ಕ್ರೀಡೆ

48 ವರ್ಷಗಳ ಇತಿಹಾಸದಲ್ಲೇ ಫಸ್ಟ್‌ ಟೈಂ ವಿಶ್ವಕಪ್‌ ಟೂರ್ನಿಯಿಂದಲೇ ವೆಸ್ಟ್‌ ಇಂಡೀಸ್‌ ಔಟ್‌

ಹರಾರೆ : 48 ವರ್ಷಗಳ ವಿಶ್ವಕಪ್‌ ಕ್ರಿಕೆಟ್‌ ಸುದೀರ್ಘ ಇತಿಹಾಸದಲ್ಲಿಯೇ ಮೊದಲ ಬಾರಿಗೆ ವಿಶ್ವಕಪ್ ಟೂರ್ನಿಯಿಂದ ವೆಸ್ಟ್ ಇಂಡೀಸ್ ತಂಡ ಔಟ್‌ ಆಗಿದೆ.

ಏಕದಿನ ವಿಶ್ವಕಪ್‍ನ ಅರ್ಹತೆ ಪಡೆಯಲು ನಡೆಯುತ್ತಿರುವ ಸೂಪರ್ ಸಿಕ್ಸ್‌ ಪಂದ್ಯದಲ್ಲಿ ಶನಿವಾರ ವೆಸ್ಟ್ ಇಂಡೀಸ್‌ ವಿರುದ್ಧ ಸ್ಕಾಟ್ಲೆಂಡ್ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಎರಡು ಬಾರಿ ಐಸಿಸಿ ಏಕದಿನ ವಿಶ್ವಕಪ್ ಚಾಂಪಿಯನ್ ಆಗಿರುವ ವೆಸ್ಟ್ ಇಂಡೀಸ್ ಸೋಲು ಕ್ರಿಕೆಟ್ ಅಭಿಮಾನಿಗಳನ್ನು ದಂಗುಬಡಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ವೆಸ್ಟ್ ಇಂಡೀಸ್ 43.5 ಓವರ್‌ಗಳಲ್ಲಿ ಕೇವಲ 181 ರನ್‌ಗಳಿಗೆ ಆಲೌಟ್‌ ಆಯ್ತು. ಸ್ಕಾಟ್ಲೆಂಡ್ ತಂಡ ಕೇವಲ 3 ವಿಕೆಟ್ ಕಳೆದುಕೊಂಡು 43.3 ಓವರ್‌ಗಳಲ್ಲಿ185 ರನ್‌ ಹೊಡೆಯುವ ಮೂಲಕ ಜಯ ಸಾಧಿಸಿತು.

ಸ್ಕಾಟ್ಲೆಂಡ್ ಪರ ಆಲ್‍ರೌಂಡರ್ ಆಟವಾಡಿದ ಬ್ರ್ಯಾಂಡನ್ ಮೆಕ್‍ಮುಲ್ಲೆನ್ ಬೌಲಿಂಗ್‍ನಲ್ಲಿ 3 ವಿಕೆಟ್ ಪಡೆದರೆ ಬ್ಯಾಟಿಂಗ್‍ನಲ್ಲಿ 69 ರನ್ ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡರು.

ಸ್ಕಾಟ್ಲೆಂಡ್ ವಿರುದ್ಧ ಸೋಲಿನೊಂದಿಗೆ ವೆಸ್ಟ್ ಇಂಡೀಸ್ ತಂಡವು ಸೂಪರ್ ಸಿಕ್ಸ್ ಹಂತದಲ್ಲೇ ಹೊರ ಬಿದ್ದಿದೆ. ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ 2017ರ ಚಾಂಪಿಯನ್ಸ್ ಟ್ರೋಫಿ ಮತ್ತು 2022ರ ಟಿ20 ವಿಶ್ವಕಪ್‍ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿತ್ತು.

1975 ಮತ್ತು 1979ರಲ್ಲಿ ಮೊದಲ ಎರಡು ಐಸಿಸಿ ವಿಶ್ವಕಪ್ ಟೂರ್ನಿಗಳಲ್ಲಿ ವೆಸ್ಟ್ ಇಂಡೀಸ್ ತಂಡ ಚಾಂಪಿಯನ್ ಆಗಿತ್ತು. ಅಲ್ಲದೇ 1983ರಲ್ಲಿ ರನ್ನರ್ ಅಪ್ ಕೂಡ ಆಗಿತ್ತು. ಒಟ್ಟಾರೆ ಇದೀಗ ಐಸಿಸಿ ಏಕದಿನ ವಿಶ್ವಕಪ್‍ನ 13ನೇ ಆವೃತ್ತಿಯಲ್ಲಿ ಅಂದರೆ 48 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ವೆಸ್ಟ್ ಇಂಡೀಸ್ ತಂಡವಿಲ್ಲದೇ ವಿಶ್ವಕಪ್ ಟೂರ್ನಿ ನಡೆಯಲಿದೆ.

lokesh

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

22 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

22 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

22 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

22 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

22 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

22 hours ago