ಕ್ರೀಡೆ

ಟೀಂ ಇಂಡಿಯಾ ಯಾಕೆ ಐಸಿಸಿ ಟ್ರೋಫಿ ಗೆಲ್ಲುತ್ತಿಲ್ಲ: ಕಾರಣ ಹೇಳಿದ ಗಂಗೂಲಿ

ಮುಂಬೈ: ಟೀಂ ಇಂಡಿಯಾ ತಂಡವು 2013ರ ಬಳಿಕ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ಸತತ ಎರಡು ಬಾರಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಕೂಟದ ಫೈನಲ್ ತಲುಪಿದರೂ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಟೀಂ ಇಂಡಿಯಾದ ಟ್ರೋಫಿ ಬರದ ಬಗ್ಗೆ ಮಾಜಿ ನಾಯಕ ಸೌರವ್ ಗಂಗೂಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಭಾರತದ ವೈಫಲ್ಯಗಳಿಗೆ ಮಾನಸಿಕ ಒತ್ತಡಕ್ಕಿಂತ ಹೆಚ್ಚಾಗಿ ಯೋಜನೆಯ ಕಾರ್ಯಗತಗೊಳಿಸುವಲ್ಲಿನ ಕೊರತೆಯೇ ಕಾರಣ ಎಂದು ಗಂಗೂಲಿ ಹೇಳಿದ್ದಾರೆ.

“ನಾವು ನಿರ್ಣಾಯಕ ಹಂತಗಳಲ್ಲಿ ಕೆಲವೊಮ್ಮೆ ಉತ್ತಮವಾಗಿ ಕಾರ್ಯನಿರ್ವಹಿಸುವುದಿಲ್ಲ. ಇದು ಮಾನಸಿಕ ಒತ್ತಡ ಎಂದು ನಾನು ಭಾವಿಸುವುದಿಲ್ಲ, ಆದರೆ ಕಾರ್ಯಗತ ಮಾಡುವುದಕ್ಕೆ ಸಂಬಂಧಿಸಿದೆ. ಅವರು ಮಾನಸಿಕವಾಗಿ ಬಲವಾದ ಜನರು. ಆಶಾದಾಯಕವಾಗಿ, ಅವರು ಶೀಘ್ರದಲ್ಲೇ ಆ ಗೆರೆಯನ್ನು ದಾಟುತ್ತಾರೆ” ಎಂದು ಗಂಗೂಲಿ ಹೇಳಿದರು

ಭಾರತದಲ್ಲಿ ಏಕದಿನ ವಿಶ್ವಕಪ್ ನಡೆಯಲಿದ್ದು, ಈ ಬಾರಿಯೂ ತಂಡವನ್ನು ಗಡಿ ದಾಟಿಸುವ ಭರವಸೆಯನ್ನು ಗಂಗೂಲಿ ವ್ಯಕ್ತಪಡಿಸಿದ್ದಾರೆ.

ಹೌದು, ಯಾವಾಗಲೂ ಭರವಸೆಯಿದೆ. ಡಬ್ಲ್ಯೂಟಿಸಿ ಯ ಫೈನಲ್‌ಗೆ ನಾವು ಅರ್ಹತೆ ಪಡೆದಿದ್ದೇವೆ, ಅದು ಸಹ ಸಾಧನೆಯಾಗಿದೆ. ನಮಗೆ ವಿಶ್ವಕಪ್ ನಲ್ಲಿ ಅವಕಾಶವಿದೆ. ನಮ್ಮಲ್ಲಿ ಉತ್ತಮ ಆಟಗಾರರಿದ್ದಾರೆ, ಆಶಾದಾಯಕವಾಗಿ, ಈ ಬಾರಿ ವಿಶ್ವಕಪ್ ಗೆಲ್ಲುತ್ತೇವೆ” ಅವರು ಸೇರಿಸಿದರು.

2023ರ ಏಕದಿನ ವಿಶ್ವಕಪ್ ಕೂಟಕ್ಕೆ ಭಾರತ ಆತಿಥ್ಯ ವಹಿಸಿದೆ. ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಕೂಟವು ಭಾರತದ ಹತ್ತು ನಗರಗಳಲ್ಲಿ ನಡೆಯಲಿದೆ.

andolanait

Recent Posts

ಓದುಗರ ಪತ್ರ:  ಚರಂಡಿಯಲ್ಲಿ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…

54 seconds ago

ಓದುಗರ ಪತ್ರ:  ಸಾರ್ವಜನಿಕ ಶೌಚಾಲಯಗಳ ಬೀಗ ತೆರೆಯಿರಿ

ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…

14 mins ago

ಓದುಗರ ಪತ್ರ: ಅನಗತ್ಯ ಸಿಸೇರಿಯನ್: ಆಸ್ಪತ್ರೆಗಳ ವಿರುದ್ಧ ಕ್ರಮ ಸ್ವಾಗತಾರ್ಹ

ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ…

20 mins ago

ಪಂಜು ಗಂಗೊಳ್ಳಿ ವಾರದ ಅಂಕಣ: ವಿಕಲಾಂಗರ ಬದುಕಿಗೆ ಚಲನೆ ನೀಡುವ ಸಂದೀಪ್ ತಲ್ವಾರ್

ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್‌ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…

57 mins ago

ನವೆಂಬರ್‌ನಲ್ಲೇ 1.59 ಕೋಟಿ ರೂ ರಾಜಸ್ವ ಸಂಗ್ರಹ

ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…

3 hours ago

ಅದ್ದೂರಿಯಾಗಿ ನೆರವೇರಿದ ಶ್ರೀ ಮುತ್ತುರಾಯಸ್ವಾಮಿ ಜಾತ್ರೆ

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…

3 hours ago