ಕ್ರೀಡೆ

ಟೀಂ ಇಂಡಿಯಾ ಯಾಕೆ ಐಸಿಸಿ ಟ್ರೋಫಿ ಗೆಲ್ಲುತ್ತಿಲ್ಲ: ಕಾರಣ ಹೇಳಿದ ಗಂಗೂಲಿ

ಮುಂಬೈ: ಟೀಂ ಇಂಡಿಯಾ ತಂಡವು 2013ರ ಬಳಿಕ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ಸತತ ಎರಡು ಬಾರಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಕೂಟದ ಫೈನಲ್ ತಲುಪಿದರೂ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಟೀಂ ಇಂಡಿಯಾದ ಟ್ರೋಫಿ ಬರದ ಬಗ್ಗೆ ಮಾಜಿ ನಾಯಕ ಸೌರವ್ ಗಂಗೂಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಭಾರತದ ವೈಫಲ್ಯಗಳಿಗೆ ಮಾನಸಿಕ ಒತ್ತಡಕ್ಕಿಂತ ಹೆಚ್ಚಾಗಿ ಯೋಜನೆಯ ಕಾರ್ಯಗತಗೊಳಿಸುವಲ್ಲಿನ ಕೊರತೆಯೇ ಕಾರಣ ಎಂದು ಗಂಗೂಲಿ ಹೇಳಿದ್ದಾರೆ.

“ನಾವು ನಿರ್ಣಾಯಕ ಹಂತಗಳಲ್ಲಿ ಕೆಲವೊಮ್ಮೆ ಉತ್ತಮವಾಗಿ ಕಾರ್ಯನಿರ್ವಹಿಸುವುದಿಲ್ಲ. ಇದು ಮಾನಸಿಕ ಒತ್ತಡ ಎಂದು ನಾನು ಭಾವಿಸುವುದಿಲ್ಲ, ಆದರೆ ಕಾರ್ಯಗತ ಮಾಡುವುದಕ್ಕೆ ಸಂಬಂಧಿಸಿದೆ. ಅವರು ಮಾನಸಿಕವಾಗಿ ಬಲವಾದ ಜನರು. ಆಶಾದಾಯಕವಾಗಿ, ಅವರು ಶೀಘ್ರದಲ್ಲೇ ಆ ಗೆರೆಯನ್ನು ದಾಟುತ್ತಾರೆ” ಎಂದು ಗಂಗೂಲಿ ಹೇಳಿದರು

ಭಾರತದಲ್ಲಿ ಏಕದಿನ ವಿಶ್ವಕಪ್ ನಡೆಯಲಿದ್ದು, ಈ ಬಾರಿಯೂ ತಂಡವನ್ನು ಗಡಿ ದಾಟಿಸುವ ಭರವಸೆಯನ್ನು ಗಂಗೂಲಿ ವ್ಯಕ್ತಪಡಿಸಿದ್ದಾರೆ.

ಹೌದು, ಯಾವಾಗಲೂ ಭರವಸೆಯಿದೆ. ಡಬ್ಲ್ಯೂಟಿಸಿ ಯ ಫೈನಲ್‌ಗೆ ನಾವು ಅರ್ಹತೆ ಪಡೆದಿದ್ದೇವೆ, ಅದು ಸಹ ಸಾಧನೆಯಾಗಿದೆ. ನಮಗೆ ವಿಶ್ವಕಪ್ ನಲ್ಲಿ ಅವಕಾಶವಿದೆ. ನಮ್ಮಲ್ಲಿ ಉತ್ತಮ ಆಟಗಾರರಿದ್ದಾರೆ, ಆಶಾದಾಯಕವಾಗಿ, ಈ ಬಾರಿ ವಿಶ್ವಕಪ್ ಗೆಲ್ಲುತ್ತೇವೆ” ಅವರು ಸೇರಿಸಿದರು.

2023ರ ಏಕದಿನ ವಿಶ್ವಕಪ್ ಕೂಟಕ್ಕೆ ಭಾರತ ಆತಿಥ್ಯ ವಹಿಸಿದೆ. ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಕೂಟವು ಭಾರತದ ಹತ್ತು ನಗರಗಳಲ್ಲಿ ನಡೆಯಲಿದೆ.

andolanait

Recent Posts

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

46 seconds ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

4 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

6 mins ago

ಮಲೆ ಮಹದೇಶ್ವರ ಬೆಟ್ಟ| ಕಾಲ್ನಡಿಗೆ ಪಾದಯಾತ್ರಿಗಳಿಗೆ ಸೌಲಭ್ಯ ಕಲ್ಪಿಸಿ: ಡಿಸಿಎಂ ಡಿಕೆಶಿ ಸೂಚನೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…

10 mins ago

ಕೊಳ್ಳೇಗಾಲ: ಕೇರಳ ಲಾಟರಿ ಮಾರಾಟ: ವ್ಯಕ್ತಿಯ ಬಂಧನ

ಕೊಳ್ಳೇಗಾಲ: ಅಕ್ರಮವಾಗಿ ಕೇರಳ ಲಾಟರಿಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಗರ ಮಾಂಬಳ್ಳಿ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ಜರುಗಿದೆ.…

11 mins ago

ಸ್ವಚ್ಛತೆಗೆ ಮೈಸೂರಿನ ಮಾರ್ಗದರ್ಶನ!

ಕೆ.ಬಿ.ರಮೇಶನಾಯಕ ರಾಯಚೂರು, ಮಸ್ಕಿ ತಂಡಗಳಿಗೆ ತರಬೇತಿ; ಸ್ವಚ್ಛ ಶೆಹರ್ ಯೋಜನೆಯಡಿ ಒಡಂಬಡಿಕೆ ಮೈಸೂರು: ಸ್ವಚ್ಛತೆಯಲ್ಲಿ ಹಲವು ಬಾರಿ ದೇಶದ ಗಮನ…

13 mins ago