ಕ್ರೀಡೆ

ರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ವೆಸ್ಟ್ ಇಂಡೀಸ್: ಭಾರತಕ್ಕೆ ಸತತ 2ನೇ ಸೋಲು

ಗಾಯಾನಾ (ವೆಸ್ಟ್ ಇಂಡೀಸ್): ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಕ್ರೆಕೆಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲುತ್ತೆ ಎಂಬುದು ಪಕ್ಕಾ ಆಗಿತ್ತು. ಆದರೆ 15ನೇ ಓವರ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡುತ್ತಿದ್ದ ನಿಕೋಲಸ್ ಪೂರನ್ ವಿಕೆಟ್ ಪಡೆದ ಮುಕೇಶ್ ಕುಮಾರ್ ತಂಡಕ್ಕೆ ತಿರುವು ನೀಡಿದರು.

ಆ ಬಳಿಕ ಅಂದರೆ 16ನೇ ಓವರ್‌ ಬೌಲಿಂಗ್ ಮಾಡಲು ಬಂದ ಚಾಹಲ್, ರೊಮಾರಿಯೊ ಶೆಫರ್ಡ್ ರನೌಟ್, ಜೇಸನ್ ಹೋಲ್ಡರ್ ಸ್ಟಂಪಿಂಗ್ ಹಾಗೂ ಶಿಮ್ರಾನ್ ಹೆಟ್ಮೆಯರ್ ಎಲ್‌ಬಿ ಬಲೆಗೆ ಕೆಡವಿ ಪಂದ್ಯವನ್ನು ಟೀಂ ಇಂಡಿಯಾದತ್ತ ವಾಲಿಸಿ ಮತ್ತಷ್ಟು ರೋಚಕತೆಗೆ ತಂದಿಟ್ಟರು. ಈ ಓವರ್‌ನಲ್ಲಿ ಚಾಹಲ್ ಕೇವಲ 2 ರನ್ ನೀಡಿ ಪ್ರಮುಖ 2 ವಿಕೆಟ್ ಪಡೆದರು.

ಕೊನೆಗೆ ಅಕೇಲ್ ಹೊಸೇನ್‌ ಹಾಗೂ ಅಲ್ಜಾರಿ ಜೋಸೆಫ್ ಅವರು ಟೀಂ ಇಂಡಿಯಾ ಗೆಲ್ಲುವನ್ನು ಕಿತ್ತುಕೊಂಡರು. 18ನೇ ಓವರ್‌ನಲ್ಲಿ ಅರ್ಹಷದೀಪ್‌ ಅವರನ್ನು ಬೌಲಿಂಗ್‌ಗೆ ಇಳಿಸಿ ಹಾರ್ದಿಕ್ ಪಾಂಡ್ಯ ಕೈ ಸುಟ್ಟುಕೊಂಡಂತಾಯಿತು.

ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ವಿಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಿರಾಸೆ ಅನುಭವಿಸಿತು. ಆ ಮೂಲಕ ವಿಂಡೀಸ್ ವಿರುದ್ಧ ಸತತ ಎರಡನೇ ಸೋಲು ಕಂಡಿದೆ. ವಿಂಡೀಸ್ ವಿರುದ್ಧ ಟಿ20 ಕ್ರಿಕೆಟ್‌ನಲ್ಲಿ ಸತತವಾಗಿ 2 ಪಂದ್ಯಗಳಲ್ಲಿ ಸೋತಿರುವುದು 12 ವರ್ಷಗಳ ಬಳಿಕ ಇದೇ ಮೊದಲು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ತಿಲಕ್ ವರ್ಮಾ ಅವರ ಅರ್ಧ ಶತಕದ (51) ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 152 ರನ್ ಗಳಿಸಿತ್ತು. ವಿಂಡೀಸ್ ಪರ ರೊಮಾರಿಯೊ ಶೆಫರ್ಡ್, ಅಲ್ಜಾರಿ ಜೋಸೆಫ್ ಹಾಗೂ ಅಕೀಲ್ ಹೊಸೇನ್ ತಲಾ 2 ವಿಕೆಟ್ ಪಜೆದರು.

ಸಾಧಾರಣ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್ 18.5 ಓವರ್‌ಗಳಲ್ಲಿ ಇನ್ನೂ 2 ವಿಕೆಟ್ ಬಾಕಿ ಇರುವಂತೆ 155 ರನ್ ಸಿಡಿಸಿ ಗೆದ್ದು ಬೀಗಿತು. ವಿಂಡೀಸ್ ಪರ ನಿಕೋಲಸ್ ಪೂರನ್ ಅಬ್ಬರಿಸಿದರು. ಕೇವಲ 40 ಎಸೆತಗಳಲ್ಲಿ 67 ರನ್ ಸಿಡಿಸುವ ಮೂಲಕ ಆಕ್ರಮಣಕಾರಿ ಆಟವಾಡಿದರು. ಟೀಂ ಇಂಡಿಯಾ ಪರ ನಾಯಕ ಹಾರ್ದಿಕ್ ಪಾಂಡ್ಯ ಮೂರು ವಿಕೆಟ್ ಪಡೆದರೆ, ಚಾಹಲ್ 2, ಅರ್ಷದೀಪ್ ಹಾಗೂ ಮುಕೇಶ್ ಕುಮಾರ್ ತಲಾ 1 ವಿಕೆಟ್ ಕಿತ್ತರು. ಇದರೊಂದಿಗೆ ಐದು ಪಂದ್ಯಗಳ ಟಿ20 ಸರಣಿಯಲ್ಲಿ ವೆಸ್ಟ್ ಇಂಡೀಸ್ 2-0 ಅಂತರದ ಮುನ್ನಡೆ ಸಾಧಿಸಿದೆ.

ಪಂದ್ಯ ಶ್ರೇಷ್ಠ : ನಿಕೋಲಸ್‌ ಪೂರನ್‌

andolanait

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಲಕ್ಷಾಂತರ ತಂಗಿಯರ ಬದುಕನ್ನು ಹೊಲಿಯುವ ‘ಟೈಲರ್ ಅಣ್ಣʼ

ತಮಿಳುನಾಡಿನ ನಾಲ್ಕೂವರೆ ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸೆಲ್ವಕುಮಾರ್ ಹೊಲಿಗೆ ತರಬೇತಿ ಯೂಟ್ಯೂಬ್ ತೆರೆದು ಅದರಲ್ಲಿ ‘ಟೈಲರ್ ಬ್ರೋ’ ಎಂದು ಟೈಪಿಸಿದರೆ…

2 hours ago

ಮಡಿಕೇರಿ ನಗರದ ಅನಧಿಕೃತ ಹೋಂಸ್ಟೇಗಳಿಗೆ ನೋಟಿಸ್

ಪುನೀತ್ ಮಡಿಕೇರಿ ಮಡಿಕೇರಿ: ನಗರ ವ್ಯಾಪ್ತಿಯಲ್ಲಿರುವ ಅನಧಿಕೃತ ಮತ್ತು ಅಕ್ರಮ ಹೋಂಸ್ಟೇಗಳಿಗೆ ಕಡಿವಾಣ ಹಾಕಲು ನಗರಸಭೆ ಮುಂದಾಗಿದೆ. ನಗರದ ಹೋಂಸ್ಟೇಗಳಿಗೆ…

2 hours ago

ಮಿರ್ಲೆ: ಹುಣಸಮ್ಮ ತಾಯಿ ಸಿಡಿ ಉತ್ಸವಕ್ಕೆ ಸಕಲ ಸಿದ್ಧತೆ

ಕೆ.ಟಿ.ಮೋಹನ್ ಕುಮಾರ್ ಫೆ.೨೭ರಂದು ನವಗ್ರಾಮದೇವತೆ ಹುಣಸಮ್ಮತಾಯಿ ಸಿಡಿ ಉತ್ಸವ, ೨೮ರಂದು ರಥೋತ್ಸವ ಸಾಲಿಗ್ರಾಮ: ತಾಲ್ಲೂಕಿನ ಮಿರ್ಲೆ ಗ್ರಾಮದ ನವಗ್ರಾಮದೇವತೆ ಶ್ರೀ…

2 hours ago

ಮೊಬೈಲ್ ವ್ಯಸನ; ಕೊರೊನಾ ಸಂದರ್ಭ ಮೂಲ ಕಾರಣ

ಕೆ.ಎಸ್.ಚಂದ್ರಶೇಖರಮೂರ್ತಿ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ ಚಿಂತನೆಗೆ ಶಿಕ್ಷಕ ವೃಂದ ಸ್ವಾಗತ  ಮೈಸೂರು: ಆಧುನಿಕತೆ ಬೆಳೆಯುತ್ತಾ ಹೋದಂತೆ ಆಧುನಿಕ ತಂತ್ರಜನ…

2 hours ago

‘ಮೈಸೂರು ಮತ್ತೆ ಸ್ವಚ್ಛ ನಗರಿ ಗರಿ ಧರಿಸಬೇಕು’

ಪ್ರಶಾಂತ್ ಎನ್.ಮಲ್ಲಿಕ್ ಸ್ವಚ್ಛತಾ ರಾಯಭಾರಿಗಳ ಆಶಯ ; ‘ಸಾರ್ವಜನಿಕರ ಸಹಕಾರಕ್ಕೆ ಮನವಿ ಮಾಡಿದ ಹರಿಪ್ರಿಯಾ, ವಸಿಷ್ಠ ಸಿಂಹ, ಅನನ್ಯಾ ಭಟ್…

3 hours ago

ಸಫಾರಿ ಕಾಡಿನ ನಾಶಕ್ಕೆ ರಹದಾರಿ: ರೈತರ ಆರೋಪ

ಗಿರೀಶ್ ಹುಣಸೂರು ರೆಸಾರ್ಟ್‌ಗಳ ಮಾಲೀಕರ ಹಿತಾಸಕ್ತಿ ಕಾಪಾಡುವ ಹುನ್ನಾರ ಪ್ರವಾಸೋದ್ಯಮ ಅಭಿವೃದ್ಧಿ ಎಂಬುದು ನೆಪ ಇಂದು ಸಫಾರಿ ವಿರೋಧಿಸಿ ಪ್ರತಿಭಟನೆ …

3 hours ago