ಕ್ರೀಡೆ

ಸಿರಾಜ್‌ ಬೌಲಿಂಗ್‌ಗೆ ವಿಂಡೀಸ್‌ ತತ್ತರ : ಮೊದಲ ಇನ್ನಿಂಗ್ಸ್‌ನಲ್ಲಿ  255ಕ್ಕೆ ಆಲೌಟ್‌

ಪೋರ್ಟ್ ಆಫ್ ಸ್ಪೇನ್: ಐದು ವಿಕೆಟ್ ಕಬಳಿಸಿದ ಮೊಹಮ್ಮದ್ ಸಿರಾಜ್ ದಾಳಿಗೆ ಸಿಲುಕಿದ ಅತಿಥೇಯ ವೆಸ್ಟ್‌ ಇಂಡೀಸ್ ಇಲ್ಲಿ ನಡೆಯುತ್ತಿರುವ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 115.4 ಓವರ್‌ಗಳಲ್ಲಿ 255 ರನ್‌ಗಳಿಗೆ ಆಲೌಟ್ ಆಗಿದೆ.

ಇದರೊಂದಿಗೆ ಟೀಮ್ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ 183 ರನ್‌ಗಳ ಮಹತ್ವದ ಮುನ್ನಡೆ ಗಳಿಸಿದೆ.

ಮೂರನೇ ದಿನದ ಅಂತ್ಯಕ್ಕೆ ವೆಸ್ಟ್ ಇಂಡೀಸ್ ಐದು ವಿಕೆಟ್ ನಷ್ಟಕ್ಕೆ 229 ರನ್ ಗಳಿಸಿತ್ತು. ಇಂದು ದಿಢೀರ್ ಪತನ ಕಂಡಿಲ್ಲತೆ ಉಳಿದ ಐದು ವಿಕೆಟ್‌ಗಳನ್ನು 26 ರನ್ ಅಂತರದಲ್ಲಿ ಕಳೆದುಕೊಂಡಿತು.

ಟೆಸ್ಟ್‌ ಕ್ರಿಕೆಟ್‌ನ ಇನಿಂಗ್ಸ್‌ ವೊಂದರಲ್ಲಿ ಜೀವನಶ್ರೇಷ್ಠ ಬೌಲಿಂಗ್‌ ಸಾಧನೆ ಮಾಡಿರುವ ಸಿರಾಜ್ 60 ರನ್ ನೀಡಿ ಐದು ವಿಕೆಟ್ ಕಿತ್ತು ಮಿಂಚಿದರು. ಚೊಚ್ಚಲ ಪಂದ್ಯ ಆಡುತ್ತಿರುವ ಮುಕೇಶ್ ಕುಮಾರ್ ಮತ್ತು ರವೀಂದ್ರ ಜಡೇಜ ತಲಾ ಎರಡು ವಿಕೆಟ್‌ ಕಬಳಿಸಿದರು.

ರೋಹಿತ್ 35 ಎಸೆತಗಳಲ್ಲಿ ಅರ್ಧಶತಕ 

ಬಳಿಕ ಎರಡನೇ ಇನಿಂಗ್ಸ್ ಆರಂಭಿಸಿರುವ ಭಾರತಕ್ಕೆ ನಾಯಕ ರೋಹಿತ್‌ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್‌ ಬಿರುಸಿನ ಆರಂಭವೊದಗಿಸಿದ್ದಾರೆ. ತಾಜಾ ವರದಿಯ ವೇಳೆಗೆ 12 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 98 ರನ್ ಗಳಿಸಿದೆ. ಈ ಮೂಲಕ ಒಟ್ಟು 275 ರನ್‌ಗಳ ಮುನ್ನಡೆ ಗಳಿಸಿದೆ. ನಾಯಕ ರೋಹಿತ್‌ ಶರ್ಮಾ ಕೇವಲ 35 ಎಸೆತಗಳಲ್ಲಿ ಅಜೇಯ ಅರ್ಧಶತಕ ಗಳಿಸಿ ಗೆಬ್ರಿಯಲ್‌ ಗೆ ವಿಕೆಟ್‌ ಒಪ್ಪಿಸಿದರು. ಜೈಸ್ವಾಲ್ 32 ರನ್ ಗಳಿಸಿದ್ದು ಕ್ರೀಸಿನಲ್ಲಿದ್ದಾರೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago