ಕ್ರೀಡೆ

ಟೀಂ ಇಂಡಿಯಾ ಯಾಕೆ ಐಸಿಸಿ ಟ್ರೋಫಿ ಗೆಲ್ಲುತ್ತಿಲ್ಲ: ಕಾರಣ ಹೇಳಿದ ಗಂಗೂಲಿ

ಮುಂಬೈ: ಟೀಂ ಇಂಡಿಯಾ ತಂಡವು 2013ರ ಬಳಿಕ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ಸತತ ಎರಡು ಬಾರಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಕೂಟದ ಫೈನಲ್ ತಲುಪಿದರೂ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಟೀಂ ಇಂಡಿಯಾದ ಟ್ರೋಫಿ ಬರದ ಬಗ್ಗೆ ಮಾಜಿ ನಾಯಕ ಸೌರವ್ ಗಂಗೂಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಭಾರತದ ವೈಫಲ್ಯಗಳಿಗೆ ಮಾನಸಿಕ ಒತ್ತಡಕ್ಕಿಂತ ಹೆಚ್ಚಾಗಿ ಯೋಜನೆಯ ಕಾರ್ಯಗತಗೊಳಿಸುವಲ್ಲಿನ ಕೊರತೆಯೇ ಕಾರಣ ಎಂದು ಗಂಗೂಲಿ ಹೇಳಿದ್ದಾರೆ.

“ನಾವು ನಿರ್ಣಾಯಕ ಹಂತಗಳಲ್ಲಿ ಕೆಲವೊಮ್ಮೆ ಉತ್ತಮವಾಗಿ ಕಾರ್ಯನಿರ್ವಹಿಸುವುದಿಲ್ಲ. ಇದು ಮಾನಸಿಕ ಒತ್ತಡ ಎಂದು ನಾನು ಭಾವಿಸುವುದಿಲ್ಲ, ಆದರೆ ಕಾರ್ಯಗತ ಮಾಡುವುದಕ್ಕೆ ಸಂಬಂಧಿಸಿದೆ. ಅವರು ಮಾನಸಿಕವಾಗಿ ಬಲವಾದ ಜನರು. ಆಶಾದಾಯಕವಾಗಿ, ಅವರು ಶೀಘ್ರದಲ್ಲೇ ಆ ಗೆರೆಯನ್ನು ದಾಟುತ್ತಾರೆ” ಎಂದು ಗಂಗೂಲಿ ಹೇಳಿದರು

ಭಾರತದಲ್ಲಿ ಏಕದಿನ ವಿಶ್ವಕಪ್ ನಡೆಯಲಿದ್ದು, ಈ ಬಾರಿಯೂ ತಂಡವನ್ನು ಗಡಿ ದಾಟಿಸುವ ಭರವಸೆಯನ್ನು ಗಂಗೂಲಿ ವ್ಯಕ್ತಪಡಿಸಿದ್ದಾರೆ.

ಹೌದು, ಯಾವಾಗಲೂ ಭರವಸೆಯಿದೆ. ಡಬ್ಲ್ಯೂಟಿಸಿ ಯ ಫೈನಲ್‌ಗೆ ನಾವು ಅರ್ಹತೆ ಪಡೆದಿದ್ದೇವೆ, ಅದು ಸಹ ಸಾಧನೆಯಾಗಿದೆ. ನಮಗೆ ವಿಶ್ವಕಪ್ ನಲ್ಲಿ ಅವಕಾಶವಿದೆ. ನಮ್ಮಲ್ಲಿ ಉತ್ತಮ ಆಟಗಾರರಿದ್ದಾರೆ, ಆಶಾದಾಯಕವಾಗಿ, ಈ ಬಾರಿ ವಿಶ್ವಕಪ್ ಗೆಲ್ಲುತ್ತೇವೆ” ಅವರು ಸೇರಿಸಿದರು.

2023ರ ಏಕದಿನ ವಿಶ್ವಕಪ್ ಕೂಟಕ್ಕೆ ಭಾರತ ಆತಿಥ್ಯ ವಹಿಸಿದೆ. ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಕೂಟವು ಭಾರತದ ಹತ್ತು ನಗರಗಳಲ್ಲಿ ನಡೆಯಲಿದೆ.

andolanait

Recent Posts

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

32 mins ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

1 hour ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

1 hour ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

2 hours ago

ಅಮೇರಿಕಾಗೆ ಬಿಗ್‌ ಶಾಕ್‌ ಕೊಟ್ಟ ಇರಾನ್‌

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇರಾನ್‌ ಮಿಲಿಟರಿ ಪಡೆಗಳು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ…

2 hours ago

ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ: ಶೇಖ್‌ ಹಸೀನಾ

ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾ ಹೇಳಿದ್ದಾರೆ. ಈ ಬಗ್ಗೆ…

3 hours ago