ಪೋರ್ಟ್ ಆಫ್ ಸ್ಪೇನ್: ಐದು ವಿಕೆಟ್ ಕಬಳಿಸಿದ ಮೊಹಮ್ಮದ್ ಸಿರಾಜ್ ದಾಳಿಗೆ ಸಿಲುಕಿದ ಅತಿಥೇಯ ವೆಸ್ಟ್ ಇಂಡೀಸ್ ಇಲ್ಲಿ ನಡೆಯುತ್ತಿರುವ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 115.4 ಓವರ್ಗಳಲ್ಲಿ 255 ರನ್ಗಳಿಗೆ ಆಲೌಟ್ ಆಗಿದೆ.
ಇದರೊಂದಿಗೆ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ನಲ್ಲಿ 183 ರನ್ಗಳ ಮಹತ್ವದ ಮುನ್ನಡೆ ಗಳಿಸಿದೆ.
ಮೂರನೇ ದಿನದ ಅಂತ್ಯಕ್ಕೆ ವೆಸ್ಟ್ ಇಂಡೀಸ್ ಐದು ವಿಕೆಟ್ ನಷ್ಟಕ್ಕೆ 229 ರನ್ ಗಳಿಸಿತ್ತು. ಇಂದು ದಿಢೀರ್ ಪತನ ಕಂಡಿಲ್ಲತೆ ಉಳಿದ ಐದು ವಿಕೆಟ್ಗಳನ್ನು 26 ರನ್ ಅಂತರದಲ್ಲಿ ಕಳೆದುಕೊಂಡಿತು.
ಟೆಸ್ಟ್ ಕ್ರಿಕೆಟ್ನ ಇನಿಂಗ್ಸ್ ವೊಂದರಲ್ಲಿ ಜೀವನಶ್ರೇಷ್ಠ ಬೌಲಿಂಗ್ ಸಾಧನೆ ಮಾಡಿರುವ ಸಿರಾಜ್ 60 ರನ್ ನೀಡಿ ಐದು ವಿಕೆಟ್ ಕಿತ್ತು ಮಿಂಚಿದರು. ಚೊಚ್ಚಲ ಪಂದ್ಯ ಆಡುತ್ತಿರುವ ಮುಕೇಶ್ ಕುಮಾರ್ ಮತ್ತು ರವೀಂದ್ರ ಜಡೇಜ ತಲಾ ಎರಡು ವಿಕೆಟ್ ಕಬಳಿಸಿದರು.
ರೋಹಿತ್ 35 ಎಸೆತಗಳಲ್ಲಿ ಅರ್ಧಶತಕ
ಬಳಿಕ ಎರಡನೇ ಇನಿಂಗ್ಸ್ ಆರಂಭಿಸಿರುವ ಭಾರತಕ್ಕೆ ನಾಯಕ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಬಿರುಸಿನ ಆರಂಭವೊದಗಿಸಿದ್ದಾರೆ. ತಾಜಾ ವರದಿಯ ವೇಳೆಗೆ 12 ಓವರ್ಗಳಲ್ಲಿ 1 ವಿಕೆಟ್ ನಷ್ಟಕ್ಕೆ 98 ರನ್ ಗಳಿಸಿದೆ. ಈ ಮೂಲಕ ಒಟ್ಟು 275 ರನ್ಗಳ ಮುನ್ನಡೆ ಗಳಿಸಿದೆ. ನಾಯಕ ರೋಹಿತ್ ಶರ್ಮಾ ಕೇವಲ 35 ಎಸೆತಗಳಲ್ಲಿ ಅಜೇಯ ಅರ್ಧಶತಕ ಗಳಿಸಿ ಗೆಬ್ರಿಯಲ್ ಗೆ ವಿಕೆಟ್ ಒಪ್ಪಿಸಿದರು. ಜೈಸ್ವಾಲ್ 32 ರನ್ ಗಳಿಸಿದ್ದು ಕ್ರೀಸಿನಲ್ಲಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…