ಕ್ರೀಡೆ

48 ವರ್ಷಗಳ ಇತಿಹಾಸದಲ್ಲೇ ಫಸ್ಟ್‌ ಟೈಂ ವಿಶ್ವಕಪ್‌ ಟೂರ್ನಿಯಿಂದಲೇ ವೆಸ್ಟ್‌ ಇಂಡೀಸ್‌ ಔಟ್‌

ಹರಾರೆ : 48 ವರ್ಷಗಳ ವಿಶ್ವಕಪ್‌ ಕ್ರಿಕೆಟ್‌ ಸುದೀರ್ಘ ಇತಿಹಾಸದಲ್ಲಿಯೇ ಮೊದಲ ಬಾರಿಗೆ ವಿಶ್ವಕಪ್ ಟೂರ್ನಿಯಿಂದ ವೆಸ್ಟ್ ಇಂಡೀಸ್ ತಂಡ ಔಟ್‌ ಆಗಿದೆ.

ಏಕದಿನ ವಿಶ್ವಕಪ್‍ನ ಅರ್ಹತೆ ಪಡೆಯಲು ನಡೆಯುತ್ತಿರುವ ಸೂಪರ್ ಸಿಕ್ಸ್‌ ಪಂದ್ಯದಲ್ಲಿ ಶನಿವಾರ ವೆಸ್ಟ್ ಇಂಡೀಸ್‌ ವಿರುದ್ಧ ಸ್ಕಾಟ್ಲೆಂಡ್ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಎರಡು ಬಾರಿ ಐಸಿಸಿ ಏಕದಿನ ವಿಶ್ವಕಪ್ ಚಾಂಪಿಯನ್ ಆಗಿರುವ ವೆಸ್ಟ್ ಇಂಡೀಸ್ ಸೋಲು ಕ್ರಿಕೆಟ್ ಅಭಿಮಾನಿಗಳನ್ನು ದಂಗುಬಡಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ವೆಸ್ಟ್ ಇಂಡೀಸ್ 43.5 ಓವರ್‌ಗಳಲ್ಲಿ ಕೇವಲ 181 ರನ್‌ಗಳಿಗೆ ಆಲೌಟ್‌ ಆಯ್ತು. ಸ್ಕಾಟ್ಲೆಂಡ್ ತಂಡ ಕೇವಲ 3 ವಿಕೆಟ್ ಕಳೆದುಕೊಂಡು 43.3 ಓವರ್‌ಗಳಲ್ಲಿ185 ರನ್‌ ಹೊಡೆಯುವ ಮೂಲಕ ಜಯ ಸಾಧಿಸಿತು.

ಸ್ಕಾಟ್ಲೆಂಡ್ ಪರ ಆಲ್‍ರೌಂಡರ್ ಆಟವಾಡಿದ ಬ್ರ್ಯಾಂಡನ್ ಮೆಕ್‍ಮುಲ್ಲೆನ್ ಬೌಲಿಂಗ್‍ನಲ್ಲಿ 3 ವಿಕೆಟ್ ಪಡೆದರೆ ಬ್ಯಾಟಿಂಗ್‍ನಲ್ಲಿ 69 ರನ್ ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡರು.

ಸ್ಕಾಟ್ಲೆಂಡ್ ವಿರುದ್ಧ ಸೋಲಿನೊಂದಿಗೆ ವೆಸ್ಟ್ ಇಂಡೀಸ್ ತಂಡವು ಸೂಪರ್ ಸಿಕ್ಸ್ ಹಂತದಲ್ಲೇ ಹೊರ ಬಿದ್ದಿದೆ. ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ 2017ರ ಚಾಂಪಿಯನ್ಸ್ ಟ್ರೋಫಿ ಮತ್ತು 2022ರ ಟಿ20 ವಿಶ್ವಕಪ್‍ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿತ್ತು.

1975 ಮತ್ತು 1979ರಲ್ಲಿ ಮೊದಲ ಎರಡು ಐಸಿಸಿ ವಿಶ್ವಕಪ್ ಟೂರ್ನಿಗಳಲ್ಲಿ ವೆಸ್ಟ್ ಇಂಡೀಸ್ ತಂಡ ಚಾಂಪಿಯನ್ ಆಗಿತ್ತು. ಅಲ್ಲದೇ 1983ರಲ್ಲಿ ರನ್ನರ್ ಅಪ್ ಕೂಡ ಆಗಿತ್ತು. ಒಟ್ಟಾರೆ ಇದೀಗ ಐಸಿಸಿ ಏಕದಿನ ವಿಶ್ವಕಪ್‍ನ 13ನೇ ಆವೃತ್ತಿಯಲ್ಲಿ ಅಂದರೆ 48 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ವೆಸ್ಟ್ ಇಂಡೀಸ್ ತಂಡವಿಲ್ಲದೇ ವಿಶ್ವಕಪ್ ಟೂರ್ನಿ ನಡೆಯಲಿದೆ.

lokesh

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

4 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

4 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

4 hours ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

4 hours ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

4 hours ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

4 hours ago