ಪೋರ್ಟ್ ಆಫ್ ಸ್ಪೇನ್: ಐದು ವಿಕೆಟ್ ಕಬಳಿಸಿದ ಮೊಹಮ್ಮದ್ ಸಿರಾಜ್ ದಾಳಿಗೆ ಸಿಲುಕಿದ ಅತಿಥೇಯ ವೆಸ್ಟ್ ಇಂಡೀಸ್ ಇಲ್ಲಿ ನಡೆಯುತ್ತಿರುವ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 115.4 ಓವರ್ಗಳಲ್ಲಿ 255 ರನ್ಗಳಿಗೆ ಆಲೌಟ್ ಆಗಿದೆ.
ಇದರೊಂದಿಗೆ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ನಲ್ಲಿ 183 ರನ್ಗಳ ಮಹತ್ವದ ಮುನ್ನಡೆ ಗಳಿಸಿದೆ.
ಮೂರನೇ ದಿನದ ಅಂತ್ಯಕ್ಕೆ ವೆಸ್ಟ್ ಇಂಡೀಸ್ ಐದು ವಿಕೆಟ್ ನಷ್ಟಕ್ಕೆ 229 ರನ್ ಗಳಿಸಿತ್ತು. ಇಂದು ದಿಢೀರ್ ಪತನ ಕಂಡಿಲ್ಲತೆ ಉಳಿದ ಐದು ವಿಕೆಟ್ಗಳನ್ನು 26 ರನ್ ಅಂತರದಲ್ಲಿ ಕಳೆದುಕೊಂಡಿತು.
ಟೆಸ್ಟ್ ಕ್ರಿಕೆಟ್ನ ಇನಿಂಗ್ಸ್ ವೊಂದರಲ್ಲಿ ಜೀವನಶ್ರೇಷ್ಠ ಬೌಲಿಂಗ್ ಸಾಧನೆ ಮಾಡಿರುವ ಸಿರಾಜ್ 60 ರನ್ ನೀಡಿ ಐದು ವಿಕೆಟ್ ಕಿತ್ತು ಮಿಂಚಿದರು. ಚೊಚ್ಚಲ ಪಂದ್ಯ ಆಡುತ್ತಿರುವ ಮುಕೇಶ್ ಕುಮಾರ್ ಮತ್ತು ರವೀಂದ್ರ ಜಡೇಜ ತಲಾ ಎರಡು ವಿಕೆಟ್ ಕಬಳಿಸಿದರು.
ರೋಹಿತ್ 35 ಎಸೆತಗಳಲ್ಲಿ ಅರ್ಧಶತಕ
ಬಳಿಕ ಎರಡನೇ ಇನಿಂಗ್ಸ್ ಆರಂಭಿಸಿರುವ ಭಾರತಕ್ಕೆ ನಾಯಕ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಬಿರುಸಿನ ಆರಂಭವೊದಗಿಸಿದ್ದಾರೆ. ತಾಜಾ ವರದಿಯ ವೇಳೆಗೆ 12 ಓವರ್ಗಳಲ್ಲಿ 1 ವಿಕೆಟ್ ನಷ್ಟಕ್ಕೆ 98 ರನ್ ಗಳಿಸಿದೆ. ಈ ಮೂಲಕ ಒಟ್ಟು 275 ರನ್ಗಳ ಮುನ್ನಡೆ ಗಳಿಸಿದೆ. ನಾಯಕ ರೋಹಿತ್ ಶರ್ಮಾ ಕೇವಲ 35 ಎಸೆತಗಳಲ್ಲಿ ಅಜೇಯ ಅರ್ಧಶತಕ ಗಳಿಸಿ ಗೆಬ್ರಿಯಲ್ ಗೆ ವಿಕೆಟ್ ಒಪ್ಪಿಸಿದರು. ಜೈಸ್ವಾಲ್ 32 ರನ್ ಗಳಿಸಿದ್ದು ಕ್ರೀಸಿನಲ್ಲಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…