ಕ್ರೀಡೆ

ರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ವೆಸ್ಟ್ ಇಂಡೀಸ್: ಭಾರತಕ್ಕೆ ಸತತ 2ನೇ ಸೋಲು

ಗಾಯಾನಾ (ವೆಸ್ಟ್ ಇಂಡೀಸ್): ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಕ್ರೆಕೆಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲುತ್ತೆ ಎಂಬುದು ಪಕ್ಕಾ ಆಗಿತ್ತು. ಆದರೆ 15ನೇ ಓವರ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡುತ್ತಿದ್ದ ನಿಕೋಲಸ್ ಪೂರನ್ ವಿಕೆಟ್ ಪಡೆದ ಮುಕೇಶ್ ಕುಮಾರ್ ತಂಡಕ್ಕೆ ತಿರುವು ನೀಡಿದರು.

ಆ ಬಳಿಕ ಅಂದರೆ 16ನೇ ಓವರ್‌ ಬೌಲಿಂಗ್ ಮಾಡಲು ಬಂದ ಚಾಹಲ್, ರೊಮಾರಿಯೊ ಶೆಫರ್ಡ್ ರನೌಟ್, ಜೇಸನ್ ಹೋಲ್ಡರ್ ಸ್ಟಂಪಿಂಗ್ ಹಾಗೂ ಶಿಮ್ರಾನ್ ಹೆಟ್ಮೆಯರ್ ಎಲ್‌ಬಿ ಬಲೆಗೆ ಕೆಡವಿ ಪಂದ್ಯವನ್ನು ಟೀಂ ಇಂಡಿಯಾದತ್ತ ವಾಲಿಸಿ ಮತ್ತಷ್ಟು ರೋಚಕತೆಗೆ ತಂದಿಟ್ಟರು. ಈ ಓವರ್‌ನಲ್ಲಿ ಚಾಹಲ್ ಕೇವಲ 2 ರನ್ ನೀಡಿ ಪ್ರಮುಖ 2 ವಿಕೆಟ್ ಪಡೆದರು.

ಕೊನೆಗೆ ಅಕೇಲ್ ಹೊಸೇನ್‌ ಹಾಗೂ ಅಲ್ಜಾರಿ ಜೋಸೆಫ್ ಅವರು ಟೀಂ ಇಂಡಿಯಾ ಗೆಲ್ಲುವನ್ನು ಕಿತ್ತುಕೊಂಡರು. 18ನೇ ಓವರ್‌ನಲ್ಲಿ ಅರ್ಹಷದೀಪ್‌ ಅವರನ್ನು ಬೌಲಿಂಗ್‌ಗೆ ಇಳಿಸಿ ಹಾರ್ದಿಕ್ ಪಾಂಡ್ಯ ಕೈ ಸುಟ್ಟುಕೊಂಡಂತಾಯಿತು.

ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ವಿಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಿರಾಸೆ ಅನುಭವಿಸಿತು. ಆ ಮೂಲಕ ವಿಂಡೀಸ್ ವಿರುದ್ಧ ಸತತ ಎರಡನೇ ಸೋಲು ಕಂಡಿದೆ. ವಿಂಡೀಸ್ ವಿರುದ್ಧ ಟಿ20 ಕ್ರಿಕೆಟ್‌ನಲ್ಲಿ ಸತತವಾಗಿ 2 ಪಂದ್ಯಗಳಲ್ಲಿ ಸೋತಿರುವುದು 12 ವರ್ಷಗಳ ಬಳಿಕ ಇದೇ ಮೊದಲು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ತಿಲಕ್ ವರ್ಮಾ ಅವರ ಅರ್ಧ ಶತಕದ (51) ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 152 ರನ್ ಗಳಿಸಿತ್ತು. ವಿಂಡೀಸ್ ಪರ ರೊಮಾರಿಯೊ ಶೆಫರ್ಡ್, ಅಲ್ಜಾರಿ ಜೋಸೆಫ್ ಹಾಗೂ ಅಕೀಲ್ ಹೊಸೇನ್ ತಲಾ 2 ವಿಕೆಟ್ ಪಜೆದರು.

ಸಾಧಾರಣ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್ 18.5 ಓವರ್‌ಗಳಲ್ಲಿ ಇನ್ನೂ 2 ವಿಕೆಟ್ ಬಾಕಿ ಇರುವಂತೆ 155 ರನ್ ಸಿಡಿಸಿ ಗೆದ್ದು ಬೀಗಿತು. ವಿಂಡೀಸ್ ಪರ ನಿಕೋಲಸ್ ಪೂರನ್ ಅಬ್ಬರಿಸಿದರು. ಕೇವಲ 40 ಎಸೆತಗಳಲ್ಲಿ 67 ರನ್ ಸಿಡಿಸುವ ಮೂಲಕ ಆಕ್ರಮಣಕಾರಿ ಆಟವಾಡಿದರು. ಟೀಂ ಇಂಡಿಯಾ ಪರ ನಾಯಕ ಹಾರ್ದಿಕ್ ಪಾಂಡ್ಯ ಮೂರು ವಿಕೆಟ್ ಪಡೆದರೆ, ಚಾಹಲ್ 2, ಅರ್ಷದೀಪ್ ಹಾಗೂ ಮುಕೇಶ್ ಕುಮಾರ್ ತಲಾ 1 ವಿಕೆಟ್ ಕಿತ್ತರು. ಇದರೊಂದಿಗೆ ಐದು ಪಂದ್ಯಗಳ ಟಿ20 ಸರಣಿಯಲ್ಲಿ ವೆಸ್ಟ್ ಇಂಡೀಸ್ 2-0 ಅಂತರದ ಮುನ್ನಡೆ ಸಾಧಿಸಿದೆ.

ಪಂದ್ಯ ಶ್ರೇಷ್ಠ : ನಿಕೋಲಸ್‌ ಪೂರನ್‌

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

5 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

7 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

8 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

10 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

15 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

22 hours ago