‌ ದ್ರಾವಿಡ್‌ ತಿಳಿಸಿದ್ದಾರೆ. ಎರಡನೇ ಪಂದ್ಯದಲ್ಲಿ ವಿರಾಮ ತೆಗೆದುಕೊಂಡಿದ್ದ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಅಂತಿಮ ಕದನಕ್ಕೆ ಮರಳಲಿದ್ದಾರೆ.

ಮೊದಲನೇ ಪಂದ್ಯದಲ್ಲಿ 5 ವಿಕೆಟ್‌ಗಳಿಂದ ಗೆಲುವು ಪಡೆದಿದ್ದ ಭಾರತ ತಂಡ ಎರಡನೇ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿತ್ತು. ಇದರ ಪರಿಣಾಮ ಭಾರತ ತಂಡ 6 ವಿಕೆಟ್‌ಗಳಿಂದ ಸೋಲು ಅನುಭವಿಸಿತ್ತು. ಎರಡನೇ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ ಅವರು ವಿರಾಮ ಪಡೆಯುವ ಮೂಲಕ ತಮ್ಮ ಸ್ಥಾನಗಳನ್ನು ಸಂಜು ಸ್ಯಾಮ್ಸನ್‌ ಹಾಗೂ ಅಕ್ಷರ್‌ ಪಟೇಲ್‌ ಅವರಿಗೆ ನೀಡಿದ್ದರು.

ಆದರೆ, ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಇಶಾನ್‌ ಕಿಶನ್ ಹಾಗೂ ಶುಭಮನ್ ಗಿಲ್‌ ಹೊರತುಪಡಿಸಿ ಇನ್ನುಳಿದ ಬ್ಯಾಟ್ಸ್‌ಮನ್‌ಗಳು ವೈಫಲ್ಯ ಅನುಭವಿಸಿದ್ದರು. ಈ ಹಿನ್ನೆಲೆಯಲ್ಲಿ ಭಾರತ ತಂಡ ಪ್ರಥಮ ಇನಿಂಗ್ಸ್‌ಗಳಲ್ಲಿ 181 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು. ಬಳಿಕ ಗುರಿ ಹಿಂಬಾಲಿಸಿದ್ದ ವೆಸ್ಟ್ ಇಂಡೀಸ್‌ ತಂಡ, ಶೇಯ್‌ ಹೋಪ್‌ (63*) ಹಾಗೂ ಕೀಸಿ ಕಾರ್ಟಿ (48*) ಅವರ ಬ್ಯಾಟಿಂಗ್‌ ಬಲದಿಂದ 6 ವಿಕೆಟ್‌ ಗೆಲುವು ಪಡೆದಿತ್ತು.

ರಾಹುಲ್‌ ದ್ರಾವಿಡ್‌ ಹೇಳಿದ್ದೇನು?: ಈ ಪಂದ್ಯದ ಬಳಿಕ ಮಾತನಾಡಿದ್ದ ಟೀಮ್‌ ಇಂಡಿಯಾ ಹೆಡ್‌ ಕೋಚ್‌ ರಾಹುಲ್‌ ದ್ರಾವಿಡ್‌, ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಅವರಿಗೆ ವಿಶ್ರಾಂತಿ ನೀಡಿದ್ದ ನಿರ್ಧಾರವನ್ನು ಸಮರ್ಥಿಸಿಕೊಂಡರು. ಮುಂದಿನ ಏಷ್ಯಾ ಕಪ್‌ ಹಾಗೂ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಗಳವರೆಗೂ ಇದೇ ತಂತ್ರವನ್ನು ಟೀಮ್‌ ಮ್ಯಾನೇಜ್‌ಮೆಂಟ್‌ ಅನುಸರಿಸಲಿದೆ ಎಂದು ಹೇಳಿದ್ದಾರೆ.

