ಕ್ರೀಡೆ

ಸಿರಾಜ್‌ ಬೌಲಿಂಗ್‌ಗೆ ವಿಂಡೀಸ್‌ ತತ್ತರ : ಮೊದಲ ಇನ್ನಿಂಗ್ಸ್‌ನಲ್ಲಿ  255ಕ್ಕೆ ಆಲೌಟ್‌

ಪೋರ್ಟ್ ಆಫ್ ಸ್ಪೇನ್: ಐದು ವಿಕೆಟ್ ಕಬಳಿಸಿದ ಮೊಹಮ್ಮದ್ ಸಿರಾಜ್ ದಾಳಿಗೆ ಸಿಲುಕಿದ ಅತಿಥೇಯ ವೆಸ್ಟ್‌ ಇಂಡೀಸ್ ಇಲ್ಲಿ ನಡೆಯುತ್ತಿರುವ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 115.4 ಓವರ್‌ಗಳಲ್ಲಿ 255 ರನ್‌ಗಳಿಗೆ ಆಲೌಟ್ ಆಗಿದೆ.

ಇದರೊಂದಿಗೆ ಟೀಮ್ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ 183 ರನ್‌ಗಳ ಮಹತ್ವದ ಮುನ್ನಡೆ ಗಳಿಸಿದೆ.

ಮೂರನೇ ದಿನದ ಅಂತ್ಯಕ್ಕೆ ವೆಸ್ಟ್ ಇಂಡೀಸ್ ಐದು ವಿಕೆಟ್ ನಷ್ಟಕ್ಕೆ 229 ರನ್ ಗಳಿಸಿತ್ತು. ಇಂದು ದಿಢೀರ್ ಪತನ ಕಂಡಿಲ್ಲತೆ ಉಳಿದ ಐದು ವಿಕೆಟ್‌ಗಳನ್ನು 26 ರನ್ ಅಂತರದಲ್ಲಿ ಕಳೆದುಕೊಂಡಿತು.

ಟೆಸ್ಟ್‌ ಕ್ರಿಕೆಟ್‌ನ ಇನಿಂಗ್ಸ್‌ ವೊಂದರಲ್ಲಿ ಜೀವನಶ್ರೇಷ್ಠ ಬೌಲಿಂಗ್‌ ಸಾಧನೆ ಮಾಡಿರುವ ಸಿರಾಜ್ 60 ರನ್ ನೀಡಿ ಐದು ವಿಕೆಟ್ ಕಿತ್ತು ಮಿಂಚಿದರು. ಚೊಚ್ಚಲ ಪಂದ್ಯ ಆಡುತ್ತಿರುವ ಮುಕೇಶ್ ಕುಮಾರ್ ಮತ್ತು ರವೀಂದ್ರ ಜಡೇಜ ತಲಾ ಎರಡು ವಿಕೆಟ್‌ ಕಬಳಿಸಿದರು.

ರೋಹಿತ್ 35 ಎಸೆತಗಳಲ್ಲಿ ಅರ್ಧಶತಕ 

ಬಳಿಕ ಎರಡನೇ ಇನಿಂಗ್ಸ್ ಆರಂಭಿಸಿರುವ ಭಾರತಕ್ಕೆ ನಾಯಕ ರೋಹಿತ್‌ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್‌ ಬಿರುಸಿನ ಆರಂಭವೊದಗಿಸಿದ್ದಾರೆ. ತಾಜಾ ವರದಿಯ ವೇಳೆಗೆ 12 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 98 ರನ್ ಗಳಿಸಿದೆ. ಈ ಮೂಲಕ ಒಟ್ಟು 275 ರನ್‌ಗಳ ಮುನ್ನಡೆ ಗಳಿಸಿದೆ. ನಾಯಕ ರೋಹಿತ್‌ ಶರ್ಮಾ ಕೇವಲ 35 ಎಸೆತಗಳಲ್ಲಿ ಅಜೇಯ ಅರ್ಧಶತಕ ಗಳಿಸಿ ಗೆಬ್ರಿಯಲ್‌ ಗೆ ವಿಕೆಟ್‌ ಒಪ್ಪಿಸಿದರು. ಜೈಸ್ವಾಲ್ 32 ರನ್ ಗಳಿಸಿದ್ದು ಕ್ರೀಸಿನಲ್ಲಿದ್ದಾರೆ.

andolanait

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

2 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

2 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

2 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

2 hours ago

ಆಂತರಿಕ ಕ್ಲೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

2 hours ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

2 hours ago