ಕ್ರೀಡೆ

ಭಾರತ-ದಕ್ಷಿಣ ಆಫ್ರಿಕಾ ನಡುವಿನ ಕ್ರಿಕೆಟ್ ಪಂದ್ಯದ ಟಿಕೆಟ್ ಅನ್ನು ಮರಳಿಸಿದ ಪಶ್ಚಿಮ ಬಂಗಾಳ ರಾಜ್ಯಪಾಲ

ಕೋಲ್ಕತ್ತಾ : ಕಾಳ ಸಂತೆಯಲ್ಲಿ ಟಿಕೆಟ್ ಮಾರಾಟವಾಗುತ್ತಿದೆ ಎಂಬ ವದಂತಿಗಳು ಹಬ್ಬಿರುವ ಬೆನ್ನಿಗೇ, ಇಲ್ಲಿನ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿರುವ ಬಹು ನಿರೀಕ್ಷಿತ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯವನ್ನು ವೀಕ್ಷಿಸಲು ಪಡೆಯಲಾಗಿದ್ದ ನಾಲ್ಕು ಟಿಕೆಟ್ ಗಳನ್ನು ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ್ ಬೋಸ್ ಮರಳಿಸಿದ್ದಾರೆ ಎಂದು ರಾಜಭವನದ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದ ಟಿಕೆಟ್ ಅನ್ನು ಬಂಗಾಳ ಕ್ರಿಕೆಟ್ ಒಕ್ಕೂಟವು ರಾಜ್ಯಪಾಲರಿಗೆ ಒದಗಿಸಿತ್ತು.

“ರಾಜ್ಯಪಾಲರು ತಮಗೆ ದೊರೆತಿದ್ದ ಗೌರವದ ಟಿಕೆಟ್ ಗಳನ್ನು ಬಂಗಾಳ ಕ್ರಿಕೆಟ್ ಒಕ್ಕೂಟಕ್ಕೆ ಮರಳಿಸಿದ್ದಾರೆ. ಅವರು ರಾಜಭವನದಲ್ಲಿ ‘ಜನತಾ ಕ್ರೀಡಾಂಗಣ’ವನ್ನು ತೆರೆಯಲು ನಿರ್ಧರಿಸಿದ್ದು, ಅಲ್ಲಿ ಜನರು ಬೃಹತ್ ಪರದೆಯ ಮೇಲೆ ಪಂದ್ಯವನ್ನು ವೀಕ್ಷಿಸಬಹುದಾಗಿದೆ” ಎಂದು ರಾಜಭವನದ ಅಧಿಕಾರಿಯೊಬ್ಬರು PTI ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಮೊದಲು ಬಂದವರಿಗೆ ಆದ್ಯತೆ ಆಧಾರದಲ್ಲಿ ಒಟ್ಟು 500 ಮಂದಿಗೆ ಪಂದ್ಯವನ್ನು ವೀಕ್ಷಿಸಲು ಪ್ರವೇಶ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ರಾಜಭವನದ ಹುಲ್ಲುಹಾಸಿನ ಪ್ರವೇಶಕ್ಕೆ ಕ್ರಿಕೆಟ್ ಪ್ರೇಮಿಗಳು ಆನ್ ಲೈನ್ ನಲ್ಲೂ ಅರ್ಜಿ ಸಲ್ಲಿಸಬಹುದಾಗಿದೆ.

ರವಿವಾರ ನಡೆಯಲಿರುವ ಪಂದ್ಯದ ಟಿಕೆಟ್ ಗಳು ಕಾಳ ಸಂತೆಯಲ್ಲಿ ಮಾರಾಟವಾಗುತ್ತಿವೆ ಎಂಬ ಹಲವಾರು ದೂರುಗಳು ರಾಜಭವನದ ಕುಂದುಕೊರತೆ ಘಟಕಕ್ಕೆ ಬಂದ ಹಿನ್ನೆಲೆಯಲ್ಲಿ ರಾಜ್ಯಪಾಲ ಸಿ.ವಿ.ಆನಂದ್ ಬೋಸ್ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದೆ.

ನವೆಂಬರ್ 1ರಿಂದ ಇಲ್ಲಿಯವರೆಗೆ ಕಾನೂನುಬಾಹಿರವಾಗಿ ಟಿಕೆಟ್ ಮಾರಾಟ ಮಾಡುತ್ತಿದ್ದ 19 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

andolanait

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

14 mins ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

17 mins ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

23 mins ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

29 mins ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

13 hours ago