“ನಾವು ಯಾವಗಲೂ ದೊಡ್ಡ ಚಿತ್ರಣವನ್ನು ನೋಡಲು ಬಯಸುತ್ತೇವೆ. ಏಕದಿನ ವಿಶ್ವಕಪ್‌, ಏಷ್ಯಾ ಕಪ್‌ ಟೂರ್ನಿಗಳ ಈ ಅವಧಿಯಲ್ಲಿ ನಮಗೆ ಕೆಲ ಗಾಯಗಳ ಸಮಸ್ಯೆ ಎದುರಾಗಿದೆ. ಈ ಕಾರಣದಿಂದಲೇ ನಾವು ದೊಡ್ಡ ಚಿತ್ರಣ ನೋಡಲು ಬಯಸುತ್ತಿದ್ದೇವೆ. ಕಳೆದ ಪಂದ್ಯಗಳಲ್ಲಿದ್ದ ಸಂಗತಿಗಳನ್ನೇ ನಾವು ಮುಂದಿನ ಪಂದ್ಯದಲ್ಲಿ ಅನುಸರಿಸುತ್ತೇವೆ. ಪ್ರತಿ ಪಂದ್ಯ ಹಾಗೂ ಪ್ರತಿಯೊಂದು ಸರಣಿಯ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಇದನ್ನು ನಾವು ಮಾಡಿದ್ದೇ ಆದಲ್ಲಿ, ನಾವು ಮತ್ತೆ ತಪ್ಪುಗಳನ್ನು ಮಾಡಬೇಕಾಗುತ್ತದೆ,” ಎಂದು ರಾಹುಲ್‌ ದ್ರಾವಿಡ್‌ ತಿಳಿಸಿದ್ದಾರೆ.

ಸತತ 9 ಪಂದ್ಯಗಳಲ್ಲಿ ಭಾರತ ತಂಡದ ವಿರುದ್ದ ಸೋಲು ಅನುಭವಿಸಿದ್ದ ವೆಸ್ಟ್ ಇಂಡೀಸ್‌ ತಂಡ 55 ತಿಂಗಳ ಬಳಿಕ ಮೊದಲ ಗೆಲುವು ಪಡದುಕೊಂಡಿದೆ. 2019ರಲ್ಲಿ ಚನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾರತ ವಿರುದ್ದ ವೆಸ್ಟ್ ಇಂಡೀಸ್‌ ತಂಡ 8 ವಿಕೆಟ್‌ಗಳ ಗೆಲುವು ಪಡದಿತ್ತು. ಇದಾದ ಬಳಿಕ ಸತತ 9ರಲ್ಲಿ ಸೋತಿದ್ದ ವಿಂಡೀಸ್‌ ಇದೀಗ ಗೆದ್ದು ಕಮ್‌ಬ್ಯಾಕ್‌ ಮಾಡಿದೆ.

3ನೇ ಒಡಿಐಗೆ ರೋಹಿತ್‌ ಶರ್ಮಾ-ವಿರಾಟ್‌ ಕೊಹ್ಲಿ : ಎರಡನೇ ಪಂದ್ಯದಲ್ಲಿ ವಿರಾಮ ಪಡೆದಿದ್ದ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಇಬ್ಬರೂ ಮೂರನೇ ಹಾಗೂ ನಿರ್ಣಾಯಕ ಪಂದ್ಯಕ್ಕೆ ಮರಳಲಿದ್ದಾರೆ. ಮೂರನೇ ಪಂದ್ಯದ ನಿಮಿತ್ತ ಮಾತನಾಡಿದ್ದ ಹಾರ್ದಿಕ್‌ ಪಾಂಡ್ಯ, “ಪ್ರಸ್ತುತ ನಾವು ಮೊಲ ಅಲ್ಲ, ಆಮೆಗತಿಯಲ್ಲಿ ಸಾಗುತ್ತಿದ್ದೇವೆ. ವಿಶ್ವಕಪ್‌ ಟೂರ್ನಿಯವರೆಗೂ ನಮ್ಮ ಎಲ್ಲ ತಂತ್ರಗಳು ನಡೆಯಲಿವೆ ಎಂದು ನಾನು ಭಾವಿಸುತ್ತೇನೆ. ನಾವು ನಮ್ಮ ಆಟಗಾರರನ್ನು ಪರೀಕ್ಷೆಗೆ ಒಳಪಡಿಸಿದ್ದೇವೆ, ಅದೇ ರೀತಿ ಎದುರಾಳಿ ತಂಡದ ಆಟಗಾರರು ಕೂಡ ಪರೀಕ್ಷೆಗೆ ಒಳಗಾಗಿದ್ದಾರೆ. ಈ ಕಾರಣದಿಂದಲೇ ಸರಣಿ 1-1 ಸಮಬಲವಾಗಿದೆ. ಮುಂದಿನ ಪಂದ್ಯ ತಂಬಾ ಉತ್ಸುಕತೆಯಿಂದ ಕೂಡಿರಲಿದೆ,” ಎಂದು ಹೇಳಿದ್ದಾರೆ.

andolanait

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

35 mins ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

13 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

13 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

13 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

13 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

14 hours ago