ಕ್ರೀಡೆ

48 ವರ್ಷಗಳ ಇತಿಹಾಸದಲ್ಲೇ ಫಸ್ಟ್‌ ಟೈಂ ವಿಶ್ವಕಪ್‌ ಟೂರ್ನಿಯಿಂದಲೇ ವೆಸ್ಟ್‌ ಇಂಡೀಸ್‌ ಔಟ್‌

ಹರಾರೆ : 48 ವರ್ಷಗಳ ವಿಶ್ವಕಪ್‌ ಕ್ರಿಕೆಟ್‌ ಸುದೀರ್ಘ ಇತಿಹಾಸದಲ್ಲಿಯೇ ಮೊದಲ ಬಾರಿಗೆ ವಿಶ್ವಕಪ್ ಟೂರ್ನಿಯಿಂದ ವೆಸ್ಟ್ ಇಂಡೀಸ್ ತಂಡ ಔಟ್‌ ಆಗಿದೆ.

ಏಕದಿನ ವಿಶ್ವಕಪ್‍ನ ಅರ್ಹತೆ ಪಡೆಯಲು ನಡೆಯುತ್ತಿರುವ ಸೂಪರ್ ಸಿಕ್ಸ್‌ ಪಂದ್ಯದಲ್ಲಿ ಶನಿವಾರ ವೆಸ್ಟ್ ಇಂಡೀಸ್‌ ವಿರುದ್ಧ ಸ್ಕಾಟ್ಲೆಂಡ್ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಎರಡು ಬಾರಿ ಐಸಿಸಿ ಏಕದಿನ ವಿಶ್ವಕಪ್ ಚಾಂಪಿಯನ್ ಆಗಿರುವ ವೆಸ್ಟ್ ಇಂಡೀಸ್ ಸೋಲು ಕ್ರಿಕೆಟ್ ಅಭಿಮಾನಿಗಳನ್ನು ದಂಗುಬಡಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ವೆಸ್ಟ್ ಇಂಡೀಸ್ 43.5 ಓವರ್‌ಗಳಲ್ಲಿ ಕೇವಲ 181 ರನ್‌ಗಳಿಗೆ ಆಲೌಟ್‌ ಆಯ್ತು. ಸ್ಕಾಟ್ಲೆಂಡ್ ತಂಡ ಕೇವಲ 3 ವಿಕೆಟ್ ಕಳೆದುಕೊಂಡು 43.3 ಓವರ್‌ಗಳಲ್ಲಿ185 ರನ್‌ ಹೊಡೆಯುವ ಮೂಲಕ ಜಯ ಸಾಧಿಸಿತು.

ಸ್ಕಾಟ್ಲೆಂಡ್ ಪರ ಆಲ್‍ರೌಂಡರ್ ಆಟವಾಡಿದ ಬ್ರ್ಯಾಂಡನ್ ಮೆಕ್‍ಮುಲ್ಲೆನ್ ಬೌಲಿಂಗ್‍ನಲ್ಲಿ 3 ವಿಕೆಟ್ ಪಡೆದರೆ ಬ್ಯಾಟಿಂಗ್‍ನಲ್ಲಿ 69 ರನ್ ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡರು.

ಸ್ಕಾಟ್ಲೆಂಡ್ ವಿರುದ್ಧ ಸೋಲಿನೊಂದಿಗೆ ವೆಸ್ಟ್ ಇಂಡೀಸ್ ತಂಡವು ಸೂಪರ್ ಸಿಕ್ಸ್ ಹಂತದಲ್ಲೇ ಹೊರ ಬಿದ್ದಿದೆ. ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ 2017ರ ಚಾಂಪಿಯನ್ಸ್ ಟ್ರೋಫಿ ಮತ್ತು 2022ರ ಟಿ20 ವಿಶ್ವಕಪ್‍ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿತ್ತು.

1975 ಮತ್ತು 1979ರಲ್ಲಿ ಮೊದಲ ಎರಡು ಐಸಿಸಿ ವಿಶ್ವಕಪ್ ಟೂರ್ನಿಗಳಲ್ಲಿ ವೆಸ್ಟ್ ಇಂಡೀಸ್ ತಂಡ ಚಾಂಪಿಯನ್ ಆಗಿತ್ತು. ಅಲ್ಲದೇ 1983ರಲ್ಲಿ ರನ್ನರ್ ಅಪ್ ಕೂಡ ಆಗಿತ್ತು. ಒಟ್ಟಾರೆ ಇದೀಗ ಐಸಿಸಿ ಏಕದಿನ ವಿಶ್ವಕಪ್‍ನ 13ನೇ ಆವೃತ್ತಿಯಲ್ಲಿ ಅಂದರೆ 48 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ವೆಸ್ಟ್ ಇಂಡೀಸ್ ತಂಡವಿಲ್ಲದೇ ವಿಶ್ವಕಪ್ ಟೂರ್ನಿ ನಡೆಯಲಿದೆ.

lokesh

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

29 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

35 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

44 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago