ಕೋಲ್ಕತ್ತಾ : ಕಾಳ ಸಂತೆಯಲ್ಲಿ ಟಿಕೆಟ್ ಮಾರಾಟವಾಗುತ್ತಿದೆ ಎಂಬ ವದಂತಿಗಳು ಹಬ್ಬಿರುವ ಬೆನ್ನಿಗೇ, ಇಲ್ಲಿನ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿರುವ ಬಹು ನಿರೀಕ್ಷಿತ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯವನ್ನು ವೀಕ್ಷಿಸಲು ಪಡೆಯಲಾಗಿದ್ದ ನಾಲ್ಕು ಟಿಕೆಟ್ ಗಳನ್ನು ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ್ ಬೋಸ್ ಮರಳಿಸಿದ್ದಾರೆ ಎಂದು ರಾಜಭವನದ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದ ಟಿಕೆಟ್ ಅನ್ನು ಬಂಗಾಳ ಕ್ರಿಕೆಟ್ ಒಕ್ಕೂಟವು ರಾಜ್ಯಪಾಲರಿಗೆ ಒದಗಿಸಿತ್ತು.
“ರಾಜ್ಯಪಾಲರು ತಮಗೆ ದೊರೆತಿದ್ದ ಗೌರವದ ಟಿಕೆಟ್ ಗಳನ್ನು ಬಂಗಾಳ ಕ್ರಿಕೆಟ್ ಒಕ್ಕೂಟಕ್ಕೆ ಮರಳಿಸಿದ್ದಾರೆ. ಅವರು ರಾಜಭವನದಲ್ಲಿ ‘ಜನತಾ ಕ್ರೀಡಾಂಗಣ’ವನ್ನು ತೆರೆಯಲು ನಿರ್ಧರಿಸಿದ್ದು, ಅಲ್ಲಿ ಜನರು ಬೃಹತ್ ಪರದೆಯ ಮೇಲೆ ಪಂದ್ಯವನ್ನು ವೀಕ್ಷಿಸಬಹುದಾಗಿದೆ” ಎಂದು ರಾಜಭವನದ ಅಧಿಕಾರಿಯೊಬ್ಬರು PTI ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಮೊದಲು ಬಂದವರಿಗೆ ಆದ್ಯತೆ ಆಧಾರದಲ್ಲಿ ಒಟ್ಟು 500 ಮಂದಿಗೆ ಪಂದ್ಯವನ್ನು ವೀಕ್ಷಿಸಲು ಪ್ರವೇಶ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ರಾಜಭವನದ ಹುಲ್ಲುಹಾಸಿನ ಪ್ರವೇಶಕ್ಕೆ ಕ್ರಿಕೆಟ್ ಪ್ರೇಮಿಗಳು ಆನ್ ಲೈನ್ ನಲ್ಲೂ ಅರ್ಜಿ ಸಲ್ಲಿಸಬಹುದಾಗಿದೆ.
ರವಿವಾರ ನಡೆಯಲಿರುವ ಪಂದ್ಯದ ಟಿಕೆಟ್ ಗಳು ಕಾಳ ಸಂತೆಯಲ್ಲಿ ಮಾರಾಟವಾಗುತ್ತಿವೆ ಎಂಬ ಹಲವಾರು ದೂರುಗಳು ರಾಜಭವನದ ಕುಂದುಕೊರತೆ ಘಟಕಕ್ಕೆ ಬಂದ ಹಿನ್ನೆಲೆಯಲ್ಲಿ ರಾಜ್ಯಪಾಲ ಸಿ.ವಿ.ಆನಂದ್ ಬೋಸ್ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದೆ.
ನವೆಂಬರ್ 1ರಿಂದ ಇಲ್ಲಿಯವರೆಗೆ ಕಾನೂನುಬಾಹಿರವಾಗಿ ಟಿಕೆಟ್ ಮಾರಾಟ ಮಾಡುತ್ತಿದ್ದ 19 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…