ಕ್ರೀಡೆ

ಮೂರನೇ ಪಂದ್ಯದಲ್ಲಿಯೂ ಪ್ರಯೋಗ ಮುಂದುವರಿಸುತ್ತೇವೆ: ರಾಹುಲ್‌ ದ್ರಾವಿಡ್‌!

ಟ್ರಿನಿಡಾಡ್‌ (ವೆಸ್ಟ್ ಇಂಡೀಸ್‌): ವೆಸ್ಟ್ ಇಂಡೀಸ್‌ ವಿರುದ್ಧ ಮಂಗಳವಾರ ನಡೆಯುವ ಮೂರನೇ ಏಕದಿನ ಪಂದ್ಯದಲ್ಲಿಯೂ ಭಾರತ ತಂಡ ಪ್ರಯೋಗ ಮುಂದುವರಿಸಲಿದೆ ಎಂದು ಹೆಡ್‌ ಕೋಚ್‌ ರಾಹುಲ್‌ ದ್ರಾವಿಡ್‌ ತಿಳಿಸಿದ್ದಾರೆ. ಎರಡನೇ ಪಂದ್ಯದಲ್ಲಿ ವಿರಾಮ ತೆಗೆದುಕೊಂಡಿದ್ದ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಅಂತಿಮ ಕದನಕ್ಕೆ ಮರಳಲಿದ್ದಾರೆ.

ಮೊದಲನೇ ಪಂದ್ಯದಲ್ಲಿ 5 ವಿಕೆಟ್‌ಗಳಿಂದ ಗೆಲುವು ಪಡೆದಿದ್ದ ಭಾರತ ತಂಡ ಎರಡನೇ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿತ್ತು. ಇದರ ಪರಿಣಾಮ ಭಾರತ ತಂಡ 6 ವಿಕೆಟ್‌ಗಳಿಂದ ಸೋಲು ಅನುಭವಿಸಿತ್ತು. ಎರಡನೇ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ ಅವರು ವಿರಾಮ ಪಡೆಯುವ ಮೂಲಕ ತಮ್ಮ ಸ್ಥಾನಗಳನ್ನು ಸಂಜು ಸ್ಯಾಮ್ಸನ್‌ ಹಾಗೂ ಅಕ್ಷರ್‌ ಪಟೇಲ್‌ ಅವರಿಗೆ ನೀಡಿದ್ದರು.

ಆದರೆ, ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಇಶಾನ್‌ ಕಿಶನ್ ಹಾಗೂ ಶುಭಮನ್ ಗಿಲ್‌ ಹೊರತುಪಡಿಸಿ ಇನ್ನುಳಿದ ಬ್ಯಾಟ್ಸ್‌ಮನ್‌ಗಳು ವೈಫಲ್ಯ ಅನುಭವಿಸಿದ್ದರು. ಈ ಹಿನ್ನೆಲೆಯಲ್ಲಿ ಭಾರತ ತಂಡ ಪ್ರಥಮ ಇನಿಂಗ್ಸ್‌ಗಳಲ್ಲಿ 181 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು. ಬಳಿಕ ಗುರಿ ಹಿಂಬಾಲಿಸಿದ್ದ ವೆಸ್ಟ್ ಇಂಡೀಸ್‌ ತಂಡ, ಶೇಯ್‌ ಹೋಪ್‌ (63*) ಹಾಗೂ ಕೀಸಿ ಕಾರ್ಟಿ (48*) ಅವರ ಬ್ಯಾಟಿಂಗ್‌ ಬಲದಿಂದ 6 ವಿಕೆಟ್‌ ಗೆಲುವು ಪಡೆದಿತ್ತು.

ರಾಹುಲ್‌ ದ್ರಾವಿಡ್‌ ಹೇಳಿದ್ದೇನು?: ಈ ಪಂದ್ಯದ ಬಳಿಕ ಮಾತನಾಡಿದ್ದ ಟೀಮ್‌ ಇಂಡಿಯಾ ಹೆಡ್‌ ಕೋಚ್‌ ರಾಹುಲ್‌ ದ್ರಾವಿಡ್‌, ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಅವರಿಗೆ ವಿಶ್ರಾಂತಿ ನೀಡಿದ್ದ ನಿರ್ಧಾರವನ್ನು ಸಮರ್ಥಿಸಿಕೊಂಡರು. ಮುಂದಿನ ಏಷ್ಯಾ ಕಪ್‌ ಹಾಗೂ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಗಳವರೆಗೂ ಇದೇ ತಂತ್ರವನ್ನು ಟೀಮ್‌ ಮ್ಯಾನೇಜ್‌ಮೆಂಟ್‌ ಅನುಸರಿಸಲಿದೆ ಎಂದು ಹೇಳಿದ್ದಾರೆ.

