ಕೋಲ್ಕತ್ತಾ : ಕಾಳ ಸಂತೆಯಲ್ಲಿ ಟಿಕೆಟ್ ಮಾರಾಟವಾಗುತ್ತಿದೆ ಎಂಬ ವದಂತಿಗಳು ಹಬ್ಬಿರುವ ಬೆನ್ನಿಗೇ, ಇಲ್ಲಿನ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿರುವ ಬಹು ನಿರೀಕ್ಷಿತ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯವನ್ನು ವೀಕ್ಷಿಸಲು ಪಡೆಯಲಾಗಿದ್ದ ನಾಲ್ಕು ಟಿಕೆಟ್ ಗಳನ್ನು ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ್ ಬೋಸ್ ಮರಳಿಸಿದ್ದಾರೆ ಎಂದು ರಾಜಭವನದ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದ ಟಿಕೆಟ್ ಅನ್ನು ಬಂಗಾಳ ಕ್ರಿಕೆಟ್ ಒಕ್ಕೂಟವು ರಾಜ್ಯಪಾಲರಿಗೆ ಒದಗಿಸಿತ್ತು.
“ರಾಜ್ಯಪಾಲರು ತಮಗೆ ದೊರೆತಿದ್ದ ಗೌರವದ ಟಿಕೆಟ್ ಗಳನ್ನು ಬಂಗಾಳ ಕ್ರಿಕೆಟ್ ಒಕ್ಕೂಟಕ್ಕೆ ಮರಳಿಸಿದ್ದಾರೆ. ಅವರು ರಾಜಭವನದಲ್ಲಿ ‘ಜನತಾ ಕ್ರೀಡಾಂಗಣ’ವನ್ನು ತೆರೆಯಲು ನಿರ್ಧರಿಸಿದ್ದು, ಅಲ್ಲಿ ಜನರು ಬೃಹತ್ ಪರದೆಯ ಮೇಲೆ ಪಂದ್ಯವನ್ನು ವೀಕ್ಷಿಸಬಹುದಾಗಿದೆ” ಎಂದು ರಾಜಭವನದ ಅಧಿಕಾರಿಯೊಬ್ಬರು PTI ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಮೊದಲು ಬಂದವರಿಗೆ ಆದ್ಯತೆ ಆಧಾರದಲ್ಲಿ ಒಟ್ಟು 500 ಮಂದಿಗೆ ಪಂದ್ಯವನ್ನು ವೀಕ್ಷಿಸಲು ಪ್ರವೇಶ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ರಾಜಭವನದ ಹುಲ್ಲುಹಾಸಿನ ಪ್ರವೇಶಕ್ಕೆ ಕ್ರಿಕೆಟ್ ಪ್ರೇಮಿಗಳು ಆನ್ ಲೈನ್ ನಲ್ಲೂ ಅರ್ಜಿ ಸಲ್ಲಿಸಬಹುದಾಗಿದೆ.
ರವಿವಾರ ನಡೆಯಲಿರುವ ಪಂದ್ಯದ ಟಿಕೆಟ್ ಗಳು ಕಾಳ ಸಂತೆಯಲ್ಲಿ ಮಾರಾಟವಾಗುತ್ತಿವೆ ಎಂಬ ಹಲವಾರು ದೂರುಗಳು ರಾಜಭವನದ ಕುಂದುಕೊರತೆ ಘಟಕಕ್ಕೆ ಬಂದ ಹಿನ್ನೆಲೆಯಲ್ಲಿ ರಾಜ್ಯಪಾಲ ಸಿ.ವಿ.ಆನಂದ್ ಬೋಸ್ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದೆ.
ನವೆಂಬರ್ 1ರಿಂದ ಇಲ್ಲಿಯವರೆಗೆ ಕಾನೂನುಬಾಹಿರವಾಗಿ ಟಿಕೆಟ್ ಮಾರಾಟ ಮಾಡುತ್ತಿದ್ದ 19 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…
ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…
‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…
ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…