ಕ್ರೀಡೆ

ರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ವೆಸ್ಟ್ ಇಂಡೀಸ್: ಭಾರತಕ್ಕೆ ಸತತ 2ನೇ ಸೋಲು

ಗಾಯಾನಾ (ವೆಸ್ಟ್ ಇಂಡೀಸ್): ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಕ್ರೆಕೆಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲುತ್ತೆ ಎಂಬುದು ಪಕ್ಕಾ ಆಗಿತ್ತು. ಆದರೆ 15ನೇ ಓವರ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡುತ್ತಿದ್ದ ನಿಕೋಲಸ್ ಪೂರನ್ ವಿಕೆಟ್ ಪಡೆದ ಮುಕೇಶ್ ಕುಮಾರ್ ತಂಡಕ್ಕೆ ತಿರುವು ನೀಡಿದರು.

ಆ ಬಳಿಕ ಅಂದರೆ 16ನೇ ಓವರ್‌ ಬೌಲಿಂಗ್ ಮಾಡಲು ಬಂದ ಚಾಹಲ್, ರೊಮಾರಿಯೊ ಶೆಫರ್ಡ್ ರನೌಟ್, ಜೇಸನ್ ಹೋಲ್ಡರ್ ಸ್ಟಂಪಿಂಗ್ ಹಾಗೂ ಶಿಮ್ರಾನ್ ಹೆಟ್ಮೆಯರ್ ಎಲ್‌ಬಿ ಬಲೆಗೆ ಕೆಡವಿ ಪಂದ್ಯವನ್ನು ಟೀಂ ಇಂಡಿಯಾದತ್ತ ವಾಲಿಸಿ ಮತ್ತಷ್ಟು ರೋಚಕತೆಗೆ ತಂದಿಟ್ಟರು. ಈ ಓವರ್‌ನಲ್ಲಿ ಚಾಹಲ್ ಕೇವಲ 2 ರನ್ ನೀಡಿ ಪ್ರಮುಖ 2 ವಿಕೆಟ್ ಪಡೆದರು.

ಕೊನೆಗೆ ಅಕೇಲ್ ಹೊಸೇನ್‌ ಹಾಗೂ ಅಲ್ಜಾರಿ ಜೋಸೆಫ್ ಅವರು ಟೀಂ ಇಂಡಿಯಾ ಗೆಲ್ಲುವನ್ನು ಕಿತ್ತುಕೊಂಡರು. 18ನೇ ಓವರ್‌ನಲ್ಲಿ ಅರ್ಹಷದೀಪ್‌ ಅವರನ್ನು ಬೌಲಿಂಗ್‌ಗೆ ಇಳಿಸಿ ಹಾರ್ದಿಕ್ ಪಾಂಡ್ಯ ಕೈ ಸುಟ್ಟುಕೊಂಡಂತಾಯಿತು.

ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ವಿಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಿರಾಸೆ ಅನುಭವಿಸಿತು. ಆ ಮೂಲಕ ವಿಂಡೀಸ್ ವಿರುದ್ಧ ಸತತ ಎರಡನೇ ಸೋಲು ಕಂಡಿದೆ. ವಿಂಡೀಸ್ ವಿರುದ್ಧ ಟಿ20 ಕ್ರಿಕೆಟ್‌ನಲ್ಲಿ ಸತತವಾಗಿ 2 ಪಂದ್ಯಗಳಲ್ಲಿ ಸೋತಿರುವುದು 12 ವರ್ಷಗಳ ಬಳಿಕ ಇದೇ ಮೊದಲು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ತಿಲಕ್ ವರ್ಮಾ ಅವರ ಅರ್ಧ ಶತಕದ (51) ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 152 ರನ್ ಗಳಿಸಿತ್ತು. ವಿಂಡೀಸ್ ಪರ ರೊಮಾರಿಯೊ ಶೆಫರ್ಡ್, ಅಲ್ಜಾರಿ ಜೋಸೆಫ್ ಹಾಗೂ ಅಕೀಲ್ ಹೊಸೇನ್ ತಲಾ 2 ವಿಕೆಟ್ ಪಜೆದರು.

ಸಾಧಾರಣ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್ 18.5 ಓವರ್‌ಗಳಲ್ಲಿ ಇನ್ನೂ 2 ವಿಕೆಟ್ ಬಾಕಿ ಇರುವಂತೆ 155 ರನ್ ಸಿಡಿಸಿ ಗೆದ್ದು ಬೀಗಿತು. ವಿಂಡೀಸ್ ಪರ ನಿಕೋಲಸ್ ಪೂರನ್ ಅಬ್ಬರಿಸಿದರು. ಕೇವಲ 40 ಎಸೆತಗಳಲ್ಲಿ 67 ರನ್ ಸಿಡಿಸುವ ಮೂಲಕ ಆಕ್ರಮಣಕಾರಿ ಆಟವಾಡಿದರು. ಟೀಂ ಇಂಡಿಯಾ ಪರ ನಾಯಕ ಹಾರ್ದಿಕ್ ಪಾಂಡ್ಯ ಮೂರು ವಿಕೆಟ್ ಪಡೆದರೆ, ಚಾಹಲ್ 2, ಅರ್ಷದೀಪ್ ಹಾಗೂ ಮುಕೇಶ್ ಕುಮಾರ್ ತಲಾ 1 ವಿಕೆಟ್ ಕಿತ್ತರು. ಇದರೊಂದಿಗೆ ಐದು ಪಂದ್ಯಗಳ ಟಿ20 ಸರಣಿಯಲ್ಲಿ ವೆಸ್ಟ್ ಇಂಡೀಸ್ 2-0 ಅಂತರದ ಮುನ್ನಡೆ ಸಾಧಿಸಿದೆ.

ಪಂದ್ಯ ಶ್ರೇಷ್ಠ : ನಿಕೋಲಸ್‌ ಪೂರನ್‌

andolanait

Recent Posts

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

7 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

8 hours ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

8 hours ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

9 hours ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

9 hours ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

10 hours ago