“ನಾವು ಯಾವಗಲೂ ದೊಡ್ಡ ಚಿತ್ರಣವನ್ನು ನೋಡಲು ಬಯಸುತ್ತೇವೆ. ಏಕದಿನ ವಿಶ್ವಕಪ್‌, ಏಷ್ಯಾ ಕಪ್‌ ಟೂರ್ನಿಗಳ ಈ ಅವಧಿಯಲ್ಲಿ ನಮಗೆ ಕೆಲ ಗಾಯಗಳ ಸಮಸ್ಯೆ ಎದುರಾಗಿದೆ. ಈ ಕಾರಣದಿಂದಲೇ ನಾವು ದೊಡ್ಡ ಚಿತ್ರಣ ನೋಡಲು ಬಯಸುತ್ತಿದ್ದೇವೆ. ಕಳೆದ ಪಂದ್ಯಗಳಲ್ಲಿದ್ದ ಸಂಗತಿಗಳನ್ನೇ ನಾವು ಮುಂದಿನ ಪಂದ್ಯದಲ್ಲಿ ಅನುಸರಿಸುತ್ತೇವೆ. ಪ್ರತಿ ಪಂದ್ಯ ಹಾಗೂ ಪ್ರತಿಯೊಂದು ಸರಣಿಯ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ಇದನ್ನು ನಾವು ಮಾಡಿದ್ದೇ ಆದಲ್ಲಿ, ನಾವು ಮತ್ತೆ ತಪ್ಪುಗಳನ್ನು ಮಾಡಬೇಕಾಗುತ್ತದೆ,” ಎಂದು ರಾಹುಲ್‌ ದ್ರಾವಿಡ್‌ ತಿಳಿಸಿದ್ದಾರೆ.

ಸತತ 9 ಪಂದ್ಯಗಳಲ್ಲಿ ಭಾರತ ತಂಡದ ವಿರುದ್ದ ಸೋಲು ಅನುಭವಿಸಿದ್ದ ವೆಸ್ಟ್ ಇಂಡೀಸ್‌ ತಂಡ 55 ತಿಂಗಳ ಬಳಿಕ ಮೊದಲ ಗೆಲುವು ಪಡದುಕೊಂಡಿದೆ. 2019ರಲ್ಲಿ ಚನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾರತ ವಿರುದ್ದ ವೆಸ್ಟ್ ಇಂಡೀಸ್‌ ತಂಡ 8 ವಿಕೆಟ್‌ಗಳ ಗೆಲುವು ಪಡದಿತ್ತು. ಇದಾದ ಬಳಿಕ ಸತತ 9ರಲ್ಲಿ ಸೋತಿದ್ದ ವಿಂಡೀಸ್‌ ಇದೀಗ ಗೆದ್ದು ಕಮ್‌ಬ್ಯಾಕ್‌ ಮಾಡಿದೆ.

3ನೇ ಒಡಿಐಗೆ ರೋಹಿತ್‌ ಶರ್ಮಾ-ವಿರಾಟ್‌ ಕೊಹ್ಲಿ : ಎರಡನೇ ಪಂದ್ಯದಲ್ಲಿ ವಿರಾಮ ಪಡೆದಿದ್ದ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಇಬ್ಬರೂ ಮೂರನೇ ಹಾಗೂ ನಿರ್ಣಾಯಕ ಪಂದ್ಯಕ್ಕೆ ಮರಳಲಿದ್ದಾರೆ. ಮೂರನೇ ಪಂದ್ಯದ ನಿಮಿತ್ತ ಮಾತನಾಡಿದ್ದ ಹಾರ್ದಿಕ್‌ ಪಾಂಡ್ಯ, “ಪ್ರಸ್ತುತ ನಾವು ಮೊಲ ಅಲ್ಲ, ಆಮೆಗತಿಯಲ್ಲಿ ಸಾಗುತ್ತಿದ್ದೇವೆ. ವಿಶ್ವಕಪ್‌ ಟೂರ್ನಿಯವರೆಗೂ ನಮ್ಮ ಎಲ್ಲ ತಂತ್ರಗಳು ನಡೆಯಲಿವೆ ಎಂದು ನಾನು ಭಾವಿಸುತ್ತೇನೆ. ನಾವು ನಮ್ಮ ಆಟಗಾರರನ್ನು ಪರೀಕ್ಷೆಗೆ ಒಳಪಡಿಸಿದ್ದೇವೆ, ಅದೇ ರೀತಿ ಎದುರಾಳಿ ತಂಡದ ಆಟಗಾರರು ಕೂಡ ಪರೀಕ್ಷೆಗೆ ಒಳಗಾಗಿದ್ದಾರೆ. ಈ ಕಾರಣದಿಂದಲೇ ಸರಣಿ 1-1 ಸಮಬಲವಾಗಿದೆ. ಮುಂದಿನ ಪಂದ್ಯ ತಂಬಾ ಉತ್ಸುಕತೆಯಿಂದ ಕೂಡಿರಲಿದೆ,” ಎಂದು ಹೇಳಿದ್ದಾರೆ.

andolanait

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

8 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

9 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

9 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

9 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

11 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

11 hours ago