ಕ್ರೀಡೆ

ಭಾರತ-ದಕ್ಷಿಣ ಆಫ್ರಿಕಾ ನಡುವಿನ ಕ್ರಿಕೆಟ್ ಪಂದ್ಯದ ಟಿಕೆಟ್ ಅನ್ನು ಮರಳಿಸಿದ ಪಶ್ಚಿಮ ಬಂಗಾಳ ರಾಜ್ಯಪಾಲ

ಕೋಲ್ಕತ್ತಾ : ಕಾಳ ಸಂತೆಯಲ್ಲಿ ಟಿಕೆಟ್ ಮಾರಾಟವಾಗುತ್ತಿದೆ ಎಂಬ ವದಂತಿಗಳು ಹಬ್ಬಿರುವ ಬೆನ್ನಿಗೇ, ಇಲ್ಲಿನ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿರುವ ಬಹು ನಿರೀಕ್ಷಿತ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯವನ್ನು ವೀಕ್ಷಿಸಲು ಪಡೆಯಲಾಗಿದ್ದ ನಾಲ್ಕು ಟಿಕೆಟ್ ಗಳನ್ನು ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ್ ಬೋಸ್ ಮರಳಿಸಿದ್ದಾರೆ ಎಂದು ರಾಜಭವನದ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದ ಟಿಕೆಟ್ ಅನ್ನು ಬಂಗಾಳ ಕ್ರಿಕೆಟ್ ಒಕ್ಕೂಟವು ರಾಜ್ಯಪಾಲರಿಗೆ ಒದಗಿಸಿತ್ತು.

“ರಾಜ್ಯಪಾಲರು ತಮಗೆ ದೊರೆತಿದ್ದ ಗೌರವದ ಟಿಕೆಟ್ ಗಳನ್ನು ಬಂಗಾಳ ಕ್ರಿಕೆಟ್ ಒಕ್ಕೂಟಕ್ಕೆ ಮರಳಿಸಿದ್ದಾರೆ. ಅವರು ರಾಜಭವನದಲ್ಲಿ ‘ಜನತಾ ಕ್ರೀಡಾಂಗಣ’ವನ್ನು ತೆರೆಯಲು ನಿರ್ಧರಿಸಿದ್ದು, ಅಲ್ಲಿ ಜನರು ಬೃಹತ್ ಪರದೆಯ ಮೇಲೆ ಪಂದ್ಯವನ್ನು ವೀಕ್ಷಿಸಬಹುದಾಗಿದೆ” ಎಂದು ರಾಜಭವನದ ಅಧಿಕಾರಿಯೊಬ್ಬರು PTI ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಮೊದಲು ಬಂದವರಿಗೆ ಆದ್ಯತೆ ಆಧಾರದಲ್ಲಿ ಒಟ್ಟು 500 ಮಂದಿಗೆ ಪಂದ್ಯವನ್ನು ವೀಕ್ಷಿಸಲು ಪ್ರವೇಶ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ರಾಜಭವನದ ಹುಲ್ಲುಹಾಸಿನ ಪ್ರವೇಶಕ್ಕೆ ಕ್ರಿಕೆಟ್ ಪ್ರೇಮಿಗಳು ಆನ್ ಲೈನ್ ನಲ್ಲೂ ಅರ್ಜಿ ಸಲ್ಲಿಸಬಹುದಾಗಿದೆ.

ರವಿವಾರ ನಡೆಯಲಿರುವ ಪಂದ್ಯದ ಟಿಕೆಟ್ ಗಳು ಕಾಳ ಸಂತೆಯಲ್ಲಿ ಮಾರಾಟವಾಗುತ್ತಿವೆ ಎಂಬ ಹಲವಾರು ದೂರುಗಳು ರಾಜಭವನದ ಕುಂದುಕೊರತೆ ಘಟಕಕ್ಕೆ ಬಂದ ಹಿನ್ನೆಲೆಯಲ್ಲಿ ರಾಜ್ಯಪಾಲ ಸಿ.ವಿ.ಆನಂದ್ ಬೋಸ್ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದೆ.

ನವೆಂಬರ್ 1ರಿಂದ ಇಲ್ಲಿಯವರೆಗೆ ಕಾನೂನುಬಾಹಿರವಾಗಿ ಟಿಕೆಟ್ ಮಾರಾಟ ಮಾಡುತ್ತಿದ್ದ 19 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

andolanait

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

2 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

6 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

7 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

7 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

11 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

12 hours ago